<p><strong>ಔರಾದ್</strong>: ಸೋಯಾ ಬೀಜ ಸಿಗದೆ ಇಲ್ಲಿಯ ರೈತ ಸಂಪರ್ಕ ಕೇಂದ್ರದ ಎದುರು ಒಂದು ವಾರದಿಂದ ಅಹೋರಾತ್ರಿ ಪ್ರತಿಭಟನೆ ನಡೆಸಿದ ಮಹಾಡೋಣಗಾಂವ್ ತಾಂಡಾ ನಿವಾಸಿಗಳು ಬುಧವಾರ ಇಲ್ಲಿಯ ಕೃಷಿ ಇಲಾಖೆಯಸಹಾಯಕ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಹಾಡೋಣಗಾಂವ್ ತಾಂಡಾ ನಿವಾಸಿ ರಮಣಬಾಯಿ ಶಂಕರ, ಅನುಷಾಬಾಯಿ ಕಾಶಿರಾಮ, ದೇವಲಾಬಾಯಿ ಸೇರಿದಂತೆ ಅನೇಕ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಗೆ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಗೌಡ ಬಣ) ಕಾರ್ಯಕರ್ತರು ಬೆಂಬಲಿಸಿದರು.</p>.<p>‘ಮಧ್ಯಾಹ್ನ 3.30ಕ್ಕೆ ನಡೆದ ಪ್ರತಿಭಟನೆ ವೇಳೆ ಕಚೇರಿಯಲ್ಲಿ ಒಬ್ಬರು ಗುಮಾಸ್ತರು ಹಾಗೂ ಕಂಪ್ಯೂಟರ್ ಆಪರೇಟರ್ ಹೊರತುಪಡಿಸಿ ಕೃಷಿ ಅಧಿಕಾರಿಗಳಾರೂ ಇರಲಿಲ್ಲ. ರೈತರು ಇಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ ಅಧಿಕಾರಿಗಳು<br />ಕಚೇರಿಗೆ ಬರುತ್ತಿಲ್ಲ. ಮೊಬೈಲ್ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ’ ಕರವೇ ಪ್ರಮುಖ ರಾಜು ಯಡವೆ ಆಗ್ರಹಿಸಿದರು.</p>.<p>‘ತಾಲ್ಲೂಕಿಗೆ ಬಂದ ಸೋಯಾ ಬೀಜ ಕಾಳಸಂತೆಯಲ್ಲಿ ಮಾರಿಕೊಂಡಿದ್ದಾರೆ. ತಮಗೆ ಬೇಕಾದವರಿಗೆ ಹಾಗೂ ಪ್ರಭಾವಿಗಳಿಗೆ ಬೇಕಾದಷ್ಟು ಸೋಯಾ ಬೀಜ ಹಂಚಿದ್ದಾರೆ. ಇದರಿಂದಾಗಿ ಇತರೆ ರೈತರಿಗೆ ಬೀಜ ಸಿಕ್ಕಿಲ್ಲ’ ಎಂದು ಅವರು ಆಕ್ರೋಶ ಹೊರ ಹಾಕಿದರು.</p>.<p>‘ನಾವು ಮಹಾಡೋಣಗಾಂವ್ ತಾಂಡಾ ನಿವಾಸಿಗಳು. ಬೀಜಕ್ಕಾಗಿ ಕಳೆದ ಒಂದು ವಾರದಿಂದ ವಿತರಣಾ ಕೇಂದ್ರದ ಎದುರು ಕುಳಿತ್ತಿದ್ದೇವೆ. ಇಲ್ಲಿಯತನಕ ಯಾರೂ ನಮ್ಮ ಸಮಸ್ಯೆ ಕೇಳಲು ಬಂದಿಲ್ಲ’ ಎಂದು ತಾಂಡಾ ಮಹಿಳೆ ರಮಣಬಾಯಿ ಗೋಳು ತೋಡಿಕೊಂಡರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹಾಗೂ ಕೃಷಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ರೈತರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.</p>.