<p><strong>ಭಾಲ್ಕಿ:</strong> ‘ಭಾರತದ ಆರ್ಥಿಕ ಅಭಿವೃದ್ಧಿಗೆ ಸರ್.ಎಂ.ವಿಶ್ವೇಶ್ವರಯ್ಯನವರ ಕೊಡುಗೆ ಅನನ್ಯವಾಗಿದೆ’ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಲ್ತಾಫ್ ಮಿಯಾ ಹೇಳಿದರು.</p>.<p>ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಎಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ವಿಶ್ವೇಶ್ವರಯ್ಯನವರು ಜೀವರಾಶಿಗಳನ್ನು ಕಾಪಾಡುವ ಜಲಸಂಪನ್ಮೂಲ ರಕ್ಷಣೆಯಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ. ಅವರ ತತ್ವಾದರ್ಶಗಳನ್ನು ಇಂದಿನ ಯುವ ಎಂಜಿನಿಯರ್ಗಳು ಅನುಸರಿಸಿ, ನೂತನ ಆವಿಷ್ಕಾರ, ಹೊಸ ಚಿಂತನೆಗಳೊಂದಿಗೆ ಸದೃಢ ಭಾರತ ಸಾಕಾರಕ್ಕೆ ಕೊಡುಗೆ ನೀಡಬೇಕು’ ಎಂದು ತಿಳಿಸಿದರು.</p>.<p>ಪ್ರಥಮ ದರ್ಜೆ ಗುತ್ತಿಗೆದಾರರಾದ ಸಂಗಮೇಶ ಹುಣಜೆ ಮದಕಟ್ಟಿ, ರಾಜಕುಮಾರ ಬಿರಾದಾರ, ರಿಯಾಜ್ ಅಹ್ಮದ್, ಶಿವಾಜಿ ಚವ್ಹಾಣ, ಮಹಾದೇವ, ಸಹಾಯಕ ಎಂಜಿನಿಯರ್ಗಳಾದ ಲೋಹಿತ್ ಉತ್ಕಾರ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ‘ಭಾರತದ ಆರ್ಥಿಕ ಅಭಿವೃದ್ಧಿಗೆ ಸರ್.ಎಂ.ವಿಶ್ವೇಶ್ವರಯ್ಯನವರ ಕೊಡುಗೆ ಅನನ್ಯವಾಗಿದೆ’ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅಲ್ತಾಫ್ ಮಿಯಾ ಹೇಳಿದರು.</p>.<p>ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ಸೋಮವಾರ ನಡೆದ ಎಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ವಿಶ್ವೇಶ್ವರಯ್ಯನವರು ಜೀವರಾಶಿಗಳನ್ನು ಕಾಪಾಡುವ ಜಲಸಂಪನ್ಮೂಲ ರಕ್ಷಣೆಯಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ. ಅವರ ತತ್ವಾದರ್ಶಗಳನ್ನು ಇಂದಿನ ಯುವ ಎಂಜಿನಿಯರ್ಗಳು ಅನುಸರಿಸಿ, ನೂತನ ಆವಿಷ್ಕಾರ, ಹೊಸ ಚಿಂತನೆಗಳೊಂದಿಗೆ ಸದೃಢ ಭಾರತ ಸಾಕಾರಕ್ಕೆ ಕೊಡುಗೆ ನೀಡಬೇಕು’ ಎಂದು ತಿಳಿಸಿದರು.</p>.<p>ಪ್ರಥಮ ದರ್ಜೆ ಗುತ್ತಿಗೆದಾರರಾದ ಸಂಗಮೇಶ ಹುಣಜೆ ಮದಕಟ್ಟಿ, ರಾಜಕುಮಾರ ಬಿರಾದಾರ, ರಿಯಾಜ್ ಅಹ್ಮದ್, ಶಿವಾಜಿ ಚವ್ಹಾಣ, ಮಹಾದೇವ, ಸಹಾಯಕ ಎಂಜಿನಿಯರ್ಗಳಾದ ಲೋಹಿತ್ ಉತ್ಕಾರ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>