ಬಳಕೆಯಾಗದ ₹19 ಸಾವಿರ ಕೋಟಿ ಅನುದಾನವನ್ನು ತಕ್ಷಣ ಎಸ್.ಸಿ, ಎಸ್.ಟಿ. ಅಭಿವೃದ್ಧಿ ನಿಗಮಗಳಿಗೆ ವರ್ಗಾಯಿಸಿ, ನಿರುದ್ಯೋಗಿ ಯುವ ಸಮುದಾಯಕ್ಕೆ ನೇರ ಸಾಲ ಒದಗಿಸಬೇಕು. ಈ ಮೂಲಕ ನಿರುದ್ಯೋಗಿಗಳು ಉದ್ಯೋಗ ಕೈಗೊಳ್ಳಲು ನೆರವಾಗಬೇಕು ಎಂದು ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ವಿಭಾಗೀಯ ಸಂಚಾಲಕ ರವಿಕುಮಾರ ವಾಘಮಾರೆ, ಡಿ.ಎಸ್.-4 ಕರ್ನಾಟಕದ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ದಲಿತ ಸಂಘರ್ಷ ಸಮಿತಿ, ಕರ್ನಾಟಕ (ಭೀಮ ಮಾರ್ಗ) ಜಿಲ್ಲಾ ಸಂಚಾಲಕ ಮಲ್ಲಿಕಾರ್ಜುನ ಚಿಟ್ಟಾ, ಕರ್ನಾಟಕ ದಲಿತ ಸಂಘರ್ಷ ಸಮಿತಿ(ಬಿ.ಕೆ. ಬಣ) ಜಿಲ್ಲಾ ಸಂಚಾಲಕ ಓಂಪ್ರಕಾಶ ಭಾವಿಕಟ್ಟಿ ಒತ್ತಾಯಿಸಿದ್ದಾರೆ.