ವಾರ್ಷಿಕೋತ್ಸವದಲ್ಲಿ ಸಿಎಎ, ಎನ್ಆರ್ಸಿ ಬಗ್ಗೆ ಮಕ್ಕಳಿಂದ ಅವಹೇಳನಕಾರಿ ಮಾತುಗಳನ್ನು ಆಡಿಸಲಾಗಿದೆ. ಪ್ರಧಾನಿಗೆ ಅಪಮಾನವಾಗುವ ರೀತಿಯಲ್ಲಿ ನಡೆದುಕೊಳ್ಳಲಾಗಿದೆ. ನಾಟಕ ಏರ್ಪಡಿಸಿದ ಶಿಕ್ಷಕರು, ಶಾಲಾ ಆಡಳಿತ ಮಂಡಳಿ ಹಾಗೂ ನಾಟಕ ನೋಡಿ ಚಪ್ಪಾಳೆ ತಟ್ಟಿದವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಅವರಿಗೆ ನೀಡಿರುವ ಡಾಕ್ಟರೇಟ್ ಪದವಿಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.