<p><strong>ಬೀದರ್</strong>: ‘ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಕಟ್ಟಡ ನಿರ್ಮಾಣಕ್ಕೆ ₹2 ಕೋಟಿ ಅನುದಾನ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಆಶ್ವಾಸನೆ ನೀಡಿದ್ದಾರೆ.</p>.<p>ಮಹರ್ಷಿ ವಾಲ್ಮೀಕಿ ಸಮಾಜ ಸಂಘದ ಪದಾಧಿಕಾರಿಗಳು ಸಚಿವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದಾಗ ಮೇಲಿನಂತೆ ಭರವಸೆ ನೀಡಿದರು. </p>.<p>ಜಿಲ್ಲಾಡಳಿತವು ಬೀದರ್ ನಗರದ ಚಿಕ್ಕಪೇಟೆಯ ಸರ್ವೇ ನಂ. 61ರಲ್ಲಿ 20 ಗುಂಟೆ ಜಮೀನು ವಾಲ್ಮೀಕಿ ಸಮುದಾಯ ಭವನಕ್ಕಾಗಿ ಮೀಸಲಿಟ್ಟಿದೆ. ಆದರೆ, ಭವನದ ಕಟ್ಟಡ ನಿರ್ಮಾಣಕ್ಕೆ ಅಗತ್ಯವಾದ ಅನುದಾನ ಬಿಡುಗಡೆ ಆಗದೆ ಯೋಜನೆ ಸ್ಥಗಿತಗೊಂಡಿದೆ ಎಂದು ಸಚಿವರ ಗಮನ ಸೆಳೆದರು.</p>.<p>ಜಿಲ್ಲೆಯಲ್ಲಿ ಟೋಕರಿ ಕೋಳಿ, ವಾಲ್ಮೀಕಿ, ಕೋಲಿ, ಮಹಾದೇವ ಕೋಲಿ ಸೇರಿದಂತೆ ಹಲವು ಪದಗಳಲ್ಲಿ ಗುರುತಿಸಿಕೊಂಡಿರುವ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಮದುವೆ, ಸಾಂಸ್ಕೃತಿಕ ಕಾರ್ಯಗಳು, ಸಮುದಾಯ ಕಾರ್ಯಕ್ರಮಗಳಿಗೆ ಭವನದ ಅಗತ್ಯವಿದೆ. ಸಮುದಾಯ ಭವನಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿದರು. </p>.<p>ಸಂಘದ ಅಧ್ಯಕ್ಷ ಶರಣಪ್ಪ ಕಾಶೆಂಪುರ್, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಸಂಘದ ಉಪಾಧ್ಯಕ್ಷ ಮಾರುತಿ ಮಾಸ್ಟರ್, ಬೀದರ್ ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸನ್ಮುಖಪ್ಪ ವಾಲಿಕರ್, ಮುಖಂಡ ಅಂಬ್ರೇಶ ಭಾಲ್ಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಮಹರ್ಷಿ ವಾಲ್ಮೀಕಿ ಸಮುದಾಯ ಭವನದ ಕಟ್ಟಡ ನಿರ್ಮಾಣಕ್ಕೆ ₹2 ಕೋಟಿ ಅನುದಾನ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಆಶ್ವಾಸನೆ ನೀಡಿದ್ದಾರೆ.</p>.<p>ಮಹರ್ಷಿ ವಾಲ್ಮೀಕಿ ಸಮಾಜ ಸಂಘದ ಪದಾಧಿಕಾರಿಗಳು ಸಚಿವರನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದಾಗ ಮೇಲಿನಂತೆ ಭರವಸೆ ನೀಡಿದರು. </p>.<p>ಜಿಲ್ಲಾಡಳಿತವು ಬೀದರ್ ನಗರದ ಚಿಕ್ಕಪೇಟೆಯ ಸರ್ವೇ ನಂ. 61ರಲ್ಲಿ 20 ಗುಂಟೆ ಜಮೀನು ವಾಲ್ಮೀಕಿ ಸಮುದಾಯ ಭವನಕ್ಕಾಗಿ ಮೀಸಲಿಟ್ಟಿದೆ. ಆದರೆ, ಭವನದ ಕಟ್ಟಡ ನಿರ್ಮಾಣಕ್ಕೆ ಅಗತ್ಯವಾದ ಅನುದಾನ ಬಿಡುಗಡೆ ಆಗದೆ ಯೋಜನೆ ಸ್ಥಗಿತಗೊಂಡಿದೆ ಎಂದು ಸಚಿವರ ಗಮನ ಸೆಳೆದರು.</p>.<p>ಜಿಲ್ಲೆಯಲ್ಲಿ ಟೋಕರಿ ಕೋಳಿ, ವಾಲ್ಮೀಕಿ, ಕೋಲಿ, ಮಹಾದೇವ ಕೋಲಿ ಸೇರಿದಂತೆ ಹಲವು ಪದಗಳಲ್ಲಿ ಗುರುತಿಸಿಕೊಂಡಿರುವ ಪರಿಶಿಷ್ಟ ಪಂಗಡದವರ ಜನಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿದೆ. ಮದುವೆ, ಸಾಂಸ್ಕೃತಿಕ ಕಾರ್ಯಗಳು, ಸಮುದಾಯ ಕಾರ್ಯಕ್ರಮಗಳಿಗೆ ಭವನದ ಅಗತ್ಯವಿದೆ. ಸಮುದಾಯ ಭವನಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕೆಂದು ಕೋರಿದರು. </p>.<p>ಸಂಘದ ಅಧ್ಯಕ್ಷ ಶರಣಪ್ಪ ಕಾಶೆಂಪುರ್, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಸಂಘದ ಉಪಾಧ್ಯಕ್ಷ ಮಾರುತಿ ಮಾಸ್ಟರ್, ಬೀದರ್ ದಕ್ಷಿಣ ಕ್ಷೇತ್ರದ ಅಧ್ಯಕ್ಷ ಸನ್ಮುಖಪ್ಪ ವಾಲಿಕರ್, ಮುಖಂಡ ಅಂಬ್ರೇಶ ಭಾಲ್ಕೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>