ಸದಸ್ಯ ಸ್ಥಾನಕ್ಕೆ ವಿಜಯಕುಮಾರ ಆನಂದೆ ಒಬ್ಬರೇ ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ.
ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಸದಸ್ಯ ಸ್ಥಾನದ ಚುನಾವಣೆಯಲ್ಲಿ ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಅಧ್ಯಕ್ಷರಿಗೆ ಮಾತ್ರ ಮತ ಹಕ್ಕು ಇದೆ. ಬಸವಕಲ್ಯಾಣ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ತಹಶೀಲ್ದಾರ್ ಆಡಳಿತಾಧಿಕಾರಿ ಆಗಿದ್ದಾರೆ. ಬೀದರ್, ಭಾಲ್ಕಿ, ಹುಮನಾಬಾದ್ ಹಾಗೂ ಔರಾದ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರು ಮಾತ್ರ ಮತಾಧಿಕಾರ ಹೊಂದಿದ್ದಾರೆ.