<p><strong>ಚಿಟಗುಪ್ಪ: </strong>ತಾಲ್ಲೂಕಿನ ಭವಾನಿ ನಗರ ತಾಂಡಾದಲ್ಲಿ ಅಳವಡಿಸಲಾದ ಶುದ್ಧ ನೀರಿನ ಘಟಕ ಹಾಳಾಗಿದೆ.</p>.<p>ಮುತ್ತಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ತಾಂಡಾದಲ್ಲಿ ಆರು ವರ್ಷಗಳ ಹಿಂದೆ ನಿರ್ಮಿಸಲಾದ ಶುದ್ಧ ನೀರಿನ ಘಟಕ ಸದ್ಬಳಕೆಯಾಗದೆ ಸಂಪೂರ್ಣವಾಗಿ ಪಾಳು ಬಿದ್ದಿದೆ.</p>.<p>ಯಂತ್ರಗಳು ತುಕ್ಕು ಹಿಡಿದಿವೆ. ಕಿಟಕಿಯ ಗಾಜು ಒಡೆದಿದೆ. ನೆಲಹಾಸು ಕಿತ್ತು ಹೋಗಿದೆ.</p>.<p>ತಾಂಡಾದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂಬ ಉದ್ದೇಶದಿಂದ ಹಿಂದಿನ ಶಾಸಕ ಅಶೋಕ ಖೇಣಿ ಅವರ ಅವಧಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲಾಗಿತ್ತು. ₹2.25 ಲಕ್ಷ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಶೆಡ್ ನಿರ್ಮಿಸಲಾಗಿದೆ.</p>.<p>‘ಘಟಕದ ಕಾರ್ಯ ಪೂರ್ಣಗೊಳಿಸಿ ಹೋದ ಅಧಿಕಾರಿಗಳು ಇಷ್ಟು ವರ್ಷವಾದರೂ ಮರಳಿ ಬಂದಿಲ್ಲ. ಶುದ್ಧ ಕುಡಿಯುವ ನೀರು ಲಭಿಸಿಲ್ಲ’ ಎಂದು ತಾಂಡಾದ ನಿವಾಸಿ ರಾಮು ರಾಠೋಡ ತಿಳಿಸಿದ್ದಾರೆ.</p>.<p>‘ಶುದ್ಧ ನೀರಿನ ಘಟಕ ಅಳವಡಿಸಿದ ನಂತರ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸದಿರುವುದರಿಂದ ಸಮಸ್ಯೆಯಾಗಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಪ್ರಭು ಮಜಕೂರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಟಗುಪ್ಪ: </strong>ತಾಲ್ಲೂಕಿನ ಭವಾನಿ ನಗರ ತಾಂಡಾದಲ್ಲಿ ಅಳವಡಿಸಲಾದ ಶುದ್ಧ ನೀರಿನ ಘಟಕ ಹಾಳಾಗಿದೆ.</p>.<p>ಮುತ್ತಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಈ ತಾಂಡಾದಲ್ಲಿ ಆರು ವರ್ಷಗಳ ಹಿಂದೆ ನಿರ್ಮಿಸಲಾದ ಶುದ್ಧ ನೀರಿನ ಘಟಕ ಸದ್ಬಳಕೆಯಾಗದೆ ಸಂಪೂರ್ಣವಾಗಿ ಪಾಳು ಬಿದ್ದಿದೆ.</p>.<p>ಯಂತ್ರಗಳು ತುಕ್ಕು ಹಿಡಿದಿವೆ. ಕಿಟಕಿಯ ಗಾಜು ಒಡೆದಿದೆ. ನೆಲಹಾಸು ಕಿತ್ತು ಹೋಗಿದೆ.</p>.<p>ತಾಂಡಾದ ನಿವಾಸಿಗಳಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂಬ ಉದ್ದೇಶದಿಂದ ಹಿಂದಿನ ಶಾಸಕ ಅಶೋಕ ಖೇಣಿ ಅವರ ಅವಧಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲಾಗಿತ್ತು. ₹2.25 ಲಕ್ಷ ಅನುದಾನದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಶೆಡ್ ನಿರ್ಮಿಸಲಾಗಿದೆ.</p>.<p>‘ಘಟಕದ ಕಾರ್ಯ ಪೂರ್ಣಗೊಳಿಸಿ ಹೋದ ಅಧಿಕಾರಿಗಳು ಇಷ್ಟು ವರ್ಷವಾದರೂ ಮರಳಿ ಬಂದಿಲ್ಲ. ಶುದ್ಧ ಕುಡಿಯುವ ನೀರು ಲಭಿಸಿಲ್ಲ’ ಎಂದು ತಾಂಡಾದ ನಿವಾಸಿ ರಾಮು ರಾಠೋಡ ತಿಳಿಸಿದ್ದಾರೆ.</p>.<p>‘ಶುದ್ಧ ನೀರಿನ ಘಟಕ ಅಳವಡಿಸಿದ ನಂತರ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸದಿರುವುದರಿಂದ ಸಮಸ್ಯೆಯಾಗಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಪ್ರಭು ಮಜಕೂರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>