ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಡ್ಡಾರಾಧನೆ ಹಳ್ಳಿಖೇಡ ನೆಲ ಮೂಲದ್ದು

ಕನ್ನಡ ವಿಭಾಗದ ಮುಖ್ಯಸ್ಥ ಶ್ರೀಕಾಂತ ಪಾಟೀಲ ಹೇಳಿಕೆ
Last Updated 4 ನವೆಂಬರ್ 2020, 13:44 IST
ಅಕ್ಷರ ಗಾತ್ರ

ಬೀದರ್: ‘ಕನ್ನಡ ಸಾಹಿತ್ಯದ ಮೊದಲ ಗದ್ಯಗ್ರಂಥ, ಬೆಳ್ಳಿ ಚುಕ್ಕಿ ವಡ್ಡಾರಾಧನೆ ಬೀದರ್‌ ಜಿಲ್ಲೆಯ ಹಳ್ಳಿಖೇಡ ನೆಲದ್ದು’ ಎಂದು ಸರ್ಕಾರಿ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಶ್ರೀಕಾಂತ ಪಾಟೀಲ ನುಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಸುವರ್ಣಮಹೋತ್ಸವದ ನಿಮಿತ್ತ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ‘ಕನ್ನಡ ಸಾಹಿತ್ಯ ಪರಂಪರೆ: ಅವಲೋಕನ, ಸರಣಿ ಉಪನ್ಯಾಸ ಮಾಲಿಕೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ವಡ್ಡಾರಾಧನೆ ಕುರಿತು ವಿಶೇಷ ಉನ್ಯಾಸ ನೀಡಿದರು.

‘ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕ ಕೋವಿಡ್‌ ಸಂದರ್ಭದಲ್ಲೂ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ ಮಾತನಾಡಿ, ‘ಸುವರ್ಣ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಮುಸ್ಸಂಜೆ 5.30 ರಿಂದ 6.30ರವರೆಗೆ ಯುಟ್ಯೂಬ್ ಮತ್ತು ಫೇಸ್‍ಬುಕ್‌ನಲ್ಲಿ ನೇರ ಪ್ರಸಾರವಾಗಲಿದೆ’ ಎಂದರು,

ವೀರಶೆಟ್ಟಿ ಚನಶೆಟ್ಟಿ ಇದ್ದರು. ಬಸವರಾಜ ಬಲ್ಲೂರ ಪ್ರಾಸ್ತಾವಿಕವಾಗಿ ಮಾತನಾಡಿದರು ಪ್ರೊ. ಜಗನ್ನಾಥ ಕಮಲಾಪುರೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT