ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲಿಶ್ರೀ ಆಸ್ಪತ್ರೆ: ಕೋವಿಡ್ ಲಸಿಕಾ ಕೇಂದ್ರ ಉದ್ಘಾಟನೆ

Last Updated 9 ಮಾರ್ಚ್ 2021, 17:15 IST
ಅಕ್ಷರ ಗಾತ್ರ

ಬೀದರ್: ನಗರದ ವಾಲಿಶ್ರೀ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಲೀವರ್ ವರ್ಗಾವಣೆ ತಜ್ಞೆ ಡಾ. ಸುಮನಾ ರಾಮಚಂದ್ರ ಅವರು ರಕ್ತ ಸಂಗ್ರಹ ಘಟಕ ಹಾಗೂ ಕೋವಿಡ್ ಲಸಿಕಾ ಕೇಂದ್ರವನ್ನು ಉದ್ಘಾಟಿಸಿದರು.

ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆಯತ್ತ ದಾಪುಗಾಲು ಇಡಬೇಕು. ತನ್ನ ಅಸ್ತಿತ್ವ ಉಳಿಸಿಕೊಂಡು, ಸ್ವಯಂ ರಕ್ಷಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ವಂದೇ ಮಾತರಂ ಶಾಲೆಯ ಪ್ರಾಚಾರ್ಯೆ ರತ್ನಾ ಪಾಟೀಲ ಮಾತನಾಡಿದರು. ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ರಾಜಶೇಖರ ಸೇಡಂಕರ್ ಅಧ್ಯಕ್ಷತೆ ವಹಿಸಿದ್ದರು.

ಆಸ್ಪತ್ರೆಯ ನಿರ್ದೇಶಕರಾದ ಡಾ. ವಿ.ವಿ. ನಾಗರಾಜ, ಡಾ. ವೈಜಿನಾಥ ಮದನಾ, ಡಾ. ಪ್ರಸನ್ನ ರೇಷ್ಮೆ, ಸಂಜಯಕುಮಾರ ಮಹಾಗಾಂವ, ಶಂಕರ ಕೆಂಚಾ, ಶ್ರೀನಿವಾಸಗೌಡ, ಪ್ರತಿಮಾ ಅಮಾಜಿ, ಅಂಜನಾ ರಜನೀಶ ವಾಲಿ, ಮಂಗಲಾ ಭಾಗವತ್, ಡಾ. ಆರತಿ ಯೆರಾ, ಡಾ. ಪ್ರೀತಿ ಬಿರಾದಾರ, ಡಾ. ಲಾವಣ್ಯ ಸೋಲಪುರೆ, ಡಾ. ಪ್ರತಿಭಾ, ಸೋನಿಯಾ ನಂದಗೌಳಿ, ಕಲಾವಿದೆ ರಾಣಿ ಸತ್ಯಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT