ಬುಧವಾರ, ಮಾರ್ಚ್ 29, 2023
32 °C

ವರ್ಷಾವಾಸ ಸಮಾರೋಪ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ನಗರದ ಬ್ಯಾಂಕ್‌ ಕೊಲೊನಿಯ ಸಿದ್ಧಾರ್ಥ ಬೌದ್ಧ ವಿಹಾರ ಸಮಿತಿ ವತಿಯಿಂದ ಮೂರು ತಿಂಗಳ ವರೆಗೆ ನಡೆದ ವರ್ಷಾವಾಸ ಸಮಾರೋಪ ಕಾರ್ಯಕ್ರಮ ನಡೆಯಿತು.

ನಗರಸಭೆ ಸದಸ್ಯ ಪ್ರಭುಶೆಟ್ಟಿ ಪಾಟೀಲ ಉದ್ಘಾಟಿಸಿದರು. ಅತಿಥಿಗಳಾಗಿ ನಗರಸಭೆ ಸದಸ್ಯ ದಿಗಂಬರ್ ಮಡಿವಾಳ, ಕಾಂಗ್ರೆಸ್‌ ಮುಖಂಡ ಧನರಾಜ ಹಂಗರಗಿ, ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷೆ ಲುಂಬಣಿ ಗೌತಮ,
ಉಪನ್ಯಾಸಕರಾಗಿ ಶಿವಶರಣಪ್ಪ ಹುಗ್ಗಿ ಪಾಟೀಲ, ಡಾ.ಕಾಶೀನಾಥ ಚಲ್ವಾ ಪಾಲ್ಗೊಂಡಿದ್ದರು.

ಪೂಜ್ಯ ಭಂತೆ ಜ್ಞಾನಸಾಗರ, ಭಂತೆ ವರಜ್ಯೋತಿ ಮತ್ತು ಭಂತೆ ಸಂಘರಕ್ಕಿತ ಸಾನಿಧ್ಯ ವಹಿಸಿದ್ದರು. ಭೀಮಣ್ಣ ಭಾವಿಕಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಶಂಭುರಾವ್ ಸಾಗರ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌತಮ ಚಕ್ರವರ್ತಿ ನಿರೂಪಿಸಿದರು. ರಂಗಮ್ಮ ಕಡ್ಡೆ ಸ್ವಾಗತಿಸಿದರು. ಗೋರಖನಾಥ ಸದಾಫುಲೆ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.