ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷ್ಣುವರ್ಧನ್ ಜನ್ಮದಿನ ಆಚರಣೆ

Last Updated 18 ಸೆಪ್ಟೆಂಬರ್ 2021, 14:58 IST
ಅಕ್ಷರ ಗಾತ್ರ

ಬೀದರ್: ವಿಷ್ಣು ಸೇನಾ ಸಮಿತಿಯಿಂದ ನಗರದ ನೌಬಾದ್‍ನ ಜ್ಞಾನ ಶಿವಯೋಗ ಆಶ್ರಮದಲ್ಲಿ ನಟ ವಿಷ್ಣುವರ್ಧನ್ ಅವರ 71ನೇ ಜನ್ಮದಿನ ಆಚರಿಸಲಾಯಿತು.

ವಿಷ್ಣುವರ್ಧನ್ ಅವರು ಚಿತ್ರರಂಗದ ಜತೆಗೆ ಕನ್ನಡ ಭಾಷೆ ಉಳಿಸಿ ಬೆಳೆಸಲು ಶ್ರಮಿಸಿದ್ದರು. ಯುವಜನತೆಗೆ ಆದರ್ಶವಾಗಿದ್ದ ಅವರು, ನುಡಿದಂತೆ ನಡೆದಿದ್ದರು ಎಂದು ಕಾರ್ಯಕ್ರಮದಲ್ಲಿ ಮಾತನಾಡಿದ ಬೇಮಳಖೇಡ ಹಿರೇಮಠ ಸಂಸ್ಥಾನದ ಡಾ. ರಾಜಶೇಖರ ಶಿವಾಚಾರ್ಯ ಅಭಿಪ್ರಾಯಪಟ್ಟರು.

ವಿಷ್ಣುವರ್ಧನ್ ಜೀವನ ಎಲ್ಲರಿಗೆ ಸ್ಫೂರ್ತಿಯಾಗಿದೆ ಎಂದು ಸಮಿತಿಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ವೀರೇಶ ಸ್ವಾಮಿ ಹೇಳಿದರು.

ವಿಷ್ಣುವರ್ಧನ್ ಜೀವನ ಮತ್ತು ಸಾಧನೆ ಕುರಿತು ಯುವ ಮುಖಂಡ ಗುರುನಾಥ ರಾಜಗೀರಾ ಮಾತನಾಡಿದರು. ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಬಸವ ಮೂಲಗೆ, ಪದಾಧಿಕಾರಿಗಳಾದ ಪವನ್ ಮಡಿವಾಳ, ಸಿದ್ದು ಕಾಡೋದೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT