ಬೀದರ್: ವಚನ ವಿಜಯೋತ್ಸವದ ಭಿತ್ತಿಚಿತ್ರ ಬಿಡುಗಡೆ ಕಾರ್ಯಕ್ರಮ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ಸಾನ್ನಿಧ್ಯ ಹಾಗೂ ಅಕ್ಕ ಗಂಗಾಂಬಿಕಾ ಅವರ ನೇತೃತ್ವದಲ್ಲಿ ನಡೆಯಿತು.
ಅಕ್ಕ ಅನ್ನಪೂರ್ಣ ಮಾತನಾಡಿ, ‘ಫೆಬ್ರುವರಿ 17 ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಚನ ವಿಜಯೋತ್ಸವದ ಪ್ರಚಾರದ ಅಂಗವಾಗಿ ಭಿತ್ತಿಚಿತ್ರ ಹಾಗೂ ಕರಪತ್ರ ಬಿಡುಗಡೆ ಮಾಡಲಾಗಿದೆ’ ಎಂದು ತಿಳಿಸಿದರು.
ಚನ್ನಬಸವಾನಂದ ಸ್ವಾಮೀಜಿ, ಹಿರೇಹೊನ್ನಾಳ್ಳಿ, ವಚನ ವಿಜಯೋತ್ಸವದ ಸ್ವಾಗತ ಸಮಿತಿ ಅಧ್ಯಕ್ಷ ಚಂದ್ರಶೇಖರ ಹೆಬ್ಬಾಳೆ, ಹಣಕಾಸು ಸಮಿತಿ ಅಧ್ಯಕ್ಷ ಸಿ.ಎಸ್.ಪಾಟೀಲ, ಮಾಣಿಕಪ್ಪ ಗೋರನಾಳೆ, ರಾಜಕುಮಾರ ಪಾಟೀಲ, ಅನಿಲಕುಮಾರ ದೇಶಮುಖ, ಡಾ. ವಿಜಯಶ್ರೀ ಬಶೆಟ್ಟಿ ಹಾಗೂ ನೀಲಮ್ಮ ರೋಗನ ಇದ್ದರು.