<p><strong>ಬೀದರ್:</strong> ಜಿಲ್ಲೆಯ ಜನರಿಗೆ ಭಾನುವಾರ ಸೂರ್ಯದೇವ ದರ್ಶನ ನೀಡಲಿಲ್ಲ. ಬೆಳಗಿನ ಜಾವ ಸುರಿಯಲು ಆರಂಭಿಸಿದ್ದ ಮಂಜು ಬೆಳಿಗ್ಗೆ 10 ಗಂಟೆಯಾದರೂ ಕಡಿಮೆಯಾಗಿರಲಿಲ್ಲ. ದಿನವೀಡಿ ಮಂಜು ಮುಸುಕಿದ ವಾತಾವಾರಣ ಸೃಷ್ಟಿಯಾಗಿತ್ತು.</p>.<p>ಚಳಿ ಹಾಗೂ ಮಂಜಿನ ಕಾಟಕ್ಕೆ ಜನ ಮನೆಗಳಿಂದ ಹೊರ ಬರಲಿಲ್ಲ. ಬೆಳಿಗ್ಗೆ ವಾಯು ವಿವಾರಕ್ಕೆ ಹೋಗುವ ಮಹಿಳೆಯರು, ವೃದ್ಧರು, ಯುವಕರು ಮಂಜಿನ ಕಾರಣ ವ್ಯಾಯಾಮಕ್ಕೆ ವಿರಾಮ ನೀಡಬೇಕಾಯಿತು. ವಿಪರೀತ ಚಳಿಗೆ ಬೆಳಗಿನ ಜಾವ ಜಾನುವಾರಗಳೂ ನರಳಾಡಿದವು.</p>.<p>ರಸ್ತೆ ಯುದ್ದಕ್ಕೂ ಮಂಜು ಆವರಿಸಿದ ಕಾರಣ ಯಾರೇ ಇದ್ದರೂ ನಿಖರವಾಗಿ ಗೋಚರಿಸಲು ಆಗಲಿಲ್ಲ. ವಾಹನಗಳು ಲೈಟ್ ಹಾಕಿಕೊಂಡು ನಿಧಾನವಾಗಿ ಸಾಗಿದವು, ಹಾಲು, ದಿನಪತ್ರಿಕೆಗಳು ಹಾಗೂ ತರಕಾರಿ ತಡಮಾಡಿ ತಲುಪಿದವು.</p>.<p>ಮನೆಗಳ ಬಾಗಿಲು, ಕಿಟಕಿಗಳು ಮುಚ್ಚಿದ್ದರೂ ಚಳಿ ಮಾತ್ರ ಕಡಿಮೆಯಾಗಿರಲಿಲ್ಲ. ಮಕ್ಕಳು ಬಹಳ ಹೊತ್ತಿನ ವರೆಗೂ ಹಾಸಿಗೆಯಲ್ಲೇ ಮಲಗಿದ್ದರು. ಬಹುತೇಕ ಜನ ಸ್ವೇಟರ್ ಹಾಗೂ ಟೊಪ್ಪಿಗೆ ಧರಿಸಿ ಚಳಿಯಿಂದ ರಕ್ಷಿಸಿಕೊಳ್ಳಲು ಪ್ರಯತ್ನಿಸಿದರು.</p>.<p>ಕಾಯಿಲೆ ಇದ್ದವರು ಹಾಗೂ ಅಸ್ತಮಾ ರೋಗಿಗಳು ಚಳಿಯಿಂದಾಗಿ ಹಿಂಸೆ ಅನುಭವಿಸಬೇಕಾಯಿತು. ಚಳಿ ಹಾಗೂ ವಾರಾಂತ್ಯದ ಕರ್ಫ್ಯೂದಿಂಗಾಗಿ ಬೆಳಿಗ್ಗೆ 11 ಗಂಟೆ ವರೆಗೂ ಮಾರುಕಟ್ಟೆಯಲ್ಲಿ ಅಂಗಡಿಗಳು ತೆರೆದಿರಲಿಲ್ಲ. ಮಾರುಕಟ್ಟೆ ಪ್ರದೇಶದಲ್ಲಿ ಜನ ಸಂಚಾರ ವಿರಳವಾಗಿತ್ತು.</p>.<p>ವಾರಾಂತ್ಯದ ಕರ್ಫ್ಯೂ ಕಾರಣ ಹೋಟೆಲ್ಗಳಲ್ಲಿ ಉಪಾಹಾರದ ಪಾರ್ಸೆಲ್ ಮಾತ್ರ ಲಭಿಸುತ್ತಿತ್ತು. ಆದರೆ, ಚಹಾ, ಕಾಫಿ ಇರಲಿಲ್ಲ. ಬೀದಿಗಳಲ್ಲಿ ಚಹಾ ಅಂಗಡಿಗಳು ತೆರೆದಿರಲಿಲ್ಲ. ಹೀಗಾಗಿ ಬೆಳಗಿನ ಜಾವ ಕೆಲಸ ಮಾಡುವವರು ಮೈಕೊರೆಯುವ ಚಳಿಯಿಂದ ತೊಂದರೆ ಅನುಭವಿಸಬೇಕಾಯಿತು.</p>.<p class="Subhead"><strong>ಭಾಸವಾಗದ ಕರ್ಫ್ಯೂ:</strong></p>.<p>ಚಳಿಯ ಕಾರಣ ವಾರಾಂತ್ಯ ಕರ್ಫ್ಯೂ ಭಾಸವಾಗಲಿಲ್ಲ. ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಕಡಿಮೆ ಇತ್ತು. ಕೇಂದ್ರ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಪ್ರಯಾಣಿಕರು ಇದ್ದರು. ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚರಿಸಲಿಲ್ಲ. ನಿಲ್ದಾಣದ ಬಳಿ ಕೆಲವರು ಕಾಗದದ ಕಸಕ್ಕೆ ಬೆಂಕಿ ಹಚ್ಚಿ ಕಾಯಿಸಿಕೊಂಡರು.</p>.<p>ಕಿರಾಣಿ, ಮೆಡಿಕಲ್ ಶಾಪ್, ಹಾಲಿನ ಅಂಗಡಿ, ತರಕಾರಿ ಅಂಗಡಿಗಳು ಮಾತ್ರ ತೆರೆದುಕೊಂಡಿದ್ದವು. ಗ್ರಾಹಕರ ಬಾರದ ಕಾರಣ ಮಧ್ಯಾಹ್ನದ ವೇಳೆ ಅವೂ ಸಹ ಮುಚ್ಚಿದ್ದವು. ಸಂಜೆ ಸ್ವಲ್ಪ ತೆರೆದುಕೊಂಡರೂ ಬಹಳ ಹೊತ್ತಿನ ವರೆಗೆ ಬಾಗಿಲು ತೆರೆದುಕೊಂಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲೆಯ ಜನರಿಗೆ ಭಾನುವಾರ ಸೂರ್ಯದೇವ ದರ್ಶನ ನೀಡಲಿಲ್ಲ. ಬೆಳಗಿನ ಜಾವ ಸುರಿಯಲು ಆರಂಭಿಸಿದ್ದ ಮಂಜು ಬೆಳಿಗ್ಗೆ 10 ಗಂಟೆಯಾದರೂ ಕಡಿಮೆಯಾಗಿರಲಿಲ್ಲ. ದಿನವೀಡಿ ಮಂಜು ಮುಸುಕಿದ ವಾತಾವಾರಣ ಸೃಷ್ಟಿಯಾಗಿತ್ತು.</p>.<p>ಚಳಿ ಹಾಗೂ ಮಂಜಿನ ಕಾಟಕ್ಕೆ ಜನ ಮನೆಗಳಿಂದ ಹೊರ ಬರಲಿಲ್ಲ. ಬೆಳಿಗ್ಗೆ ವಾಯು ವಿವಾರಕ್ಕೆ ಹೋಗುವ ಮಹಿಳೆಯರು, ವೃದ್ಧರು, ಯುವಕರು ಮಂಜಿನ ಕಾರಣ ವ್ಯಾಯಾಮಕ್ಕೆ ವಿರಾಮ ನೀಡಬೇಕಾಯಿತು. ವಿಪರೀತ ಚಳಿಗೆ ಬೆಳಗಿನ ಜಾವ ಜಾನುವಾರಗಳೂ ನರಳಾಡಿದವು.</p>.<p>ರಸ್ತೆ ಯುದ್ದಕ್ಕೂ ಮಂಜು ಆವರಿಸಿದ ಕಾರಣ ಯಾರೇ ಇದ್ದರೂ ನಿಖರವಾಗಿ ಗೋಚರಿಸಲು ಆಗಲಿಲ್ಲ. ವಾಹನಗಳು ಲೈಟ್ ಹಾಕಿಕೊಂಡು ನಿಧಾನವಾಗಿ ಸಾಗಿದವು, ಹಾಲು, ದಿನಪತ್ರಿಕೆಗಳು ಹಾಗೂ ತರಕಾರಿ ತಡಮಾಡಿ ತಲುಪಿದವು.</p>.