<p><strong>ಚಿಟಗುಪ್ಪ (ಹುಮನಾಬಾದ್):</strong> ತಾಲ್ಲೂಕಿನ ಚಾಂಗಲೇರಾ ಗ್ರಾಮದ ಐತಿಹಾಸಿಕ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ಅಗ್ನಿ ತುಳಿಯುವ ಕಾರ್ಯಕ್ರಮ ಜರುಗಿತು.</p>.<p>ಇಲ್ಲಿಯ ಥೇರು ಮೈದಾನದಿಂದ ವೀರಭದ್ರೇಶ್ವರ ದೇವಸ್ಥಾನದವರೆಗಿನ ರಸ್ತೆಯುದ್ದಕ್ಕೂ ಜನಸಾಗರವೇ ನೆರೆದಿತ್ತು. ಬುಧವಾರ ಬೆಳಿಗ್ಗೆ ನಡೆದ ಅಗ್ನಿ ತುಳಿಯುವ ಕಾರ್ಯಕ್ರಮದಲ್ಲಿ ಜನರ ನೂಕುನುಗ್ಗಲು ಉಂಟಾಯಿತು.</p>.<p>ಒಂದು ಬಾರಿ ಜಾತ್ರೆಯಲ್ಲಿ ಅಗ್ನಿ ತುಳಿದವರು ಮೂರು ವರ್ಷ ಮುಂದುವರಿಸುವ ವಾಡಿಕೆಯಿರುವುದರಿಂದ ಸಾವಿರಾರು ಜನರು ಅಗ್ನಿಕುಂಡದ ಸುತ್ತ ನೆರೆದಿದ್ದರು. ಕುಂಡದಲ್ಲಿ ಕಾಯಿ ಕರ್ಪೂರ ಎಸೆದು ಐದು ಸುತ್ತು ಹಾಕಿ ಹರಕೆ ಪೂರೈಸಿದರು.</p>.<p>ಈ ಅಗ್ನಿ ತುಳಿಯುವ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ತೆಲಂಗಾಣ, ಆಂಧ್ರ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಯ ಭಕ್ತರು ಅಲ್ಲದೇ ಕಲಬುರಗಿ ಜಿಲ್ಲೆಯು ಚಿಂಚೋಳಿ , ಹುಮನಾಬಾದ್, ಚಿಟಗುಪ್ಪ ತಾಲ್ಲೂಕಿನ ಗ್ರಾಮೀಣ ಭಾಗದ ಬಹುತೇಕ ಹಳ್ಳಿಯ ಜನರು ಸರತಿ ಸಾಲಿನಲ್ಲಿ ನಿಂತು ಅಗ್ನಿ ತುಳಿದು ಹರಕೆ ತೀರಿಸಿದರು.</p>.<p>ಸಂಭ್ರಮದ ಪಲ್ಲಕಿ ಉತ್ಸವ: ಚಾಂಗಲೇರಾ ಗ್ರಾಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ರಾತ್ರಿ ವೀರಭದ್ರೇಶ್ವರ ಪಲ್ಲಕ್ಕಿ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು.</p>.<p>ದೇವಸ್ಥಾನದಲ್ಲಿ ರುದ್ರಾಭಿಷೇಕ, ಬಿಲ್ವಪತ್ರೆ ಅರ್ಚನೆ ನಂತರ ವೀರಭದ್ರೇಶ್ವರ ಬೆಳ್ಳಿ ಪೂಜೆ ಭಕ್ತರ ಗಮನ ಸೆಳೆಯಿತು. ನಂತರ ಅಗ್ನಿಕುಂಡ ಉತ್ಸವ ನಡೆಯಿತು. ವೀರಭದ್ರೇಶ್ವರರ ಪಲ್ಲಕ್ಕಿ ಉತ್ಸವ ದೇವಸ್ಥಾನದಿಂದ ಅಗ್ನಿ ಕುಂಡದ ವರೆಗೆ ಸಕಲ ವಾದ್ಯ ಮೇಳದೊಂದಿಗೆ ನಡೆಯಿತು.</p>.