<p>ಸಿದ್ದು ಚಾರೆ, ಅನೀಲ ದೇವಕತೆ, ಸುದೀಪ ಸಿಂಧೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್</strong>: ಸೋಯಾ ಬೀಜ ಸಿಗದೆ ಇಲ್ಲಿಯ ರೈತ ಸಂಪರ್ಕ ಕೇಂದ್ರದ ಎದುರು ಒಂದು ವಾರದಿಂದ ಅಹೋರಾತ್ರಿ ಪ್ರತಿಭಟನೆ ನಡೆಸಿದ ಮಹಾಡೋಣಗಾಂವ್ ತಾಂಡಾ ನಿವಾಸಿಗಳು ಬುಧವಾರ ಇಲ್ಲಿಯ ಕೃಷಿ ಇಲಾಖೆಯಸಹಾಯಕ ನಿರ್ದೇಶಕರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಹಾಡೋಣಗಾಂವ್ ತಾಂಡಾ ನಿವಾಸಿ ರಮಣಬಾಯಿ ಶಂಕರ, ಅನುಷಾಬಾಯಿ ಕಾಶಿರಾಮ, ದೇವಲಾಬಾಯಿ ಸೇರಿದಂತೆ ಅನೇಕ ಮಹಿಳೆಯರು ನಡೆಸುತ್ತಿರುವ ಪ್ರತಿಭಟನೆಗೆ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಗೌಡ ಬಣ) ಕಾರ್ಯಕರ್ತರು ಬೆಂಬಲಿಸಿದರು.</p>.<p>‘ಮಧ್ಯಾಹ್ನ 3.30ಕ್ಕೆ ನಡೆದ ಪ್ರತಿಭಟನೆ ವೇಳೆ ಕಚೇರಿಯಲ್ಲಿ ಒಬ್ಬರು ಗುಮಾಸ್ತರು ಹಾಗೂ ಕಂಪ್ಯೂಟರ್ ಆಪರೇಟರ್ ಹೊರತುಪಡಿಸಿ ಕೃಷಿ ಅಧಿಕಾರಿಗಳಾರೂ ಇರಲಿಲ್ಲ. ರೈತರು ಇಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದರೂ ಅಧಿಕಾರಿಗಳು<br />ಕಚೇರಿಗೆ ಬರುತ್ತಿಲ್ಲ. ಮೊಬೈಲ್ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವಂತೆ’ ಕರವೇ ಪ್ರಮುಖ ರಾಜು ಯಡವೆ ಆಗ್ರಹಿಸಿದರು.</p>.<p>‘ತಾಲ್ಲೂಕಿಗೆ ಬಂದ ಸೋಯಾ ಬೀಜ ಕಾಳಸಂತೆಯಲ್ಲಿ ಮಾರಿಕೊಂಡಿದ್ದಾರೆ. ತಮಗೆ ಬೇಕಾದವರಿಗೆ ಹಾಗೂ ಪ್ರಭಾವಿಗಳಿಗೆ ಬೇಕಾದಷ್ಟು ಸೋಯಾ ಬೀಜ ಹಂಚಿದ್ದಾರೆ. ಇದರಿಂದಾಗಿ ಇತರೆ ರೈತರಿಗೆ ಬೀಜ ಸಿಕ್ಕಿಲ್ಲ’ ಎಂದು ಅವರು ಆಕ್ರೋಶ ಹೊರ ಹಾಕಿದರು.</p>.<p>‘ನಾವು ಮಹಾಡೋಣಗಾಂವ್ ತಾಂಡಾ ನಿವಾಸಿಗಳು. ಬೀಜಕ್ಕಾಗಿ ಕಳೆದ ಒಂದು ವಾರದಿಂದ ವಿತರಣಾ ಕೇಂದ್ರದ ಎದುರು ಕುಳಿತ್ತಿದ್ದೇವೆ. ಇಲ್ಲಿಯತನಕ ಯಾರೂ ನಮ್ಮ ಸಮಸ್ಯೆ ಕೇಳಲು ಬಂದಿಲ್ಲ’ ಎಂದು ತಾಂಡಾ ಮಹಿಳೆ ರಮಣಬಾಯಿ ಗೋಳು ತೋಡಿಕೊಂಡರು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹಾಗೂ ಕೃಷಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ರೈತರಿಗೆ ವಂಚನೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.</p>.<p>ಸಿದ್ದು ಚಾರೆ, ಅನೀಲ ದೇವಕತೆ, ಸುದೀಪ ಸಿಂಧೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>