<p><strong>ಬೀದರ್</strong>: ಜಿಲ್ಲೆಯಾದ್ಯಂತ ವಿಜಯ ದಶಮಿ ಪ್ರಯುಕ್ತ ಸೀಮೋಲ್ಲಂಘನೆ ಕಾರ್ಯಕ್ರಮಗಳು ಶುಕ್ರವಾರ ಸರಳವಾಗಿ ನಡೆದವು. ವಿವಿಧ ದೇವಿ ಮಂದಿರಗಳಲ್ಲಿ ಸಾಂಕೇತಿಕ ಪಲ್ಲಕ್ಕಿ ಉತ್ಸವ ಹಾಗೂ ಹಾಗೂ ಸಂಜೆ ರಾವಣನ ಪ್ರತಿಕೃತಿ ದಹನ ಕಾರ್ಯಕ್ರಮ ನಡೆಯಿತು.</p>.<p>ದೇವಿ ಮಂದಿರಗಳಲ್ಲಿ ದುರ್ಗೆಯ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ ಒಂಬತ್ತು ದಿನ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ದೇವಿಗೆ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಶುಕ್ರವಾರ ಮಹಿಳೆಯರು ಆರತಿ ಹಿಡಿದು ದೇವಿ ಮಂದಿರಕ್ಕೆ ನಡಿಗೆಯಲ್ಲಿ ಬಂದು ದೇವರಿಗೆ ಬನ್ನಿ ಮುಡಿಸಿದರು.</p>.<p>ಕೇಂದ್ರ ಬಸ್ ನಿಲ್ದಾಣ ಸಮೀಪದ ದೇವಿ ಮಂದಿರ, ಸರ್ವಿಸ್ ಸ್ಟಾಂಡ್ ಭವಾನಿ ದೇವಿ ಮಂದಿರ, ಮಂಗಲಪೇಟೆ, ಬ್ರಹ್ಮನವಾಡಿ, ದರ್ಜಿಗಲ್ಲಿ ಹಾಗೂ ಬೆನಕನಹಳ್ಳಿ ದೇವಿ ಮಂದಿರಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಭಕ್ತರು ಮನೆಗಳಲ್ಲಿ ಪ್ರತಿಷ್ಠಾಪಿಸಿದ ಘಟ್ಟಗಳಲ್ಲಿ ಮೊಳಕೆಯೊಡೆದಿದ್ದ ಸಸಿ ಹಾಗೂ ಬನ್ನಿ ಎಲೆಗಳನ್ನು ದೇವರ ಮುಡಿಗೇರಿಸಿ ನೈವೇದ್ಯ ಸಮರ್ಪಿಸಿದರು. ದೇವರ ಕೃಪೆಗೆ ಪಾತ್ರರಾದರು. ಸಂಜೆ ಬಂಧು ಬಳಗದವರಿಗೆ ಬನ್ನಿ ಎಲೆಗಳನ್ನು ಕೊಟ್ಟು ಶುಭ ಹಾರೈಸಿದರು.</p>.<p class="Subhead">ಸೀಮೋಲ್ಲಂಘನ ಕಾರ್ಯಕ್ರಮ: ಸಂಗಮೇಶ್ವರ ಹಾಗೂ ಅಲ್ಲಮಪ್ರಭು ನಗರದಲ್ಲಿ ಶುಕ್ರವಾರ ದಸರಾ ನಿಮಿತ್ತ ಸೀಮೋಲ್ಲಂಘನ ಕಾರ್ಯಕ್ರಮ ನಡೆಯಿತು. ನಗರಸಭೆ ಸದಸ್ಯ ರಾಜಾರಾಮ ಚಿಟ್ಟಾ ಪೂಜೆ ಸಲ್ಲಿಸಿ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಮುಖರಾದ ಕರಬಸಯ್ಯ, ಬಿ.ವೈಜಿನಾಥ, ಮನೋಹರರಾವ್, ಶಿವಪುತ್ರ, ಶಾಮಣ್ಣ ಇದ್ದರು.</p>.<p class="Subhead"><strong>ರಾವಣ ದಹನ:</strong> ಶ್ರೀ ರಾಮಲೀಲಾ ಉತ್ಸವ ಸಮಿತಿ ವತಿಯಿಂದ ವಿಜಯದಶಮಿ ಪ್ರಯುಕ್ತ ನಗರದ ಸಾಯಿ ಆದರ್ಶ ಶಾಲೆಯ ಆವರಣದಲ್ಲಿ ಚಿಕ್ಕದಾದ ರಾವಣನ ಪ್ರತಿಕೃತಿ ನಿರ್ಮಿಸಿ ದಹನ ಮಾಡಲಾಯಿತು. ಈ ವರ್ಷವೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿಲ್ಲ.</p>.<p>ಶ್ರೀ ರಾಮಲೀಲಾ ಉತ್ಸವ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಈಶ್ವರಸಿಂಗ್ ಠಾಕೂರ್, ಅಧ್ಯಕ್ಷ ಚಂದ್ರಶೇಖರ ಗಾದಾ, ರಾಜಕುಮಾರ ಅಗರವಾಲ್, ನಿಲೇಶ್ ರಕ್ಷಾಳ್, ಮಹೇಶ್ವರ ಸ್ವಾಮಿ, ಅನಿಲ ರಾಜಗೀರಾ, ಸುನೀಲ್ ಕಟಗಿ, ಶಂಕರ ಕೊಟ್ಟರಕಿ, ವಿನೋದ ಪಾಟೀಲ, ರಾಜುಕುಮಾರ ಜಮಾದಾರ ಸಾಂಕೇತಿಕವಾಗಿ ಕಾರ್ಯಕ್ರಮ<br />ನಡೆಸಿಕೊಟ್ಟರು.</p>.<p class="Subhead">ನರಸಿಂಹ ಝರಣಾ ದೇವಸ್ಥಾನದಲ್ಲಿ ವಿಶೇಷ ಪೂಜೆ: ವಿಜಯ ದಶಮಿ ಪ್ರಯುಕ್ತ ದುಷ್ಟ ಶಕ್ತಿಗಳ ಸಂಹಾರ ಹಾಗೂ ಕೋವಿಡ್ ನಿರ್ಮೂಲನೆಯಾಗಿ ಎಲ್ಲರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿ ಬೀದರ್ ಹೊರ ವಲಯದಲ್ಲಿರುವ ನರಸಿಂಹ ಝರಣಾ ಗುಹಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.</p>.<p>ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾವ್ ಕುಲಕರ್ಣಿ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಜಿಲ್ಲೆಯಾದ್ಯಂತ ವಿಜಯ ದಶಮಿ ಪ್ರಯುಕ್ತ ಸೀಮೋಲ್ಲಂಘನೆ ಕಾರ್ಯಕ್ರಮಗಳು ಶುಕ್ರವಾರ ಸರಳವಾಗಿ ನಡೆದವು. ವಿವಿಧ ದೇವಿ ಮಂದಿರಗಳಲ್ಲಿ ಸಾಂಕೇತಿಕ ಪಲ್ಲಕ್ಕಿ ಉತ್ಸವ ಹಾಗೂ ಹಾಗೂ ಸಂಜೆ ರಾವಣನ ಪ್ರತಿಕೃತಿ ದಹನ ಕಾರ್ಯಕ್ರಮ ನಡೆಯಿತು.</p>.<p>ದೇವಿ ಮಂದಿರಗಳಲ್ಲಿ ದುರ್ಗೆಯ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿ ಒಂಬತ್ತು ದಿನ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ದೇವಿಗೆ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಶುಕ್ರವಾರ ಮಹಿಳೆಯರು ಆರತಿ ಹಿಡಿದು ದೇವಿ ಮಂದಿರಕ್ಕೆ ನಡಿಗೆಯಲ್ಲಿ ಬಂದು ದೇವರಿಗೆ ಬನ್ನಿ ಮುಡಿಸಿದರು.</p>.<p>ಕೇಂದ್ರ ಬಸ್ ನಿಲ್ದಾಣ ಸಮೀಪದ ದೇವಿ ಮಂದಿರ, ಸರ್ವಿಸ್ ಸ್ಟಾಂಡ್ ಭವಾನಿ ದೇವಿ ಮಂದಿರ, ಮಂಗಲಪೇಟೆ, ಬ್ರಹ್ಮನವಾಡಿ, ದರ್ಜಿಗಲ್ಲಿ ಹಾಗೂ ಬೆನಕನಹಳ್ಳಿ ದೇವಿ ಮಂದಿರಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.</p>.