<p><strong>ಬಸವಕಲ್ಯಾಣ: </strong>‘ರಾಜ್ಯದ ಒಳಿತಿಗಾಗಿ ಮತದಾರರು ಜೆಡಿಎಸ್ ಗೆಲ್ಲಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇಳಿಕೊಂಡರು.</p>.<p>ತಾಲ್ಲೂಕಿನ ಚಿಟ್ಟಾದಲ್ಲಿ ಬುಧವಾರ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ ಅವರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಾನು ಮುಖ್ಯಮಂತ್ರಿ ಆಗಿದ್ದಾಗ, ಬಡವರ, ರೈತರ ಹಾಗೂ ಶ್ರಮಿಕವರ್ಗದವರ ಪರ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ರೈತರ ಲಕ್ಷಾಂತರ ರೂಪಾಯಿ ಸಾಲಮನ್ನಾ ಮಾಡಿದ್ದೇನೆ. ಇದೇ ತಾಲ್ಲೂಕಿನ ಉಜಳಂಬ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಸಿ ಊರಿನ ವಿಕಾಸಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ’ ಎಂದರು.</p>.<p>‘ಯಸ್ರಬ್ ಅಲಿ ಖಾದ್ರಿ ಅವರು ಉತ್ತಮ ಅಭ್ಯರ್ಥಿ ಆಗಿದ್ದು ಆಯ್ಕೆಯಾದರೆ ತಾಲ್ಲೂಕಿನ ಸಮಗ್ರ ವಿಕಾಸ ಕೈಗೊಳ್ಳುವ ಕನಸು ಹೊಂದಿದ್ದಾರೆ’ ಎಂದರು.</p>.<p>ಶಾಸಕ ಬಂಡೆಪ್ಪ ಕಾಶೆಂಪೂರ್ ಮಾತನಾಡಿ, ‘ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದ್ದಾರೆ. ಯಡಿಯೂರಪ್ಪ ಅಧಿಕಾರಕ್ಕೆ ಬಂದು ಏನು ಮಾಡಿದ್ದಾರೆ ಎಂಬುದರ ಬಗ್ಗೆ ಆ ಪಕ್ಷದವರಿಗೆ ಪ್ರಶ್ನಿಸಿ’ ಎಂದರು.</p>.<p>ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ, ತಾಲ್ಲೂಕು ಘಟಕದ ಅಧ್ಯಕ್ಷ ಶಬ್ಬೀರಪಾಶಾ ಮುಜಾವರ್, ಆಕಾಶ ಖಂಡಾಳೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ: </strong>‘ರಾಜ್ಯದ ಒಳಿತಿಗಾಗಿ ಮತದಾರರು ಜೆಡಿಎಸ್ ಗೆಲ್ಲಿಸಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೇಳಿಕೊಂಡರು.</p>.<p>ತಾಲ್ಲೂಕಿನ ಚಿಟ್ಟಾದಲ್ಲಿ ಬುಧವಾರ ಉಪ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ ಅವರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ನಾನು ಮುಖ್ಯಮಂತ್ರಿ ಆಗಿದ್ದಾಗ, ಬಡವರ, ರೈತರ ಹಾಗೂ ಶ್ರಮಿಕವರ್ಗದವರ ಪರ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ. ರೈತರ ಲಕ್ಷಾಂತರ ರೂಪಾಯಿ ಸಾಲಮನ್ನಾ ಮಾಡಿದ್ದೇನೆ. ಇದೇ ತಾಲ್ಲೂಕಿನ ಉಜಳಂಬ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ನಡೆಸಿ ಊರಿನ ವಿಕಾಸಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ’ ಎಂದರು.</p>.<p>‘ಯಸ್ರಬ್ ಅಲಿ ಖಾದ್ರಿ ಅವರು ಉತ್ತಮ ಅಭ್ಯರ್ಥಿ ಆಗಿದ್ದು ಆಯ್ಕೆಯಾದರೆ ತಾಲ್ಲೂಕಿನ ಸಮಗ್ರ ವಿಕಾಸ ಕೈಗೊಳ್ಳುವ ಕನಸು ಹೊಂದಿದ್ದಾರೆ’ ಎಂದರು.</p>.<p>ಶಾಸಕ ಬಂಡೆಪ್ಪ ಕಾಶೆಂಪೂರ್ ಮಾತನಾಡಿ, ‘ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದ್ದಾರೆ. ಯಡಿಯೂರಪ್ಪ ಅಧಿಕಾರಕ್ಕೆ ಬಂದು ಏನು ಮಾಡಿದ್ದಾರೆ ಎಂಬುದರ ಬಗ್ಗೆ ಆ ಪಕ್ಷದವರಿಗೆ ಪ್ರಶ್ನಿಸಿ’ ಎಂದರು.</p>.<p>ಅಭ್ಯರ್ಥಿ ಯಸ್ರಬ್ ಅಲಿ ಖಾದ್ರಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ ಪಾಟೀಲ, ತಾಲ್ಲೂಕು ಘಟಕದ ಅಧ್ಯಕ್ಷ ಶಬ್ಬೀರಪಾಶಾ ಮುಜಾವರ್, ಆಕಾಶ ಖಂಡಾಳೆ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>