<p><strong>ಬೀದರ್</strong>: ಇಲ್ಲಿಯ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಕಾರ್ಮೆಲ್ ಸೇವಾ ಟ್ರಸ್ಟ್ ವತಿಯಿಂದ ಪುರುಷ ಕೈದಿಗಳಿಗೆ ವೃತ್ತಿ ಪರ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ತರಬೇತಿಯನ್ನು ಕಾರ್ಮೆಲ್ ಸೇವಾ ಟ್ರಸ್ಟ್ ಸಂಯೋಜಕಿ ಸಿಸ್ಟರ್ ಕ್ರಿಸ್ಟಿನ್ ನಿಸ್ಕಿತ್ ಉದ್ಘಾಟಿಸಿ ಮಾತನಾಡಿ,‘ಕೈದಿಗಳು ತಿಳಿದು ತಿಳಯದೇ ತಪ್ಪು ಮಾಡಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಶಿಕ್ಷೆ ಮುಗಿದ ನಂತರ ಬಿಡುಗಡೆಯಾಗಿ ಮುಂದೆ ಉತ್ತಮ ಜೀವನ ನಡೆಸಬೇಕು’ ಎಂದು ಮನವಿ ಮಾಡಿದರು.</p>.<p>ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಎಲ್ಲರೂ ಒಳ್ಳೆಯವರಾಗಿ ಬಾಳಬೇಕು. ಜೈಲಿನಿಂದ ಹೊರಗಡೆ ಬಂದ ನಂತರ ಉದ್ಯೋಗಸ್ಥರಾಗಬೇಕು. ಅದಕ್ಕಾಗಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕಾರಾಗೃಹದ ಮುಖ್ಯ ಅಧೀಕ್ಷಕ ದತ್ತಾತ್ರೇಯ ಮೇಧಾ ಮಾತನಾಡಿ,‘ಕಾರಾಗೃಹದ ಕೈದಿಗಳಿಗೆ ವೃತ್ತಿಪರ ಕೌಶಲ ತರಬೇತಿ ನೀಡಬೇಕು ಎಂದು ಸರ್ಕಾರದ ಆದೇಶವಿದೆ. ಕೈದಿಗಳನ್ನು ಉತ್ತಮ ಮನುಷ್ಯರನ್ನಾಗಿ ಮಾಡುವುದೇ ನಮ್ಮ ಉದ್ದೇಶವಾಗಿದೆ’ ಎಂದರು.</p>.<p>ಟಿ.ಎಸ್.ಭಜಂತ್ರಿ ಮಾತನಾಡಿದರು.</p>.<p>ಡಾನ್ ಬಾಸ್ಕೊ ವೃತ್ತಿಪರ ಕೌಶಲ ತರಬೇತಿ ಕಾಲೇಜಿನ ಪ್ರಾಚಾರ್ಯ ಫಾದರ್ ಮ್ಯಾಥ್ಯೂಸ್, ಕಾರ್ಮೆಲ್ ಸೇವಾ ಸಂಸ್ಥೆಯ ಸಿಸ್ಟರ್ ರೀಟಾ ಹಾಗೂ ಸಿಸ್ಟರ್ ಪ್ರಿಯಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್</strong>: ಇಲ್ಲಿಯ ಜಿಲ್ಲಾ ಕಾರಾಗೃಹದಲ್ಲಿ ಸೋಮವಾರ ಕಾರ್ಮೆಲ್ ಸೇವಾ ಟ್ರಸ್ಟ್ ವತಿಯಿಂದ ಪುರುಷ ಕೈದಿಗಳಿಗೆ ವೃತ್ತಿ ಪರ ತರಬೇತಿ ಕಾರ್ಯಾಗಾರ ನಡೆಯಿತು.</p>.<p>ತರಬೇತಿಯನ್ನು ಕಾರ್ಮೆಲ್ ಸೇವಾ ಟ್ರಸ್ಟ್ ಸಂಯೋಜಕಿ ಸಿಸ್ಟರ್ ಕ್ರಿಸ್ಟಿನ್ ನಿಸ್ಕಿತ್ ಉದ್ಘಾಟಿಸಿ ಮಾತನಾಡಿ,‘ಕೈದಿಗಳು ತಿಳಿದು ತಿಳಯದೇ ತಪ್ಪು ಮಾಡಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಶಿಕ್ಷೆ ಮುಗಿದ ನಂತರ ಬಿಡುಗಡೆಯಾಗಿ ಮುಂದೆ ಉತ್ತಮ ಜೀವನ ನಡೆಸಬೇಕು’ ಎಂದು ಮನವಿ ಮಾಡಿದರು.</p>.<p>ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಎಲ್ಲರೂ ಒಳ್ಳೆಯವರಾಗಿ ಬಾಳಬೇಕು. ಜೈಲಿನಿಂದ ಹೊರಗಡೆ ಬಂದ ನಂತರ ಉದ್ಯೋಗಸ್ಥರಾಗಬೇಕು. ಅದಕ್ಕಾಗಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಕಾರಾಗೃಹದ ಮುಖ್ಯ ಅಧೀಕ್ಷಕ ದತ್ತಾತ್ರೇಯ ಮೇಧಾ ಮಾತನಾಡಿ,‘ಕಾರಾಗೃಹದ ಕೈದಿಗಳಿಗೆ ವೃತ್ತಿಪರ ಕೌಶಲ ತರಬೇತಿ ನೀಡಬೇಕು ಎಂದು ಸರ್ಕಾರದ ಆದೇಶವಿದೆ. ಕೈದಿಗಳನ್ನು ಉತ್ತಮ ಮನುಷ್ಯರನ್ನಾಗಿ ಮಾಡುವುದೇ ನಮ್ಮ ಉದ್ದೇಶವಾಗಿದೆ’ ಎಂದರು.</p>.<p>ಟಿ.ಎಸ್.ಭಜಂತ್ರಿ ಮಾತನಾಡಿದರು.</p>.<p>ಡಾನ್ ಬಾಸ್ಕೊ ವೃತ್ತಿಪರ ಕೌಶಲ ತರಬೇತಿ ಕಾಲೇಜಿನ ಪ್ರಾಚಾರ್ಯ ಫಾದರ್ ಮ್ಯಾಥ್ಯೂಸ್, ಕಾರ್ಮೆಲ್ ಸೇವಾ ಸಂಸ್ಥೆಯ ಸಿಸ್ಟರ್ ರೀಟಾ ಹಾಗೂ ಸಿಸ್ಟರ್ ಪ್ರಿಯಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>