<p>ಮನೆಗಳ ಬಾಗಿಲು, ಕಿಟಕಿಗಳು ಮುಚ್ಚಿದ್ದರೂ ಚಳಿ ಮಾತ್ರ ಕಡಿಮೆಯಾಗಿರಲಿಲ್ಲ. ಮಕ್ಕಳು ಬಹಳ ಹೊತ್ತಿನ ವರೆಗೂ ಹಾಸಿಗೆಯಲ್ಲೇ ಮಲಗಿದ್ದರು. ಬಹುತೇಕ ಜನ ಸ್ವೇಟರ್ ಹಾಗೂ ಟೊಪ್ಪಿಗೆ ಧರಿಸಿ ಚಳಿಯಿಂದ ರಕ್ಷಿಸಿಕೊಳ್ಳಲು ಪ್ರಯತ್ನಿಸಿದರು.</p>.<p>ಕಾಯಿಲೆ ಇದ್ದವರು ಹಾಗೂ ಅಸ್ತಮಾ ರೋಗಿಗಳು ಚಳಿಯಿಂದಾಗಿ ಹಿಂಸೆ ಅನುಭವಿಸಬೇಕಾಯಿತು. ಚಳಿ ಹಾಗೂ ವಾರಾಂತ್ಯದ ಕರ್ಫ್ಯೂದಿಂಗಾಗಿ ಬೆಳಿಗ್ಗೆ 11 ಗಂಟೆ ವರೆಗೂ ಮಾರುಕಟ್ಟೆಯಲ್ಲಿ ಅಂಗಡಿಗಳು ತೆರೆದಿರಲಿಲ್ಲ. ಮಾರುಕಟ್ಟೆ ಪ್ರದೇಶದಲ್ಲಿ ಜನ ಸಂಚಾರ ವಿರಳವಾಗಿತ್ತು.</p>.<p>ವಾರಾಂತ್ಯದ ಕರ್ಫ್ಯೂ ಕಾರಣ ಹೋಟೆಲ್ಗಳಲ್ಲಿ ಉಪಾಹಾರದ ಪಾರ್ಸೆಲ್ ಮಾತ್ರ ಲಭಿಸುತ್ತಿತ್ತು. ಆದರೆ, ಚಹಾ, ಕಾಫಿ ಇರಲಿಲ್ಲ. ಬೀದಿಗಳಲ್ಲಿ ಚಹಾ ಅಂಗಡಿಗಳು ತೆರೆದಿರಲಿಲ್ಲ. ಹೀಗಾಗಿ ಬೆಳಗಿನ ಜಾವ ಕೆಲಸ ಮಾಡುವವರು ಮೈಕೊರೆಯುವ ಚಳಿಯಿಂದ ತೊಂದರೆ ಅನುಭವಿಸಬೇಕಾಯಿತು.</p>.<p class="Subhead"><strong>ಭಾಸವಾಗದ ಕರ್ಫ್ಯೂ:</strong></p>.<p>ಚಳಿಯ ಕಾರಣ ವಾರಾಂತ್ಯ ಕರ್ಫ್ಯೂ ಭಾಸವಾಗಲಿಲ್ಲ. ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಕಡಿಮೆ ಇತ್ತು. ಕೇಂದ್ರ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಪ್ರಯಾಣಿಕರು ಇದ್ದರು. ಗ್ರಾಮೀಣ ಪ್ರದೇಶಗಳಿಗೆ ಬಸ್ ಸಂಚರಿಸಲಿಲ್ಲ. ನಿಲ್ದಾಣದ ಬಳಿ ಕೆಲವರು ಕಾಗದದ ಕಸಕ್ಕೆ ಬೆಂಕಿ ಹಚ್ಚಿ ಕಾಯಿಸಿಕೊಂಡರು.</p>.<p>ಕಿರಾಣಿ, ಮೆಡಿಕಲ್ ಶಾಪ್, ಹಾಲಿನ ಅಂಗಡಿ, ತರಕಾರಿ ಅಂಗಡಿಗಳು ಮಾತ್ರ ತೆರೆದುಕೊಂಡಿದ್ದವು. ಗ್ರಾಹಕರ ಬಾರದ ಕಾರಣ ಮಧ್ಯಾಹ್ನದ ವೇಳೆ ಅವೂ ಸಹ ಮುಚ್ಚಿದ್ದವು. ಸಂಜೆ ಸ್ವಲ್ಪ ತೆರೆದುಕೊಂಡರೂ ಬಹಳ ಹೊತ್ತಿನ ವರೆಗೆ ಬಾಗಿಲು ತೆರೆದುಕೊಂಡಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>