<p><strong>ಬೀದರ್:</strong> ಜಿಲ್ಲೆಯ ವಿವಿಧೆಡೆ ಬುಧವಾರ ವೇಮನ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಕೋವಿಡ್ ಕಾರಣ ಜಿಲ್ಲಾ ರೆಡ್ಡಿ ಸಮಾಜದ ವತಿಯಿಂದ ಇಲ್ಲಿಯ ಅಮಲಾಪುರ ರಸ್ತೆಯಲ್ಲಿ ಇರುವ ಹೇಮರೆಡ್ಡಿ ಮಲ್ಲಮ್ಮ ಮಂದಿರದಲ್ಲಿ ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ ಅವರು ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿ ಗೌರವಿಸಿದರು.<br />ವೇಮನ ಅವರು ಮನುಕುಲದ ಉದ್ಧಾರಕ್ಕೆ ಶ್ರಮಿಸಿದ್ದರು ಎಂದು ಹೇಳಿದರು.</p>.<p>ವೇಮನರ ವಿಚಾರಗಳನ್ನು ಎಲ್ಲರೂ ಅರಿಯಬೇಕು. ಆದರ್ಶ ಬದುಕು ಸಾಗಿಸಬೇಕು ಎಂದು ನುಡಿದರು.</p>.<p>ಜಿಲ್ಲಾ ರೆಡ್ಡಿ ಸಮಾಜದ ಉಪಾಧ್ಯಕ್ಷ ಚಂದ್ರಶೇಖರ ರೆಡ್ಡಿ, ಕಾರ್ಯದರ್ಶಿ ಗೋಪಾಲ ರೆಡ್ಡಿ, ಜಂಟಿ ಕಾರ್ಯದರ್ಶಿ ವೆಂಕಟ ರೆಡ್ಡಿ, ಕೃಷ್ಣಾ ರೆಡ್ಡಿ, ನರೇಂದ್ರ ರೆಡ್ಡಿ, ಸಚಿನ್ ರೆಡ್ಡಿ ಯಾಚೆ, ಗೋಪಾಲ್ ರೆಡ್ಡಿ ಅಮಲಾಪುರ ಇದ್ದರು.</p>.<p><strong>ಹೇಮರೆಡ್ಡಿ ಮಲ್ಲಮ್ಮ ಬ್ಯಾಂಕ್:</strong> ನಗರದ ಶಿವನಗರದಲ್ಲಿನ ಹೇಮರೆಡ್ಡಿ ಮಲ್ಲಮ್ಮ ವಿವಿಧೊದ್ದೇಶ ಸೌಹಾರ್ದ ಬ್ಯಾಂಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕ್ ಅಧ್ಯಕ್ಷ ಸಂಗ್ರಾಮ ರೆಡ್ಡಿ ಹುಣಸಗೇರಾ ಅವರು ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.<br />ಆಕಾಶ ರೆಡ್ಡಿ, ಶ್ರೀನಿವಾಸ ರೆಡ್ಡಿ ಮೊದಲಾದವರು ಇದ್ದರು.</p>.<p class="Briefhead"><strong>ವೈರಾಗ್ಯ ಜ್ಞಾನಿ ವೇಮನರು</strong></p>.<p>ವೈರಾಗ್ಯ ಜ್ಞಾನಿ ವೇಮನರು ಜನರಿಗೆ ವೇದಾಂತ ರಹಸ್ಯ ತಿಳಿಸುವ ಮೂಲಕ ಜನರ ಮನದಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ ಎಂದು ಜಿಲ್ಲಾ ಪಂಚಾಯಿತಿಯ ಆಡಳಿತ ಅಧೀಕ್ಷಕ ಉಮೇಶ ಜಾಬಾ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ವೇಮನರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಆಡಳಿತ ಶಾಖೆಯ ವಿಷಯ ನಿರ್ವಾಹಕ ವಿಜಯಕುಮಾರ ಮಾತನಾಡಿ, ಸರ್ವಜ್ಞರು 16ನೇ ಶತ ಮಾನದವರಾದರೇ, ವೇಮನರು 17ನೇ ಶತ ಮಾನದವರು. ಇಬ್ಬರು ವೈರಾಗ್ಯಿಗಳಾಗಿದ್ದರೂ ಜೀವನದ ನಿಜಅರ್ಥವನ್ನು ಜನ ಸಾಮಾನ್ಯರಿಗೆ ತಿಳಿಸಿದ್ದಾರೆ ಎಂದರು.</p>.<p>ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ ಅವರು ವೇಮನರ ಭಾವ ಚಿತ್ರಕ್ಕೆ ಪುಷ್ಪ ಸಮರ್ಪಿಸಿದರು.</p>.<p>ಸಿಎಒ ಜಹೀರಾ ನಸೀಮ್, ಸಿಪಿಒ ಎಸ್ಎಸ್ ಮಠಪತಿ, ಗ್ರಾಮೀಣವೃದ್ಧಿ ಪಂಚಾಯತ್ ರಾಜ್ ಇಲಾಖೆಯ ರಾಜಕುಮಾರ, ಸಹಾಯಕ ಕಾರ್ಯದರ್ಶಿ(ಅಭಿವೃದ್ಧಿ) ಅಧಿಕಾರಿ ಬೀರೇಂದ್ರಸಿಂಗ್ ಠಾಕೂರ್, ಮಹೇಶ ಪಾಟೀಲ, ಮನೋಹರ್ ಪಾಟೀಲ, ದೀಪಕ ಕಡಿಮನಿ, ಕೋಮಲಕೀರಣ, ಜ್ಯೋತಿ, ಶೇಷಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಜಿಲ್ಲೆಯ ವಿವಿಧೆಡೆ ಬುಧವಾರ ವೇಮನ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.</p>.<p>ಕೋವಿಡ್ ಕಾರಣ ಜಿಲ್ಲಾ ರೆಡ್ಡಿ ಸಮಾಜದ ವತಿಯಿಂದ ಇಲ್ಲಿಯ ಅಮಲಾಪುರ ರಸ್ತೆಯಲ್ಲಿ ಇರುವ ಹೇಮರೆಡ್ಡಿ ಮಲ್ಲಮ್ಮ ಮಂದಿರದಲ್ಲಿ ಜಿಲ್ಲಾ ರೆಡ್ಡಿ ಸಮಾಜದ ಅಧ್ಯಕ್ಷ ಶಂಕರ ರೆಡ್ಡಿ ಚಿಟ್ಟಾ ಅವರು ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ಅರ್ಪಿಸಿ ಗೌರವಿಸಿದರು.<br />ವೇಮನ ಅವರು ಮನುಕುಲದ ಉದ್ಧಾರಕ್ಕೆ ಶ್ರಮಿಸಿದ್ದರು ಎಂದು ಹೇಳಿದರು.</p>.<p>ವೇಮನರ ವಿಚಾರಗಳನ್ನು ಎಲ್ಲರೂ ಅರಿಯಬೇಕು. ಆದರ್ಶ ಬದುಕು ಸಾಗಿಸಬೇಕು ಎಂದು ನುಡಿದರು.</p>.<p>ಜಿಲ್ಲಾ ರೆಡ್ಡಿ ಸಮಾಜದ ಉಪಾಧ್ಯಕ್ಷ ಚಂದ್ರಶೇಖರ ರೆಡ್ಡಿ, ಕಾರ್ಯದರ್ಶಿ ಗೋಪಾಲ ರೆಡ್ಡಿ, ಜಂಟಿ ಕಾರ್ಯದರ್ಶಿ ವೆಂಕಟ ರೆಡ್ಡಿ, ಕೃಷ್ಣಾ ರೆಡ್ಡಿ, ನರೇಂದ್ರ ರೆಡ್ಡಿ, ಸಚಿನ್ ರೆಡ್ಡಿ ಯಾಚೆ, ಗೋಪಾಲ್ ರೆಡ್ಡಿ ಅಮಲಾಪುರ ಇದ್ದರು.