<p>ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಪುರುವಂತರು ವೀರಗಾಸೆ ಪ್ರದರ್ಶನ ನೀಡಿದರು. ನಂದಿಕೋಲು ಹೊತ್ತವರು, ಪಲ್ಲಕ್ಕಿ ಹೊತ್ತುಕೊಂಡ ಬಂದ ಭಕ್ತರು, ಪುರುವಂತರು ಪಲ್ಲಕ್ಕಿ ಸಮೇತವಾಗಿ ಅಗ್ನಿಕುಂಡ ಪ್ರವೇಶದ ನಂತರ ನೂರಾರು ಜನ ಭಕ್ತರು ಅಗ್ನಿಕುಂಡ ಹಾಯ್ದು ಹರಕೆಯನ್ನು ಪೂರೈಸಿದರು.</p>.<p>ಅನ್ನದಾಸೋಹ: ಜಾತ್ರೆಗೆ ಆಗಮಿಸಿದ ರಾಜ್ಯ ಹಾಗೂ ಹೊರರಾಜ್ಯದ ಭಕ್ತರಿಗಾಗಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದ ಬಹುತೇಕ ಕಡೆಗಳಲ್ಲಿ ಅನ್ನದಾಸೋಹ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಅನ್ನದಾಸೋಹದಲ್ಲಿ ಭಕ್ತರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.</p>.<p>ಪೊಲೀಸ್ ಬಂದೋಬಸ್ತ್: ವೀರಭದ್ರೇಶ್ವರ ಜಾತ್ರೆಗೆ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಜನರು ಆಗಮಿಸುವ ಹಿನ್ನೆಲೆಯಲ್ಲಿ ಚಾಂಗಲೇರಾ ಗ್ರಾಮದ ವಿವಿಧೆಡೆ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ (ಹುಮನಾಬಾದ್):</strong> ತಾಲ್ಲೂಕಿನ ಚಾಂಗಲೇರಾ ಗ್ರಾಮದ ಐತಿಹಾಸಿಕ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ಅಗ್ನಿ ತುಳಿಯುವ ಕಾರ್ಯಕ್ರಮ ಜರುಗಿತು.</p>.<p>ಇಲ್ಲಿಯ ಥೇರು ಮೈದಾನದಿಂದ ವೀರಭದ್ರೇಶ್ವರ ದೇವಸ್ಥಾನದವರೆಗಿನ ರಸ್ತೆಯುದ್ದಕ್ಕೂ ಜನಸಾಗರವೇ ನೆರೆದಿತ್ತು. ಬುಧವಾರ ಬೆಳಿಗ್ಗೆ ನಡೆದ ಅಗ್ನಿ ತುಳಿಯುವ ಕಾರ್ಯಕ್ರಮದಲ್ಲಿ ಜನರ ನೂಕುನುಗ್ಗಲು ಉಂಟಾಯಿತು.</p>.<p>ಒಂದು ಬಾರಿ ಜಾತ್ರೆಯಲ್ಲಿ ಅಗ್ನಿ ತುಳಿದವರು ಮೂರು ವರ್ಷ ಮುಂದುವರಿಸುವ ವಾಡಿಕೆಯಿರುವುದರಿಂದ ಸಾವಿರಾರು ಜನರು ಅಗ್ನಿಕುಂಡದ ಸುತ್ತ ನೆರೆದಿದ್ದರು. ಕುಂಡದಲ್ಲಿ ಕಾಯಿ ಕರ್ಪೂರ ಎಸೆದು ಐದು ಸುತ್ತು ಹಾಕಿ ಹರಕೆ ಪೂರೈಸಿದರು.</p>.