<p><strong>ಬೀದರ್</strong>: ‘ಶಿಕ್ಷಕರು ಶಾಲಾ ಕಾಲೇಜುಗಳ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಬಿತ್ತುವ ಕೆಲಸ ಮಾಡಬೇಕು. ಅಂದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ನಾಗರಿಕ ಸಮಾಜ ನಿರ್ಮಾಣಗೊಳ್ಳಲು ಸಾಧ್ಯವಾಗುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅಭಿಪ್ರಾಯಪಟ್ಟರು.</p>.<p>ನಗರದ ಸಿದ್ಧಾರ್ಥ ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಶಿಕ್ಷಕರಲ್ಲಿ ವೃತ್ತಿಪರ ಮೌಲ್ಯ ಹಾಗೂ ಬೋಧನಾ ಕೌಶಲ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಸ್ತು, ಕಠಿಣ ಪರಿಶ್ರಮ, ಕರ್ತವ್ಯ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಮಾಡುವ ಕಾರ್ಯಗಳು ಮನುಷ್ಯನನ್ನು ಎತ್ತರಕ್ಕೆ ಬೆಳೆಸುತ್ತವೆ’ ಎಂದು ಹೇಳಿದರು.</p>.<p>‘ಇಂದಿನ ಮಕ್ಕಳೇ ಮುಂದಿನ ನಾಯಕರು. ಮೌಲ್ಯಯುತ ಶಿಕ್ಷಣ ಪಡೆದ ಮಕ್ಕಳು ಮುಂದಿನ ದಿನಗಳಲ್ಲಿ ಸುಂದರ ಸಮಾಜ ಹಾಗೂ ದೇಶವನ್ನು ಕಟ್ಟಬಲ್ಲರು. ಆದ್ದರಿಂದ ಶಿಕ್ಷಕರು ಮಕ್ಕಳಿಗೆ ಆದರ್ಶವಾಗಿರಬೇಕು’ ಎಂದು ತಿಳಿಸಿದರು.<br /><br />ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್. ಪ್ರಭು ಮಾತನಾಡಿ, ‘ಸಮಯ ಪರಿಪಾಲನೆಯ ಮೂಲಕ ವ್ಯಕ್ತಿಯಲ್ಲಿ ಶಿಸ್ತು ಬೆಳೆಯುತ್ತದೆ. ತರಗತಿಗೆ ಹಾಜರಾಗುವುದು ಹಾಗೂ ತರಗತಿಗಳನ್ನು ನಡೆಸುವುದು ಸಹ ಮಹತ್ವದ್ದಾಗಿದೆ.<br />ಶಿಕ್ಷಕರ ಜೀವನದ ಕ್ರಮವನ್ನೇ ಮಕ್ಕಳು ಅನುಸರಿಸುತ್ತಾರೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಮಾರುತಿರಾವ್ ಡಿ. ಮಾಲೆ ಮಾತನಾಡಿ, ‘ಆಚಾರ, ವಿಚಾರ, ಪ್ರಚಾರ ಎನ್ನುವ ತತ್ವವನ್ನು ಪ್ರತಿಯೊಬ್ಬ ಶಿಕ್ಷಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರೊ. ಜಗನ್ನಾಥ ಬಡಿಗೇರ ಪ್ರಾರ್ಥಿಸಿದರು. ಪ್ರೊ.ರಾಜಕುಮಾರ ಸಿಂಧೆ ನಿರೂಪಿಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ.ವಿಜಯಕುಮಾರ ದೊಡ್ಡಗಾಣಿಗೇರ ಸ್ವಾಗತಿಸಿದರು. ಪ್ರೊ.ಗೋಪಾಲ ಬಡಿಗೇರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ‘ಶಿಕ್ಷಕರು ಶಾಲಾ ಕಾಲೇಜುಗಳ ಹಂತದಲ್ಲೇ ವಿದ್ಯಾರ್ಥಿಗಳಲ್ಲಿ ಮೌಲ್ಯಗಳನ್ನು ಬಿತ್ತುವ ಕೆಲಸ ಮಾಡಬೇಕು. ಅಂದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ನಾಗರಿಕ ಸಮಾಜ ನಿರ್ಮಾಣಗೊಳ್ಳಲು ಸಾಧ್ಯವಾಗುತ್ತದೆ’ ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅಭಿಪ್ರಾಯಪಟ್ಟರು.</p>.<p>ನಗರದ ಸಿದ್ಧಾರ್ಥ ಕಲಾ ಮತ್ತು ವಾಣಿಜ್ಯ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಶಿಕ್ಷಕರಲ್ಲಿ ವೃತ್ತಿಪರ ಮೌಲ್ಯ ಹಾಗೂ ಬೋಧನಾ ಕೌಶಲ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಿಸ್ತು, ಕಠಿಣ ಪರಿಶ್ರಮ, ಕರ್ತವ್ಯ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಮಾಡುವ ಕಾರ್ಯಗಳು ಮನುಷ್ಯನನ್ನು ಎತ್ತರಕ್ಕೆ ಬೆಳೆಸುತ್ತವೆ’ ಎಂದು ಹೇಳಿದರು.</p>.<p>‘ಇಂದಿನ ಮಕ್ಕಳೇ ಮುಂದಿನ ನಾಯಕರು. ಮೌಲ್ಯಯುತ ಶಿಕ್ಷಣ ಪಡೆದ ಮಕ್ಕಳು ಮುಂದಿನ ದಿನಗಳಲ್ಲಿ ಸುಂದರ ಸಮಾಜ ಹಾಗೂ ದೇಶವನ್ನು ಕಟ್ಟಬಲ್ಲರು. ಆದ್ದರಿಂದ ಶಿಕ್ಷಕರು ಮಕ್ಕಳಿಗೆ ಆದರ್ಶವಾಗಿರಬೇಕು’ ಎಂದು ತಿಳಿಸಿದರು.<br /><br />ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್. ಪ್ರಭು ಮಾತನಾಡಿ, ‘ಸಮಯ ಪರಿಪಾಲನೆಯ ಮೂಲಕ ವ್ಯಕ್ತಿಯಲ್ಲಿ ಶಿಸ್ತು ಬೆಳೆಯುತ್ತದೆ. ತರಗತಿಗೆ ಹಾಜರಾಗುವುದು ಹಾಗೂ ತರಗತಿಗಳನ್ನು ನಡೆಸುವುದು ಸಹ ಮಹತ್ವದ್ದಾಗಿದೆ.<br />ಶಿಕ್ಷಕರ ಜೀವನದ ಕ್ರಮವನ್ನೇ ಮಕ್ಕಳು ಅನುಸರಿಸುತ್ತಾರೆ’ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಮಾರುತಿರಾವ್ ಡಿ. ಮಾಲೆ ಮಾತನಾಡಿ, ‘ಆಚಾರ, ವಿಚಾರ, ಪ್ರಚಾರ ಎನ್ನುವ ತತ್ವವನ್ನು ಪ್ರತಿಯೊಬ್ಬ ಶಿಕ್ಷಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಪ್ರೊ. ಜಗನ್ನಾಥ ಬಡಿಗೇರ ಪ್ರಾರ್ಥಿಸಿದರು. ಪ್ರೊ.ರಾಜಕುಮಾರ ಸಿಂಧೆ ನಿರೂಪಿಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ.ವಿಜಯಕುಮಾರ ದೊಡ್ಡಗಾಣಿಗೇರ ಸ್ವಾಗತಿಸಿದರು. ಪ್ರೊ.ಗೋಪಾಲ ಬಡಿಗೇರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>