</p>.<p><strong>ಹೇಮರೆಡ್ಡಿ ಮಲ್ಲಮ್ಮ ಬ್ಯಾಂಕ್:</strong> ನಗರದ ಶಿವನಗರದಲ್ಲಿನ ಹೇಮರೆಡ್ಡಿ ಮಲ್ಲಮ್ಮ ವಿವಿಧೊದ್ದೇಶ ಸೌಹಾರ್ದ ಬ್ಯಾಂಕ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕ್ ಅಧ್ಯಕ್ಷ ಸಂಗ್ರಾಮ ರೆಡ್ಡಿ ಹುಣಸಗೇರಾ ಅವರು ವೇಮನ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.<br />ಆಕಾಶ ರೆಡ್ಡಿ, ಶ್ರೀನಿವಾಸ ರೆಡ್ಡಿ ಮೊದಲಾದವರು ಇದ್ದರು.</p>.<p class="Briefhead"><strong>ವೈರಾಗ್ಯ ಜ್ಞಾನಿ ವೇಮನರು</strong></p>.<p>ವೈರಾಗ್ಯ ಜ್ಞಾನಿ ವೇಮನರು ಜನರಿಗೆ ವೇದಾಂತ ರಹಸ್ಯ ತಿಳಿಸುವ ಮೂಲಕ ಜನರ ಮನದಲ್ಲಿ ಅಚ್ಚಳಿಯದಂತೆ ಉಳಿದಿದ್ದಾರೆ ಎಂದು ಜಿಲ್ಲಾ ಪಂಚಾಯಿತಿಯ ಆಡಳಿತ ಅಧೀಕ್ಷಕ ಉಮೇಶ ಜಾಬಾ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ವೇಮನರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಜಿಲ್ಲಾ ಪಂಚಾಯಿತಿ ಆಡಳಿತ ಶಾಖೆಯ ವಿಷಯ ನಿರ್ವಾಹಕ ವಿಜಯಕುಮಾರ ಮಾತನಾಡಿ, ಸರ್ವಜ್ಞರು 16ನೇ ಶತ ಮಾನದವರಾದರೇ, ವೇಮನರು 17ನೇ ಶತ ಮಾನದವರು. ಇಬ್ಬರು ವೈರಾಗ್ಯಿಗಳಾಗಿದ್ದರೂ ಜೀವನದ ನಿಜಅರ್ಥವನ್ನು ಜನ ಸಾಮಾನ್ಯರಿಗೆ ತಿಳಿಸಿದ್ದಾರೆ ಎಂದರು.</p>.<p>ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ ಅವರು ವೇಮನರ ಭಾವ ಚಿತ್ರಕ್ಕೆ ಪುಷ್ಪ ಸಮರ್ಪಿಸಿದರು.</p>.<p>ಸಿಎಒ ಜಹೀರಾ ನಸೀಮ್, ಸಿಪಿಒ ಎಸ್ಎಸ್ ಮಠಪತಿ, ಗ್ರಾಮೀಣವೃದ್ಧಿ ಪಂಚಾಯತ್ ರಾಜ್ ಇಲಾಖೆಯ ರಾಜಕುಮಾರ, ಸಹಾಯಕ ಕಾರ್ಯದರ್ಶಿ(ಅಭಿವೃದ್ಧಿ) ಅಧಿಕಾರಿ ಬೀರೇಂದ್ರಸಿಂಗ್ ಠಾಕೂರ್, ಮಹೇಶ ಪಾಟೀಲ, ಮನೋಹರ್ ಪಾಟೀಲ, ದೀಪಕ ಕಡಿಮನಿ, ಕೋಮಲಕೀರಣ, ಜ್ಯೋತಿ, ಶೇಷಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>