<p>ಈ ಅಗ್ನಿ ತುಳಿಯುವ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ತೆಲಂಗಾಣ, ಆಂಧ್ರ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಯ ಭಕ್ತರು ಅಲ್ಲದೇ ಕಲಬುರಗಿ ಜಿಲ್ಲೆಯು ಚಿಂಚೋಳಿ , ಹುಮನಾಬಾದ್, ಚಿಟಗುಪ್ಪ ತಾಲ್ಲೂಕಿನ ಗ್ರಾಮೀಣ ಭಾಗದ ಬಹುತೇಕ ಹಳ್ಳಿಯ ಜನರು ಸರತಿ ಸಾಲಿನಲ್ಲಿ ನಿಂತು ಅಗ್ನಿ ತುಳಿದು ಹರಕೆ ತೀರಿಸಿದರು.</p>.<p>ಸಂಭ್ರಮದ ಪಲ್ಲಕಿ ಉತ್ಸವ: ಚಾಂಗಲೇರಾ ಗ್ರಾಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ರಾತ್ರಿ ವೀರಭದ್ರೇಶ್ವರ ಪಲ್ಲಕ್ಕಿ ಉತ್ಸವ ಸಂಭ್ರಮ ಸಡಗರದಿಂದ ನಡೆಯಿತು.</p>.<p>ದೇವಸ್ಥಾನದಲ್ಲಿ ರುದ್ರಾಭಿಷೇಕ, ಬಿಲ್ವಪತ್ರೆ ಅರ್ಚನೆ ನಂತರ ವೀರಭದ್ರೇಶ್ವರ ಬೆಳ್ಳಿ ಪೂಜೆ ಭಕ್ತರ ಗಮನ ಸೆಳೆಯಿತು. ನಂತರ ಅಗ್ನಿಕುಂಡ ಉತ್ಸವ ನಡೆಯಿತು. ವೀರಭದ್ರೇಶ್ವರರ ಪಲ್ಲಕ್ಕಿ ಉತ್ಸವ ದೇವಸ್ಥಾನದಿಂದ ಅಗ್ನಿ ಕುಂಡದ ವರೆಗೆ ಸಕಲ ವಾದ್ಯ ಮೇಳದೊಂದಿಗೆ ನಡೆಯಿತು.</p>.<p>ಪಲ್ಲಕ್ಕಿ ಉತ್ಸವದ ಸಂದರ್ಭದಲ್ಲಿ ಪುರುವಂತರು ವೀರಗಾಸೆ ಪ್ರದರ್ಶನ ನೀಡಿದರು. ನಂದಿಕೋಲು ಹೊತ್ತವರು, ಪಲ್ಲಕ್ಕಿ ಹೊತ್ತುಕೊಂಡ ಬಂದ ಭಕ್ತರು, ಪುರುವಂತರು ಪಲ್ಲಕ್ಕಿ ಸಮೇತವಾಗಿ ಅಗ್ನಿಕುಂಡ ಪ್ರವೇಶದ ನಂತರ ನೂರಾರು ಜನ ಭಕ್ತರು ಅಗ್ನಿಕುಂಡ ಹಾಯ್ದು ಹರಕೆಯನ್ನು ಪೂರೈಸಿದರು.</p>.<p>ಅನ್ನದಾಸೋಹ: ಜಾತ್ರೆಗೆ ಆಗಮಿಸಿದ ರಾಜ್ಯ ಹಾಗೂ ಹೊರರಾಜ್ಯದ ಭಕ್ತರಿಗಾಗಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದ ಬಹುತೇಕ ಕಡೆಗಳಲ್ಲಿ ಅನ್ನದಾಸೋಹ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಅನ್ನದಾಸೋಹದಲ್ಲಿ ಭಕ್ತರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.</p>.<p>ಪೊಲೀಸ್ ಬಂದೋಬಸ್ತ್: ವೀರಭದ್ರೇಶ್ವರ ಜಾತ್ರೆಗೆ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಜನರು ಆಗಮಿಸುವ ಹಿನ್ನೆಲೆಯಲ್ಲಿ ಚಾಂಗಲೇರಾ ಗ್ರಾಮದ ವಿವಿಧೆಡೆ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>