<p><strong>ಬಗದಲ್ (ಜನವಾಡ):</strong> ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನವನ್ನು ಅನ್ಯ ಯೋಜನೆಗಳಿಗೆ ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಬೀದರ್ ದಕ್ಷಿಣ ಘಟಕ ಒತ್ತಾಯಿಸಿದೆ.</p>.<p>ಘಟಕದ ಪದಾಧಿಕಾರಿಗಳು ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ಶುಕ್ರವಾರ ಈ ಕುರಿತು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ನಾಡ ಉಪ ತಹಶೀಲ್ದಾರ್ ಕಚೇರಿ ಅಧಿಕಾರಿಗೆ ಸಲ್ಲಿಸಿದರು.</p>.<p>ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಆಡಳಿತದ ಅವಧಿಯಲ್ಲಿ ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆಗಳ ಆಶಯಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದರು.</p>.<p>2014-15ರಿಂದ ಈವರೆಗೆ ಕಾಯ್ದೆಯಡಿ ಮೀಸಲಿರಿಸಲಾದ ಅನುದಾನದಲ್ಲಿ ಶೇ 10ರಷ್ಟನ್ನು ಸಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ವಿನಿಯೋಗಿಸಿಲ್ಲ ಎಂದು ದೂರಿದರು.</p>.<p>ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನ ಉದ್ದೇಶಿತ ಯೋಜನೆಗಳಿಗೆ ಮಾತ್ರ ಬಳಸಬೇಕು. ಬೇರೆ ಉದ್ದೇಶಕ್ಕೆ ಬಳಸಲಾದ ಅನುದಾನವನ್ನು ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಖಾತೆಗೆ ಮರಳಿಸಲು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.</p>.<p>ಪಕ್ಷದ ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಉಮೇಶ ಗುತ್ತೇದಾರ, ಉಪಾಧ್ಯಕ್ಷರಾದ ರಜನಿಕಾಂತ, ಮಹಮ್ಮದ್ ಏಜಾಜ್, ಪ್ರಧಾನ ಕಾರ್ಯದರ್ಶಿ ಮಾರ್ಟಿನ್ ಮನ್ನಳ್ಳಿ, ಕಾರ್ಯದರ್ಶಿಗಳಾದ ಶ್ರೀಮಂತ ಬಗದಲ್, ಗುಂಡಪ್ಪ ದಾರ್ಕೆ ಹಾಗೂ ಖಜಾಂಚಿ ಜೀವನ ಗಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಗದಲ್ (ಜನವಾಡ):</strong> ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನವನ್ನು ಅನ್ಯ ಯೋಜನೆಗಳಿಗೆ ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಬೀದರ್ ದಕ್ಷಿಣ ಘಟಕ ಒತ್ತಾಯಿಸಿದೆ.</p>.<p>ಘಟಕದ ಪದಾಧಿಕಾರಿಗಳು ಬೀದರ್ ತಾಲ್ಲೂಕಿನ ಬಗದಲ್ ಗ್ರಾಮದಲ್ಲಿ ಶುಕ್ರವಾರ ಈ ಕುರಿತು ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ನಾಡ ಉಪ ತಹಶೀಲ್ದಾರ್ ಕಚೇರಿ ಅಧಿಕಾರಿಗೆ ಸಲ್ಲಿಸಿದರು.</p>.<p>ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಆಡಳಿತದ ಅವಧಿಯಲ್ಲಿ ಎಸ್.ಸಿ.ಪಿ, ಟಿ.ಎಸ್.ಪಿ ಕಾಯ್ದೆಗಳ ಆಶಯಗಳನ್ನು ಗಾಳಿಗೆ ತೂರಲಾಗಿದೆ ಎಂದು ಆರೋಪಿಸಿದರು.</p>.<p>2014-15ರಿಂದ ಈವರೆಗೆ ಕಾಯ್ದೆಯಡಿ ಮೀಸಲಿರಿಸಲಾದ ಅನುದಾನದಲ್ಲಿ ಶೇ 10ರಷ್ಟನ್ನು ಸಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ವಿನಿಯೋಗಿಸಿಲ್ಲ ಎಂದು ದೂರಿದರು.</p>.<p>ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಅನುದಾನ ಉದ್ದೇಶಿತ ಯೋಜನೆಗಳಿಗೆ ಮಾತ್ರ ಬಳಸಬೇಕು. ಬೇರೆ ಉದ್ದೇಶಕ್ಕೆ ಬಳಸಲಾದ ಅನುದಾನವನ್ನು ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ ಖಾತೆಗೆ ಮರಳಿಸಲು ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.</p>.<p>ಪಕ್ಷದ ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಉಮೇಶ ಗುತ್ತೇದಾರ, ಉಪಾಧ್ಯಕ್ಷರಾದ ರಜನಿಕಾಂತ, ಮಹಮ್ಮದ್ ಏಜಾಜ್, ಪ್ರಧಾನ ಕಾರ್ಯದರ್ಶಿ ಮಾರ್ಟಿನ್ ಮನ್ನಳ್ಳಿ, ಕಾರ್ಯದರ್ಶಿಗಳಾದ ಶ್ರೀಮಂತ ಬಗದಲ್, ಗುಂಡಪ್ಪ ದಾರ್ಕೆ ಹಾಗೂ ಖಜಾಂಚಿ ಜೀವನ ಗಡಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>