<p><strong>ಬೀದರ್:</strong> ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಕಲಿ ಬಿಲ್ ಸೃಷ್ಟಿಸಿ ₹45 ಕೋಟಿ ಹಗರಣ ಮಾಡಿ, ಅಕ್ರಮ ಎಸಗಿರುವ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ವಿವಿ ವಿಶ್ರಾಂತ ಕುಲಪತಿ, ನಿವೃತ್ತ ಕಂಟ್ರೋಲರ್ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.</p><p>ವಿಶ್ರಾಂತ ಕುಲಪತಿ ಎಚ್.ಡಿ. ನಾರಾಯಣಸ್ವಾಮಿ, ನಿವೃತ್ತ ಪ್ರಭಾರ ಹಣಕಾಸು ನಿಯಂತ್ರಣಾಧಿಕಾರಿ ಕೆ.ಎಲ್. ಸುರೇಶ್, ಎಫ್.ಡಿ.ಎ. ಮೃತ್ಯುಂಜಯ ಹಿರೇಮಠ, ಬೆಂಗಳೂರು ಎಂಟರ್ ಪ್ರೈಸೆಸ್ ಮಾಲೀಕರಾದ ಬೊಪ್ಪಣ್ಣ, ಮಂಜುನಾಥ ಹಾಗೂ ರಾಮಗೊಂಡ ಬಂಧಿತರು.</p><p> 2017-18ರಲ್ಲಿ ₹45 ಕೋಟಿಗೂ ಅಧಿಕ ಹಣ ನಕಲಿ ಬಿಲ್ ಸೃಷ್ಟಿಸಿ ಅಕ್ರಮ ಎಸಗಿರುವ ಆರೋಪವಿದೆ. ಈ ಅವಧಿಯಲ್ಲಿ ನಾರಾಯಣಸ್ವಾಮಿ ಕುಲಪತಿ, ಕೆ.ಎಲ್.ಸುರೇಶ್ ಕಂಟ್ರೋಲರ್ ಆಗಿದ್ದರು. ವಿವಿ ಎಫ್.ಡಿ.ಎ. ಮೃತ್ಯುಂಜಯ ಹಿರೇಮಠ ಅವರು ಬೆಂಗಳೂರಿನ ಖಾಸಗಿ ಎಂಟರ್ ಪ್ರೈಸೆಸ್ ಜೊತೆಯಲ್ಲಿ ಸೇರಿಕೊಂಡು ಅಕ್ರಮ ಎಸಗಿರುವ ಆರೋಪವಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ಮಂಗಳವಾರ 'ಪ್ರಜಾವಾಣಿ'ಗೆ ತಿಳಿಸಿವೆ.</p><p>ಪ್ರಕರಣ ಸಂಬಂಧ ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು. ಇದರ ಬೆನ್ನಲ್ಲೇ ಸಕ್ರಿಯವಾದ ಲೋಕಾಯುಕ್ತ ಪೊಲೀಸರು ಕೆಲವರನ್ನು ಬೀದರ್ ಹಾಗೂ ಕೆಲ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಬೀದರ್ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.</p><p>ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಬಿಕರ್, ಐಜಿಪಿ ಎ.ಎಸ್.ಸುಬ್ರಹ್ಮಣ್ಯಶ್ವರರಾವ್, ಎಸ್ಪಿ ಗಳಾದ ಬದ್ರಿನಾಥ, ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಬೀದರ್ ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾಯ, ಸಂತೋಷ ರಾಠೋಡ್ ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಇಲ್ಲಿನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಕಲಿ ಬಿಲ್ ಸೃಷ್ಟಿಸಿ ₹45 ಕೋಟಿ ಹಗರಣ ಮಾಡಿ, ಅಕ್ರಮ ಎಸಗಿರುವ ಆರೋಪದ ಮೇರೆಗೆ ಲೋಕಾಯುಕ್ತ ಪೊಲೀಸರು ವಿವಿ ವಿಶ್ರಾಂತ ಕುಲಪತಿ, ನಿವೃತ್ತ ಕಂಟ್ರೋಲರ್ ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.</p><p>ವಿಶ್ರಾಂತ ಕುಲಪತಿ ಎಚ್.ಡಿ. ನಾರಾಯಣಸ್ವಾಮಿ, ನಿವೃತ್ತ ಪ್ರಭಾರ ಹಣಕಾಸು ನಿಯಂತ್ರಣಾಧಿಕಾರಿ ಕೆ.ಎಲ್. ಸುರೇಶ್, ಎಫ್.ಡಿ.ಎ. ಮೃತ್ಯುಂಜಯ ಹಿರೇಮಠ, ಬೆಂಗಳೂರು ಎಂಟರ್ ಪ್ರೈಸೆಸ್ ಮಾಲೀಕರಾದ ಬೊಪ್ಪಣ್ಣ, ಮಂಜುನಾಥ ಹಾಗೂ ರಾಮಗೊಂಡ ಬಂಧಿತರು.</p><p> 2017-18ರಲ್ಲಿ ₹45 ಕೋಟಿಗೂ ಅಧಿಕ ಹಣ ನಕಲಿ ಬಿಲ್ ಸೃಷ್ಟಿಸಿ ಅಕ್ರಮ ಎಸಗಿರುವ ಆರೋಪವಿದೆ. ಈ ಅವಧಿಯಲ್ಲಿ ನಾರಾಯಣಸ್ವಾಮಿ ಕುಲಪತಿ, ಕೆ.ಎಲ್.ಸುರೇಶ್ ಕಂಟ್ರೋಲರ್ ಆಗಿದ್ದರು. ವಿವಿ ಎಫ್.ಡಿ.ಎ. ಮೃತ್ಯುಂಜಯ ಹಿರೇಮಠ ಅವರು ಬೆಂಗಳೂರಿನ ಖಾಸಗಿ ಎಂಟರ್ ಪ್ರೈಸೆಸ್ ಜೊತೆಯಲ್ಲಿ ಸೇರಿಕೊಂಡು ಅಕ್ರಮ ಎಸಗಿರುವ ಆರೋಪವಿದೆ ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ಮಂಗಳವಾರ 'ಪ್ರಜಾವಾಣಿ'ಗೆ ತಿಳಿಸಿವೆ.</p><p>ಪ್ರಕರಣ ಸಂಬಂಧ ನ್ಯಾಯಾಲಯ ವಾರಂಟ್ ಜಾರಿಗೊಳಿಸಿತ್ತು. ಇದರ ಬೆನ್ನಲ್ಲೇ ಸಕ್ರಿಯವಾದ ಲೋಕಾಯುಕ್ತ ಪೊಲೀಸರು ಕೆಲವರನ್ನು ಬೀದರ್ ಹಾಗೂ ಕೆಲ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಬೀದರ್ ನ್ಯಾಯಾಲಯಕ್ಕೆ ಕರೆತಂದಿದ್ದಾರೆ.</p><p>ಲೋಕಾಯುಕ್ತ ಎಡಿಜಿಪಿ ಮನೀಷ್ ಕರ್ಬಿಕರ್, ಐಜಿಪಿ ಎ.ಎಸ್.ಸುಬ್ರಹ್ಮಣ್ಯಶ್ವರರಾವ್, ಎಸ್ಪಿ ಗಳಾದ ಬದ್ರಿನಾಥ, ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಬೀದರ್ ಲೋಕಾಯುಕ್ತ ಡಿವೈಎಸ್ಪಿ ಹಣಮಂತರಾಯ, ಸಂತೋಷ ರಾಠೋಡ್ ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>