<p><strong>ಬೀದರ್:</strong> ‘ಕಾಯಕವೇ ಕೈಲಾಸ’ ಎಂಬ ಪದದಲ್ಲಿ ನಂಬಿಕೆ ಇಟ್ಟು, ದುಡಿಮೆಯಲ್ಲಿ ಹೆಚ್ಚು ನಂಬಿಕೆ ಹೊಂದಿರುವವರು ವಿಶ್ವಕರ್ಮ ಸಮುದಾಯದವರು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿಶ್ವಕರ್ಮ ಸಮುದಾಯದ ಜನರು ಕಠಿಣ ಶ್ರಮಜೀವಿಗಳು. ಪ್ರಾಚೀನ ಕಾಲದಿಂದಲೂ ವಿವಿಧ ಕಾಯಕ ಮಾಡುತ್ತ ಬಂದಿದ್ದಾರೆ. ದೊಡ್ಡ-ದೊಡ್ಡ ಕಟ್ಟಡ, ದೇವಾಲಯಗಳಿಗೆ ಬುನಾದಿ ಹಾಕುವ ವಿಶೇಷ ನೈಪುಣ್ಯ ಹೊಂದಿದ್ದಾರೆ. ಯಾವುದೇ ಯಂತ್ರೋಪಕರಣಗಳು ಬಂದರೂ ಇತಿಹಾಸದ ಮೂಲ ಸಂಸ್ಕೃತಿ ಮತ್ತು ಪರಂಪರೆ ಬಿಟ್ಟಿಲ್ಲ’ ಎಂದರು.</p>.<p>‘ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಉನ್ನತ ಹುದ್ದೆ ಅಲಂಕರಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕರಡ್ಯಾಳ ಅಲ್ಲಮಪ್ರಭು ಬಿ.ಇಡಿ ಕಾಲೇಜಿನ ಉಪ ಪ್ರಾಂಶುಪಾಲ ಮಾಣಿಕರಾವ್ ಬಿ. ಪಂಚಾಳ ಅತಿಥಿ ಉಪನ್ಯಾಸ ನೀಡಿ, ‘ವಿಶ್ವಕರ್ಮ ಜಗತ್ತಿನ ಸೃಷ್ಟಿಕರ್ತ ಎಂದು ಹೇಳಲಾಗುತ್ತದೆ. ವೇದ- ಪುರಾಣಗಳಲ್ಲಿ ಇವರ ಬಗ್ಗೆ ಉಲ್ಲೇಖವಿದೆ’ ಎಂದರು.</p>.<p>‘ಜನರಿಗೆ ಬೇಕಾಗುವ ಕಿಟಕಿ, ಬಾಗಿಲು, ದೇವರ ಮೂರ್ತಿಗಳನ್ನು ಮಾಡುವ ಕಲೆ ಇವರಲ್ಲಿದೆ. ನಾಗರಿಕತೆ ಇಷ್ಟೊಂದು ದೊಡ್ಡದಾಗಿದೆ, ಶ್ರೀಮಂತವಾಗಿದೆ ಎಂದರೆ ಅದಕ್ಕೆ ವಿಶ್ವಕರ್ಮರ ಕೊಡುಗೆ ದೊಡ್ಡದಿದೆ’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಪ್ರಮುಖ ಮಾರ್ಗಗಳ ಮೂಲಕ ರಂಗಮಂದಿರದ ವರೆಗೆ ಮೆರವಣಿಗೆ ನಡೆಯಿತು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಶ್ರೀನಿವಾಸ ಮಹಾರಾಜ, ವಿಶ್ವಕರ್ಮ ಸಮಾಜದ ಮುಖಂಡರಾದ ಮಹೇಶ ಪಂಚಾಳ, ಭೀಮಶಾ ಪಂಚಾಳ, ಪ್ರಭಾಕರ ಶಾಸ್ತ್ರಿ, ಶಾಮರಾವ್ ವಿಶ್ವಕರ್ಮ, ಶ್ರೀನಿವಾಸ ಪಂಚಾಳ ಮತ್ತಿತರರು ಇದ್ದರು.</p>.<p><strong>ವಿಶ್ವಕರ್ಮರು ಕಠಿಣ ಜೀವಿಗಳು ಸಮಾಜಕ್ಕೆ ಬಹುದೊಡ್ಡ ಕೊಡುಗೆ ಕಲೆಯಲ್ಲಿ ವಿಶೇಷ ನೈಪುಣ್ಯ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ಕಾಯಕವೇ ಕೈಲಾಸ’ ಎಂಬ ಪದದಲ್ಲಿ ನಂಬಿಕೆ ಇಟ್ಟು, ದುಡಿಮೆಯಲ್ಲಿ ಹೆಚ್ಚು ನಂಬಿಕೆ ಹೊಂದಿರುವವರು ವಿಶ್ವಕರ್ಮ ಸಮುದಾಯದವರು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ತಿಳಿಸಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವಕರ್ಮ ಜಯಂತಿ ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿಶ್ವಕರ್ಮ ಸಮುದಾಯದ ಜನರು ಕಠಿಣ ಶ್ರಮಜೀವಿಗಳು. ಪ್ರಾಚೀನ ಕಾಲದಿಂದಲೂ ವಿವಿಧ ಕಾಯಕ ಮಾಡುತ್ತ ಬಂದಿದ್ದಾರೆ. ದೊಡ್ಡ-ದೊಡ್ಡ ಕಟ್ಟಡ, ದೇವಾಲಯಗಳಿಗೆ ಬುನಾದಿ ಹಾಕುವ ವಿಶೇಷ ನೈಪುಣ್ಯ ಹೊಂದಿದ್ದಾರೆ. ಯಾವುದೇ ಯಂತ್ರೋಪಕರಣಗಳು ಬಂದರೂ ಇತಿಹಾಸದ ಮೂಲ ಸಂಸ್ಕೃತಿ ಮತ್ತು ಪರಂಪರೆ ಬಿಟ್ಟಿಲ್ಲ’ ಎಂದರು.</p>.<p>‘ಸಮುದಾಯದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಉನ್ನತ ಹುದ್ದೆ ಅಲಂಕರಿಸಬೇಕು’ ಎಂದು ಸಲಹೆ ನೀಡಿದರು.</p>.<p>ಕರಡ್ಯಾಳ ಅಲ್ಲಮಪ್ರಭು ಬಿ.ಇಡಿ ಕಾಲೇಜಿನ ಉಪ ಪ್ರಾಂಶುಪಾಲ ಮಾಣಿಕರಾವ್ ಬಿ. ಪಂಚಾಳ ಅತಿಥಿ ಉಪನ್ಯಾಸ ನೀಡಿ, ‘ವಿಶ್ವಕರ್ಮ ಜಗತ್ತಿನ ಸೃಷ್ಟಿಕರ್ತ ಎಂದು ಹೇಳಲಾಗುತ್ತದೆ. ವೇದ- ಪುರಾಣಗಳಲ್ಲಿ ಇವರ ಬಗ್ಗೆ ಉಲ್ಲೇಖವಿದೆ’ ಎಂದರು.</p>.<p>‘ಜನರಿಗೆ ಬೇಕಾಗುವ ಕಿಟಕಿ, ಬಾಗಿಲು, ದೇವರ ಮೂರ್ತಿಗಳನ್ನು ಮಾಡುವ ಕಲೆ ಇವರಲ್ಲಿದೆ. ನಾಗರಿಕತೆ ಇಷ್ಟೊಂದು ದೊಡ್ಡದಾಗಿದೆ, ಶ್ರೀಮಂತವಾಗಿದೆ ಎಂದರೆ ಅದಕ್ಕೆ ವಿಶ್ವಕರ್ಮರ ಕೊಡುಗೆ ದೊಡ್ಡದಿದೆ’ ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ವಿಶ್ವಕರ್ಮ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು. ಪ್ರಮುಖ ಮಾರ್ಗಗಳ ಮೂಲಕ ರಂಗಮಂದಿರದ ವರೆಗೆ ಮೆರವಣಿಗೆ ನಡೆಯಿತು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಶಿಂಧೆ, ಶ್ರೀನಿವಾಸ ಮಹಾರಾಜ, ವಿಶ್ವಕರ್ಮ ಸಮಾಜದ ಮುಖಂಡರಾದ ಮಹೇಶ ಪಂಚಾಳ, ಭೀಮಶಾ ಪಂಚಾಳ, ಪ್ರಭಾಕರ ಶಾಸ್ತ್ರಿ, ಶಾಮರಾವ್ ವಿಶ್ವಕರ್ಮ, ಶ್ರೀನಿವಾಸ ಪಂಚಾಳ ಮತ್ತಿತರರು ಇದ್ದರು.</p>.<p><strong>ವಿಶ್ವಕರ್ಮರು ಕಠಿಣ ಜೀವಿಗಳು ಸಮಾಜಕ್ಕೆ ಬಹುದೊಡ್ಡ ಕೊಡುಗೆ ಕಲೆಯಲ್ಲಿ ವಿಶೇಷ ನೈಪುಣ್ಯ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>