ಬಸವಕಲ್ಯಾಣಕ್ಕೆ ಭೇಟಿ: ರಾಜ್ಯಪಾಲರ ಭರವಸೆ

ಬೀದರ್: ಕೋವಿಡ್ ಪರಿಸ್ಥಿತಿ ಸಹಜ ಸ್ಥಿತಿಗೆ ಬಂದ ನಂತರ ಬಸವಕಲ್ಯಾಣಕ್ಕೆ ಭೇಟಿ ನೀಡುವೆ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋಟ್ ತಿಳಿಸಿದರು.
ಬೆಂಗಳೂರಿನ ರಾಜಭವನದಲ್ಲಿ ತಮ್ಮನ್ನು ಸನ್ಮಾನಿಸಿ, ಬಸವಕಲ್ಯಾಣಕ್ಕೆ ಆಹ್ವಾನ ನೀಡಿದ ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರಿಗೆ ಅವರು ಈ ಭರವಸೆ ನೀಡಿದರು.
ಗುರುಬಸವ ಪಟ್ಟದ್ದೇವರು ಜಗತ್ತಿನ ಮೊಟ್ಟ ಮೊದಲ ಸಂಸತ್ ಎಂದೇ ಕರೆಯಲಾಗುವ ಬಸವಕಲ್ಯಾಣದ ಅನುಭವ ಮಂಟಪ, ಬಸವೇಶ್ವರರ ಸಾಮಾಜಿಕ ಕ್ರಾಂತಿ, ಶರಣರ ಸರಳ, ಸಾತ್ವಿಕ, ಸಹಜ ಬದುಕಿನ ಚಿತ್ರಣವನ್ನು ರಾಜ್ಯಪಾಲರಿಗೆ ನೀಡಿದರು.
ಬಸವಣ್ಣನವರ ವಿಗ್ರಹ, ಕನ್ನಡ, ಹಿಂದಿ ಹಾಗೂ ಆಂಗ್ಲ ಭಾಷೆಯ ವಚನ ಸಂಪುಟಗಳನ್ನು ಸ್ಮರಣಿಕೆ ರೂಪದಲ್ಲಿ ಕೊಟ್ಟರು.
ಕನ್ನಡ ಸಾಹಿತ್ಯ ಪರಿಷತ್ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಶಶಿಧರ ಕೋಸಂಬೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.