ಸೋಮವಾರ, 25 ಆಗಸ್ಟ್ 2025
×
ADVERTISEMENT
ADVERTISEMENT

ಬೀದರ್‌ | ಪಶು ವಿ.ವಿ. ಘಟಿಕೋತ್ಸವ: ರೈತನ ಮಗಳಿಗೆ 15 ಚಿನ್ನದ ಪದಕ

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ನಾಗೇನಹಳ್ಳಿಯ ರವೀನಾ ಸಾಧನೆ
Published : 21 ಮಾರ್ಚ್ 2025, 23:30 IST
Last Updated : 21 ಮಾರ್ಚ್ 2025, 23:30 IST
ಫಾಲೋ ಮಾಡಿ
Comments
ಹೆಚ್ಚಿನವರಿಗೆ ಮೆಡಿಕಲ್‌ ಎಂಜಿನಿಯರಿಂಗ್‌ ಅಂದ್ರೆ ಇಷ್ಟ. ನನಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ ಇಷ್ಟ. ಹೀಗಾಗಿ ವೆಟರ್ನರಿ ಸೈನ್ಸ್‌ ಆಯ್ಕೆ ಮಾಡಿಕೊಂಡೆ
–ರವೀನಾ ಕೆ.ಎಸ್‌. ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ
25ಕ್ಕೆ ಪಶು ವಿ.ವಿ. ಘಟಿಕೋತ್ಸವ
ಬೀದರ್‌ನಲ್ಲಿರುವ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಮಾ. 25ರಂದು ಬೆಳಿಗ್ಗೆ 11ಕ್ಕೆ ಜರುಗಲಿದೆ. ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಅವರು 2022–23ನೇ ಸಾಲಿನ 16 ಸ್ನಾತಕ ಪದವೀಧರರಿಗೆ 53 ಚಿನ್ನದ ಪದಕ, ಸ್ನಾತಕೋತ್ತರ ಪದವಿ ಪೂರೈಸಿದ 21 ವಿದ್ಯಾರ್ಥಿಗಳಿಗೆ 34 ಚಿನ್ನದ ಪದಕ, ಡಾಕ್ಟರೇಟ್‌ ಪದವಿ ಮುಗಿಸಿರುವ 7 ವಿದ್ಯಾರ್ಥಿಗಳಿಗೆ ತಲಾ ಒಂದು ಚಿನ್ನದ ಪದಕ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ತೋರಿದ ಇಬ್ಬರಿಗೆ ತಲಾ ಒಂದು ಚಿನ್ನದ ಪದಕ, ಪದವಿ ಪ್ರದಾನ ಮಾಡಲಿದ್ದಾರೆ. ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ ನಿರ್ದೇಶಕ ಡಾ. ನವೀನಕುಮಾರ ಘಟಿಕೋತ್ಸವ ಭಾಷಣ ಮಾಡುವರು. ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್‌ ಆಗಮಿಸುವರು ಎಂದು ವಿ.ವಿ. ಕುಲಪತಿ ಪ್ರೊ.ಕೆ.ಸಿ. ವೀರಣ್ಣ ಶುಕ್ರವಾರ ತಿಳಿಸಿದರು.
ದಕ್ಷೀತ್‌ ಪಿ.ಎಲ್‌.
ದಕ್ಷೀತ್‌ ಪಿ.ಎಲ್‌.
ಪಿಜಿಯಲ್ಲಿ ದಕ್ಷೀತ್‌ಗೆ 6 ಚಿನ್ನದ ಪದಕ
ಚಿತ್ರದುರ್ಗದ ಚಳ್ಳಕೆರೆಯ ಚಿಕ್ಕೇನಹಳ್ಳಿ ಗ್ರಾಮದ ದಕ್ಷೀತ್‌ ಪಿ.ಎಲ್‌. ಅವರು ಎಂವಿಎಸ್‌ಸಿ ಸ್ನಾತಕೋತ್ತರ ಪದವಿಯಲ್ಲಿ ಆರು ಚಿನ್ನದ ಪದಕಗಳನ್ನು ಗಳಿಸಿದ್ದಾರೆ. ಇವರು ಬೆಂಗಳೂರಿನ ಪಶು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯಾಗಿದ್ದು, 2022–23ನೇ ಸಾಲಿನಲ್ಲಿ ಈ ಸಾಧನೆ ಮಾಡಿದ್ದಾರೆ. ಸದ್ಯ ಬೆಂಗಳೂರಿನ ಪಶು ವಿ.ವಿ.ಯಲ್ಲೇ ಪಿಎಚ್‌.ಡಿ ಅಧ್ಯಯನ ಮಾಡುತ್ತಿದ್ದಾರೆ. ‘ಪೋಷಕರ ಬೆಂಬಲ, ನಾನು ಮನಸ್ಸಿಟ್ಟು ಓದಿದ ಕಾರಣ ಉತ್ತಮ ಫಲಿತಾಂಶ ಬಂದಿದೆ. ಈ ಕೋರ್ಸ್‌ ಇಷ್ಟಪಟ್ಟು ಆಯ್ಕೆ ಮಾಡಿಕೊಂಡಿದ್ದೆ. ಪಶು ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಭವಿಷ್ಯದ ದಿನಗಳಲ್ಲಿ ಸಾಕಷ್ಟು ಬೆಲೆ ಇದೆ’ ಎಂದು ದಕ್ಷೀತ್‌ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT