<p><strong>ಕಮಠಾಣ (ಜನವಾಡ):</strong> ‘ನವೀನ ತಂತ್ರಜ್ಞಾನ ಪರಿಚಯಿಸಲು ತರಬೇತಿಗಳು ಸಹಕಾರಿಯಾಗುತ್ತವೆ’ ಎಂದು ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಸಚಿವ ಡಾ.ಪಿ.ಟಿ.ರಮೇಶ್ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಪಶು ವೈದ್ಯಾಧಿಕಾರಿಗಳು ಹಾಗೂ ಆತ್ಮಾ ಸಿಬ್ಬಂದಿಗೆ ಹಮ್ಮಿಕೊಳ್ಳಲಾದ ‘ಸುಸ್ಥಿರ ಜಾನುವಾರು ಉತ್ಪಾದನೆಗೆ ನವೀನ ಪದ್ಧತಿಗಳು’ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪಶು ವೈದ್ಯಾಧಿಕಾರಿಗಳ ತರಬೇತಿ ಹೊಸ ಸುಸ್ಥಿರ ಜಾನುವಾರು ಉತ್ಪಾದನಾ ವ್ಯವಸ್ಥೆ, ಪ್ರಾಣಿಗಳ ಆರೋಗ್ಯ ನಿರ್ವಹಣೆ, ರೈತರಿಗೆ ಪ್ರಯೋಜನಕಾರಿ ಹವಾಮಾನ ಇತ್ಯಾದಿಗಳನ್ನು ಕೇಂದ್ರೀಕರಿಸಿದೆ’ ಎಂದು ತಿಳಿಸಿದರು.</p>.<p>‘ಶಿಬಿರಾರ್ಥಿಗಳು ತರಬೇತಿಯಲ್ಲಿ ಪಡೆದ ಜ್ಞಾನವನ್ನು ರೈತರೊಂದಿಗೆ ಹಂಚಿಕೊಳ್ಳಬೇಕು. ಅವರ ಆದಾಯ ಹೆಚ್ಚಳಕ್ಕೆ ನೆರವಾಗಬೇಕು’ ಎಂದು ಸಲಹೆ ಮಾಡಿದರು.</p>.<p>ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಆರ್. ಮಾತನಾಡಿ,‘ಸುಸ್ಥಿರ ಜಾನುವಾರು ಮತ್ತು ಕೃಷಿ ಉತ್ಪಾದನೆಯು ರೈತರ ಆದಾಯ ವೃದ್ಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ’ ಎಂದು ತಿಳಿಸಿದರು.</p>.<p>‘ರೈತರು ಕೃಷಿ ಜತೆಗೆ ಪಶು ಪಾಲನೆಯಂಥ ಉಪ ಕಸುಬು ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು’ ಎಂದರು.</p>.<p>ಧಾರವಾಡ ಕೃಷಿ ವಿಶ್ವವಿದ್ಯಾಲಯದ ಗೀತಾ ಲೋಳಸುರಮಠ, ಡಾ.ಎಸ್.ಎನ್.ಜಾಧವ, ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಬಸವರಾಜ ಅವಟಿ ಮಾತನಾಡಿದರು. ಪಶು ವೈದ್ಯಕೀಯ ಕಾಲೇಜಿನ ಡೀನ್ ಡಾ.ಎಂ.ಕೆ. ತಾಂದಳೆ ಅಧ್ಯಕ್ಷತೆ ವಹಿಸಿದ್ದರು.</p>.<p>ಸಹ ಪ್ರಾಧ್ಯಾಪಕರಾದ ಡಾ.ಪ್ರಕಾಶಕುಮಾರ ರಾಠೋಡ್, ಡಾ.ಚನ್ನಪ್ಪಗೌಡ ಬಿರಾದಾರ, ಸಹಾಯಕ ಪ್ರಾಧ್ಯಾಪಕರಾದ ಡಾ.ಆಕಾಶ್ ಹಾಗೂ ಡಾ.ಕೊಟ್ರೇಶ್ ಇದ್ದರು.</p>.<p>ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಪಶು ವೈದ್ಯಾಧಿಕಾರಿಗಳು ಹಾಗೂ ಆತ್ಮಾ ಸಿಬ್ಬಂದಿ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಠಾಣ (ಜನವಾಡ):</strong> ‘ನವೀನ ತಂತ್ರಜ್ಞಾನ ಪರಿಚಯಿಸಲು ತರಬೇತಿಗಳು ಸಹಕಾರಿಯಾಗುತ್ತವೆ’ ಎಂದು ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಸಚಿವ ಡಾ.ಪಿ.ಟಿ.ರಮೇಶ್ ಹೇಳಿದರು.</p>.<p>ಬೀದರ್ ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಪಶು ವೈದ್ಯಾಧಿಕಾರಿಗಳು ಹಾಗೂ ಆತ್ಮಾ ಸಿಬ್ಬಂದಿಗೆ ಹಮ್ಮಿಕೊಳ್ಳಲಾದ ‘ಸುಸ್ಥಿರ ಜಾನುವಾರು ಉತ್ಪಾದನೆಗೆ ನವೀನ ಪದ್ಧತಿಗಳು’ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪಶು ವೈದ್ಯಾಧಿಕಾರಿಗಳ ತರಬೇತಿ ಹೊಸ ಸುಸ್ಥಿರ ಜಾನುವಾರು ಉತ್ಪಾದನಾ ವ್ಯವಸ್ಥೆ, ಪ್ರಾಣಿಗಳ ಆರೋಗ್ಯ ನಿರ್ವಹಣೆ, ರೈತರಿಗೆ ಪ್ರಯೋಜನಕಾರಿ ಹವಾಮಾನ ಇತ್ಯಾದಿಗಳನ್ನು ಕೇಂದ್ರೀಕರಿಸಿದೆ’ ಎಂದು ತಿಳಿಸಿದರು.</p>.<p>‘ಶಿಬಿರಾರ್ಥಿಗಳು ತರಬೇತಿಯಲ್ಲಿ ಪಡೆದ ಜ್ಞಾನವನ್ನು ರೈತರೊಂದಿಗೆ ಹಂಚಿಕೊಳ್ಳಬೇಕು. ಅವರ ಆದಾಯ ಹೆಚ್ಚಳಕ್ಕೆ ನೆರವಾಗಬೇಕು’ ಎಂದು ಸಲಹೆ ಮಾಡಿದರು.</p>.<p>ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಆರ್. ಮಾತನಾಡಿ,‘ಸುಸ್ಥಿರ ಜಾನುವಾರು ಮತ್ತು ಕೃಷಿ ಉತ್ಪಾದನೆಯು ರೈತರ ಆದಾಯ ವೃದ್ಧಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ’ ಎಂದು ತಿಳಿಸಿದರು.</p>.<p>‘ರೈತರು ಕೃಷಿ ಜತೆಗೆ ಪಶು ಪಾಲನೆಯಂಥ ಉಪ ಕಸುಬು ಕೈಗೊಂಡು ಆರ್ಥಿಕವಾಗಿ ಸದೃಢರಾಗಬೇಕು’ ಎಂದರು.</p>.<p>ಧಾರವಾಡ ಕೃಷಿ ವಿಶ್ವವಿದ್ಯಾಲಯದ ಗೀತಾ ಲೋಳಸುರಮಠ, ಡಾ.ಎಸ್.ಎನ್.ಜಾಧವ, ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಬಸವರಾಜ ಅವಟಿ ಮಾತನಾಡಿದರು. ಪಶು ವೈದ್ಯಕೀಯ ಕಾಲೇಜಿನ ಡೀನ್ ಡಾ.ಎಂ.ಕೆ. ತಾಂದಳೆ ಅಧ್ಯಕ್ಷತೆ ವಹಿಸಿದ್ದರು.</p>.<p>ಸಹ ಪ್ರಾಧ್ಯಾಪಕರಾದ ಡಾ.ಪ್ರಕಾಶಕುಮಾರ ರಾಠೋಡ್, ಡಾ.ಚನ್ನಪ್ಪಗೌಡ ಬಿರಾದಾರ, ಸಹಾಯಕ ಪ್ರಾಧ್ಯಾಪಕರಾದ ಡಾ.ಆಕಾಶ್ ಹಾಗೂ ಡಾ.ಕೊಟ್ರೇಶ್ ಇದ್ದರು.</p>.<p>ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ಪಶು ವೈದ್ಯಾಧಿಕಾರಿಗಳು ಹಾಗೂ ಆತ್ಮಾ ಸಿಬ್ಬಂದಿ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>