<p><strong>ಬೀದರ್: </strong>‘ವಚನ ಸಾಹಿತ್ಯ ಬಸವಾದಿ ಶರಣರು ವಿಶ್ವಕ್ಕೆ ನೀಡಿದ ಸಂವಿಧಾನವಾಗಿದೆ. ಕಾನೂನಿನಲ್ಲಿ ಇರುವ ಎಲ್ಲ ಕಲಂಗಳಲ್ಲಿನ ಅಂಶಗಳು ವಚನಗಳಲ್ಲಿ ಇವೆ’ ಎಂದು ಪ್ರಾಧ್ಯಾಪಕ ವೀರಶೆಟ್ಟಿ ಮೈಲೂರಕರ್ ಅಭಿಪ್ರಾಯಪಟ್ಟರು.</p>.<p>ರಾಷ್ಟ್ರೀಯ ಬಸವ ದಳ, ಲಿಂಗಾಯತ ಸಮಾಜದ ಸಹಯೋಗದೊಂದಿಗೆ ನಗರದ ಬಸವ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ಮಾಸಿಕ ಪೂರ್ಣಿಮಾ ಹಾಗೂ ಬಸವ ಜ್ಯೋತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶರಣರ ವಚನಗಳಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ನೈತಿಕ ಹಾಗೂ ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸುವ ಸಂದೇಶಗಳು ಇವೆ’ ಎಂದು ಹೇಳಿದರು.</p>.<p>‘ಫ.ಗು.ಹಳಕಟ್ಟಿ ವಚನಗಳ ಸಂರಕ್ಷಣೆ ಮಾಡಿದ್ದಾರೆ. ಲಿಂಗಾನಂದ ಸ್ವಾಮೀಜಿ ಹಾಗೂ ಮಾತೆ ಮಹಾದೇವಿ ಅವರು ಪ್ರವಚನದ ಮೂಲಕ ವಚನ ಸಾಹಿತ್ಯವನ್ನು ಜನರಿಗೆ ತಲುಪಿಸಿದ್ದಾರೆ’ ಎಂದು ಹೇಳಿದರು.</p>.<p>ಬಸವ ಮಂಟಪದ ಮಾತೆ ಸತ್ಯದೇವಿ ಮಾತನಾಡಿ,‘ವಚನ ಸಾಹಿತ್ಯ ಜೀವನದ ಸಾಹಿತ್ಯವಾಗಿದೆ. ಅದು ಆತ್ಮವಿಶ್ವಾಸ ಮೂಡಿಸಿ, ಧೈರ್ಯದಿಂದ ಬದುಕುವುದನ್ನು ಕಲಿಸುತ್ತದೆ’ ಎಂದರು.</p>.<p>‘ವಚನ ಎಂದರೆ ಭಾಷೆ. ಶರಣರು ಸನ್ಮಾರ್ಗದಲ್ಲಿ ಬದುಕಿ ತೋರಿಸುತ್ತೇನೆ ಎಂದು ದೇವರಿಗೆ ಭಾಷೆ ನೀಡಿ, ಬರೆದ ಸಾಹಿತ್ಯವೇ ವಚನ ಸಾಹಿತ್ಯ. ಇಂತಹ ಪವಿತ್ರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ದೊರಕುತ್ತದೆ’ ಎಂದು ತಿಳಿಸಿದರು.</p>.<p>ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ ಅಧ್ಯಕ್ಷತೆ ವಹಿಸಿದ್ದರು.</p>.<p>ಪ್ರೇಮಾ ಮಠ, ಮನೋಹರ ಹಾಗೂ ಸಂತೋಷಕುಮಾರ ಸುಂಕದ್ ಅವರನ್ನು ಸನ್ಮಾನಿಸಲಾಯಿತು. ಬಸಮ್ಮ ಬಿರಾದಾರ ಬಸವಪೂಜೆ ನೆರವೇರಿಸಿದರು. ಬಸವಕುಮಾರ ಚಟ್ನಳ್ಳಿ ವಚನ ಗಾಯನ ನಡೆಸಿಕೊಟ್ಟರು.</p>.<p>ಗಣಪತಿ ಬಿರಾದಾರ, ಕಲ್ಪನಾ ಸಾವಲೆ, ಅಕ್ಕಮಹಾದೇವಿ ಸ್ವಾಮಿ, ಸಂಜುಕುಮಾರ ಪಾಟೀಲ ಚೊಂಡಿ, ಶೀತಲ್ ಸೂರ್ಯವಂಶಿ, ಶ್ರೀದೇವಿ ಹೂಗಾರ, ಮೇನಕಾ ಪಾಟೀಲ, ಕುಶಾಲರಾವ್ ಪಾಟೀಲ ಹಾಗೂ ರಾಜೇಂದ್ರಕುಮಾರ ಗಂದಗೆ ಇದ್ದರು.</p>.<p>ಸುರೇಶ ಸ್ವಾಮಿ ನಿರೂಪಿಸಿದರು. ಮಹಾಲಿಂಗ ಸ್ವಾಮಿ ಚಟನಳ್ಳಿ ಸ್ವಾಗತಿಸಿದರು. ಮಹಾರುದ್ರ ಡಾಕುಳಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>‘ವಚನ ಸಾಹಿತ್ಯ ಬಸವಾದಿ ಶರಣರು ವಿಶ್ವಕ್ಕೆ ನೀಡಿದ ಸಂವಿಧಾನವಾಗಿದೆ. ಕಾನೂನಿನಲ್ಲಿ ಇರುವ ಎಲ್ಲ ಕಲಂಗಳಲ್ಲಿನ ಅಂಶಗಳು ವಚನಗಳಲ್ಲಿ ಇವೆ’ ಎಂದು ಪ್ರಾಧ್ಯಾಪಕ ವೀರಶೆಟ್ಟಿ ಮೈಲೂರಕರ್ ಅಭಿಪ್ರಾಯಪಟ್ಟರು.</p>.<p>ರಾಷ್ಟ್ರೀಯ ಬಸವ ದಳ, ಲಿಂಗಾಯತ ಸಮಾಜದ ಸಹಯೋಗದೊಂದಿಗೆ ನಗರದ ಬಸವ ಮಂಟಪದಲ್ಲಿ ಗುರುವಾರ ಆಯೋಜಿಸಿದ್ದ ಮಾಸಿಕ ಪೂರ್ಣಿಮಾ ಹಾಗೂ ಬಸವ ಜ್ಯೋತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಶರಣರ ವಚನಗಳಲ್ಲಿ ಸಾಮಾಜಿಕ, ಧಾರ್ಮಿಕ, ಆರ್ಥಿಕ, ನೈತಿಕ ಹಾಗೂ ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸುವ ಸಂದೇಶಗಳು ಇವೆ’ ಎಂದು ಹೇಳಿದರು.</p>.<p>‘ಫ.ಗು.ಹಳಕಟ್ಟಿ ವಚನಗಳ ಸಂರಕ್ಷಣೆ ಮಾಡಿದ್ದಾರೆ. ಲಿಂಗಾನಂದ ಸ್ವಾಮೀಜಿ ಹಾಗೂ ಮಾತೆ ಮಹಾದೇವಿ ಅವರು ಪ್ರವಚನದ ಮೂಲಕ ವಚನ ಸಾಹಿತ್ಯವನ್ನು ಜನರಿಗೆ ತಲುಪಿಸಿದ್ದಾರೆ’ ಎಂದು ಹೇಳಿದರು.</p>.<p>ಬಸವ ಮಂಟಪದ ಮಾತೆ ಸತ್ಯದೇವಿ ಮಾತನಾಡಿ,‘ವಚನ ಸಾಹಿತ್ಯ ಜೀವನದ ಸಾಹಿತ್ಯವಾಗಿದೆ. ಅದು ಆತ್ಮವಿಶ್ವಾಸ ಮೂಡಿಸಿ, ಧೈರ್ಯದಿಂದ ಬದುಕುವುದನ್ನು ಕಲಿಸುತ್ತದೆ’ ಎಂದರು.</p>.<p>‘ವಚನ ಎಂದರೆ ಭಾಷೆ. ಶರಣರು ಸನ್ಮಾರ್ಗದಲ್ಲಿ ಬದುಕಿ ತೋರಿಸುತ್ತೇನೆ ಎಂದು ದೇವರಿಗೆ ಭಾಷೆ ನೀಡಿ, ಬರೆದ ಸಾಹಿತ್ಯವೇ ವಚನ ಸಾಹಿತ್ಯ. ಇಂತಹ ಪವಿತ್ರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ನೆಮ್ಮದಿ ದೊರಕುತ್ತದೆ’ ಎಂದು ತಿಳಿಸಿದರು.</p>.<p>ಲಿಂಗಾಯತ ಧರ್ಮ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಶಿವರಾಜ ಪಾಟೀಲ ಅತಿವಾಳ ಅಧ್ಯಕ್ಷತೆ ವಹಿಸಿದ್ದರು.</p>.<p>ಪ್ರೇಮಾ ಮಠ, ಮನೋಹರ ಹಾಗೂ ಸಂತೋಷಕುಮಾರ ಸುಂಕದ್ ಅವರನ್ನು ಸನ್ಮಾನಿಸಲಾಯಿತು. ಬಸಮ್ಮ ಬಿರಾದಾರ ಬಸವಪೂಜೆ ನೆರವೇರಿಸಿದರು. ಬಸವಕುಮಾರ ಚಟ್ನಳ್ಳಿ ವಚನ ಗಾಯನ ನಡೆಸಿಕೊಟ್ಟರು.</p>.<p>ಗಣಪತಿ ಬಿರಾದಾರ, ಕಲ್ಪನಾ ಸಾವಲೆ, ಅಕ್ಕಮಹಾದೇವಿ ಸ್ವಾಮಿ, ಸಂಜುಕುಮಾರ ಪಾಟೀಲ ಚೊಂಡಿ, ಶೀತಲ್ ಸೂರ್ಯವಂಶಿ, ಶ್ರೀದೇವಿ ಹೂಗಾರ, ಮೇನಕಾ ಪಾಟೀಲ, ಕುಶಾಲರಾವ್ ಪಾಟೀಲ ಹಾಗೂ ರಾಜೇಂದ್ರಕುಮಾರ ಗಂದಗೆ ಇದ್ದರು.</p>.<p>ಸುರೇಶ ಸ್ವಾಮಿ ನಿರೂಪಿಸಿದರು. ಮಹಾಲಿಂಗ ಸ್ವಾಮಿ ಚಟನಳ್ಳಿ ಸ್ವಾಗತಿಸಿದರು. ಮಹಾರುದ್ರ ಡಾಕುಳಗಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>