ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರಭದ್ರೇಶ್ವರ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಹುಮನಾಬಾದ್: ಸಾಂಕೇತಿಕ ಪಲ್ಲಕ್ಕಿ ಉತ್ಸವ
Last Updated 16 ಜನವರಿ 2021, 3:45 IST
ಅಕ್ಷರ ಗಾತ್ರ

ಚಿಟಗುಪ್ಪ: ಹುಮನಾಬಾದ್‌ನಲ್ಲಿ ವೀರಭದ್ರೇಶ್ವರ ದೇವರ ಸರಳ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ರಾಜಶೇಖರ ಪಾಟೀಲ ಅವರು ಗುರುವಾರ ರಾತ್ರಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿ, ‘ಕೋವಿಡ್‌-19 ಆತಂಕದಿಂದಾಗಿ ಕೇವಲ ಧಾರ್ಮಿಕ ವಿಧಿಗಳನ್ನು ಸೇವಾಧರಿಗಳಿಂದ ಮಾತ್ರ ನಡೆಸಿ ಜಾತ್ರೆ ಮುಗಿಸಬೇಕಾಗಿದೆ. ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಮನೆಯಲ್ಲಿಯೇ ಭಕ್ತಿ ಸೇವೆ ಸಲ್ಲಿಸಬೇಕು’ ಎಂದು ನುಡಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ರೇಣುಕಗಂಗಾಧರ ಶಿವಾಚಾರ್ಯ ಸ್ವಾಮೀಜಿ ಅವರನ್ನು ವಾದ್ಯ ಮೇಳಗಳೊಂದಿಗೆ ದೇಗುಲಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು. ಪಲ್ಲಕ್ಕಿ ಉತ್ಸವದ ಮೂಲಕ ಜಾತ್ರೆ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT