ಬೀದರ್: ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಹನ್ನೊಂದನೇ ಘಟಿಕೋತ್ಸವ ಜನವರಿ 17ರಂದು ವಿ.ವಿ.ಯ ಕೇಂದ್ರ ಸ್ಥಾನದಲ್ಲಿ ನಡೆಯಲಿದ್ದು, ‘ಬೆಂಗಳೂರಿನ ಪಶು ವೈದ್ಯಕೀಯ ಮಹಾವಿದ್ಯಾಲಯದ ವಿಶ್ವಾಸ್ ಕೆ.ಎಂ. ಹಾಗೂ ಹಾಸನದ ಶ್ರುತಿ ವಲ್ಸನ್ ತಲಾ 10 ಚಿನ್ನದ ಪದಕಗಳಿಗೆ ಭಾಜನರಾಗಲಿದ್ದಾರೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಡಿ.ನಾರಾಯಣ ಸ್ವಾಮಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.