ದೇವಸ್ಥಾನ ಆಡಳಿತ ಮಂಡಳಿ ₹ 50 ಲಕ್ಷ ಮೊತ್ತದಲ್ಲಿ ನೂತನ ಅಗ್ನಿಕುಂಡ ನಿರ್ಮಿಸಿದೆ. ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ಇರುವ ಅಗ್ನಿ ಕುಂಡಗಳಿಗೆ ಇದು ಮಾದರಿಯಾಗಿದೆ. ಪ್ರತಿ ವರ್ಷದ ಜಾತ್ರೆಗೆ ಬರುವ ಭಕ್ತರು ಅಗ್ನಿ ತುಳಿಯಲು ನೂಕುನುಗ್ಗಲಿನಲ್ಲಿ ಚಡಪಡಿಸಬೇಕಾಗಿತ್ತು. ಮೂರು ವರ್ಷಗಳಿಂದ ಸುಲಭವಾಗಿ ಅಗ್ನಿ ತುಳಿದು ಬರುವ ವ್ಯವಸ್ಥೆ ಮಾಡಲಾಗಿದೆ.