ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರ ಅಭಿವೃದ್ಧಿ ವಿಷಯ ಬಿಟ್ಟು ಭಾವನಾತ್ಮಕ ವಿಷಯಗಳ ಮೂಲಕ ಮತ ಕೇಳುತ್ತಿದೆ. ಕೇಂದ್ರ ಸರ್ಕಾರ ಸುಗ್ರಿವಾಜ್ಞೆ ಮೂಲಕ ದೆಹಲಿ ಸರ್ಕಾರದ ಅಧಿಕಾರ ದುರ್ಬಲಗೊಳಿಸುವ ಹುನ್ನಾರ ನಡೆಸಿದೆ. ಪರಿವಾರವಾದ ಮತ್ತಿತರ ಸುಳ್ಳು ಹೇಳಿಕೆಗಳನ್ನು ನೀಡುವುದನ್ನು ಪ್ರಧಾನಿ ಮೋದಿ ಈಗಲಾದರೂ ಬಿಡಬೇಕು ಎಂದು ಆಗ್ರಹಿಸಿದರು.