<p>ಭಕ್ತರು ಮನೆಗಳಲ್ಲಿ ಪ್ರತಿಷ್ಠಾಪಿಸಿದ ಘಟ್ಟಗಳಲ್ಲಿ ಮೊಳಕೆಯೊಡೆದಿದ್ದ ಸಸಿ ಹಾಗೂ ಬನ್ನಿ ಎಲೆಗಳನ್ನು ದೇವರ ಮುಡಿಗೇರಿಸಿ ನೈವೇದ್ಯ ಸಮರ್ಪಿಸಿದರು. ದೇವರ ಕೃಪೆಗೆ ಪಾತ್ರರಾದರು. ಸಂಜೆ ಬಂಧು ಬಳಗದವರಿಗೆ ಬನ್ನಿ ಎಲೆಗಳನ್ನು ಕೊಟ್ಟು ಶುಭ ಹಾರೈಸಿದರು.</p>.<p class="Subhead">ಸೀಮೋಲ್ಲಂಘನ ಕಾರ್ಯಕ್ರಮ: ಸಂಗಮೇಶ್ವರ ಹಾಗೂ ಅಲ್ಲಮಪ್ರಭು ನಗರದಲ್ಲಿ ಶುಕ್ರವಾರ ದಸರಾ ನಿಮಿತ್ತ ಸೀಮೋಲ್ಲಂಘನ ಕಾರ್ಯಕ್ರಮ ನಡೆಯಿತು. ನಗರಸಭೆ ಸದಸ್ಯ ರಾಜಾರಾಮ ಚಿಟ್ಟಾ ಪೂಜೆ ಸಲ್ಲಿಸಿ ಬನ್ನಿ ಮುಡಿಯುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಮುಖರಾದ ಕರಬಸಯ್ಯ, ಬಿ.ವೈಜಿನಾಥ, ಮನೋಹರರಾವ್, ಶಿವಪುತ್ರ, ಶಾಮಣ್ಣ ಇದ್ದರು.</p>.<p class="Subhead"><strong>ರಾವಣ ದಹನ:</strong> ಶ್ರೀ ರಾಮಲೀಲಾ ಉತ್ಸವ ಸಮಿತಿ ವತಿಯಿಂದ ವಿಜಯದಶಮಿ ಪ್ರಯುಕ್ತ ನಗರದ ಸಾಯಿ ಆದರ್ಶ ಶಾಲೆಯ ಆವರಣದಲ್ಲಿ ಚಿಕ್ಕದಾದ ರಾವಣನ ಪ್ರತಿಕೃತಿ ನಿರ್ಮಿಸಿ ದಹನ ಮಾಡಲಾಯಿತು. ಈ ವರ್ಷವೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿಲ್ಲ.</p>.<p>ಶ್ರೀ ರಾಮಲೀಲಾ ಉತ್ಸವ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಈಶ್ವರಸಿಂಗ್ ಠಾಕೂರ್, ಅಧ್ಯಕ್ಷ ಚಂದ್ರಶೇಖರ ಗಾದಾ, ರಾಜಕುಮಾರ ಅಗರವಾಲ್, ನಿಲೇಶ್ ರಕ್ಷಾಳ್, ಮಹೇಶ್ವರ ಸ್ವಾಮಿ, ಅನಿಲ ರಾಜಗೀರಾ, ಸುನೀಲ್ ಕಟಗಿ, ಶಂಕರ ಕೊಟ್ಟರಕಿ, ವಿನೋದ ಪಾಟೀಲ, ರಾಜುಕುಮಾರ ಜಮಾದಾರ ಸಾಂಕೇತಿಕವಾಗಿ ಕಾರ್ಯಕ್ರಮ<br />ನಡೆಸಿಕೊಟ್ಟರು.</p>.<p class="Subhead">ನರಸಿಂಹ ಝರಣಾ ದೇವಸ್ಥಾನದಲ್ಲಿ ವಿಶೇಷ ಪೂಜೆ: ವಿಜಯ ದಶಮಿ ಪ್ರಯುಕ್ತ ದುಷ್ಟ ಶಕ್ತಿಗಳ ಸಂಹಾರ ಹಾಗೂ ಕೋವಿಡ್ ನಿರ್ಮೂಲನೆಯಾಗಿ ಎಲ್ಲರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿ ಬೀದರ್ ಹೊರ ವಲಯದಲ್ಲಿರುವ ನರಸಿಂಹ ಝರಣಾ ಗುಹಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.</p>.<p>ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾವ್ ಕುಲಕರ್ಣಿ ನೇತೃತ್ವದಲ್ಲಿ ಪೂಜಾ ಕಾರ್ಯಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>