<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ‘ಸಮೀಕ್ಷೆ ಹೆಸರಲ್ಲಿ ನಮ್ಮ ನಮ್ಮಲ್ಲೇ ಭಿನ್ನಾಭಿಪ್ರಾಯ ತಂದು ವೀರಶೈವ ಲಿಂಗಾಯತ ಸಮಾಜ ಒಡೆಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂಬುದನ್ನು ಸಮಾಜ ಬಾಂಧವರು ಗಂಭೀರವಾಗಿ ಪರಿಗಣಿಸಬೇಕು’ ಎಂದು ರಂಭಾಪುರಿ ವೀರಸೋಮೇಶ್ವರ ಶಿವಾಚಾರ್ಯರು ಹೇಳಿದ್ದಾರೆ.</p><p>ನಗರದಲ್ಲಿ ಶುಕ್ರವಾರ ನಡೆದ ದಸರಾ ಧರ್ಮ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p><p>‘ವೀರಶೈವ ಲಿಂಗಾಯತ ಒಂದೇ ಆಗಿದೆ. ಈ ಧರ್ಮ ಸ್ವತಂತ್ರ ಧರ್ಮ ಆಗಬೇಕು ಎಂಬುದು ನಮ್ಮ ಆಶಯ. ಇದಕ್ಕಾಗಿ ಹಲವಾರು ಸಲ ನಾವು ಪ್ರಯತ್ನಿಸಿದ್ದೇವೆ. ದೊಡ್ಡ ಸಮಾವೇಶಗಳನ್ನು ಆಯೋಜಿಸಿದ್ದೇವೆ. ಅದರಲ್ಲಿ ಗುರು–ವಿರಕ್ತರು ಪಾಲ್ಗೊಂಡಿದ್ದರೂ ನಮ್ಮ ಉದ್ದೇಶ ಈಡೇರಲಿಲ್ಲ’ ಎಂದು ಹೇಳಿದರು.</p><p>’ಬೆರಳೆಣಿಕೆಯ ಜನ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಮಕಾಲೀನ ಸಮಾಜದ ಸಮಸ್ಯೆ ಅರಿತು ಸಾಗುವುದಕ್ಕೆ ನಾವು ಒಂದು ಹೆಜ್ಜೆ ಮುಂದಿದ್ದೇವೆ. ಆದರೆ, ಇದಕ್ಕೆ ಕೆಲವರು<br>ವಿರೋಧಿಸುತ್ತಿದ್ದಾರೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ (ಬೀದರ್ ಜಿಲ್ಲೆ):</strong> ‘ಸಮೀಕ್ಷೆ ಹೆಸರಲ್ಲಿ ನಮ್ಮ ನಮ್ಮಲ್ಲೇ ಭಿನ್ನಾಭಿಪ್ರಾಯ ತಂದು ವೀರಶೈವ ಲಿಂಗಾಯತ ಸಮಾಜ ಒಡೆಯುವ ವ್ಯವಸ್ಥಿತ ಸಂಚು ನಡೆಯುತ್ತಿದೆ ಎಂಬುದನ್ನು ಸಮಾಜ ಬಾಂಧವರು ಗಂಭೀರವಾಗಿ ಪರಿಗಣಿಸಬೇಕು’ ಎಂದು ರಂಭಾಪುರಿ ವೀರಸೋಮೇಶ್ವರ ಶಿವಾಚಾರ್ಯರು ಹೇಳಿದ್ದಾರೆ.</p><p>ನಗರದಲ್ಲಿ ಶುಕ್ರವಾರ ನಡೆದ ದಸರಾ ಧರ್ಮ ಸಮ್ಮೇಳನದಲ್ಲಿ ಅವರು ಮಾತನಾಡಿದರು.</p><p>‘ವೀರಶೈವ ಲಿಂಗಾಯತ ಒಂದೇ ಆಗಿದೆ. ಈ ಧರ್ಮ ಸ್ವತಂತ್ರ ಧರ್ಮ ಆಗಬೇಕು ಎಂಬುದು ನಮ್ಮ ಆಶಯ. ಇದಕ್ಕಾಗಿ ಹಲವಾರು ಸಲ ನಾವು ಪ್ರಯತ್ನಿಸಿದ್ದೇವೆ. ದೊಡ್ಡ ಸಮಾವೇಶಗಳನ್ನು ಆಯೋಜಿಸಿದ್ದೇವೆ. ಅದರಲ್ಲಿ ಗುರು–ವಿರಕ್ತರು ಪಾಲ್ಗೊಂಡಿದ್ದರೂ ನಮ್ಮ ಉದ್ದೇಶ ಈಡೇರಲಿಲ್ಲ’ ಎಂದು ಹೇಳಿದರು.</p><p>’ಬೆರಳೆಣಿಕೆಯ ಜನ ಮೊದಲಿನಿಂದಲೂ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸಮಕಾಲೀನ ಸಮಾಜದ ಸಮಸ್ಯೆ ಅರಿತು ಸಾಗುವುದಕ್ಕೆ ನಾವು ಒಂದು ಹೆಜ್ಜೆ ಮುಂದಿದ್ದೇವೆ. ಆದರೆ, ಇದಕ್ಕೆ ಕೆಲವರು<br>ವಿರೋಧಿಸುತ್ತಿದ್ದಾರೆ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>