‘ಲಾಕ್ಡೌನ್ ಕಾರಣ ಪರ ಊರಿನಲ್ಲಿದ್ದ ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಇತರರು ಊರಿಗೆ ಬಂದಿದ್ದು ಜನರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ನೀರಿನ ಬಳಕೆಯೂ ಹೆಚ್ಚಾಗಿದೆ. ಆದರೆ, ನೀರಿನ ಲಭ್ಯತೆ ಮಾತ್ರ ಕಡಿಮೆಯಿದೆ. ಆದ್ದರಿಂದ ದೂರದ ಹೊಲಗಳಲ್ಲಿನ ತೆರೆದ ಬಾವಿಗಳಿಂದ ನೀರು ತರುವ ಪರಿಸ್ಥಿತಿ ಬಂದೊದಗಿದೆ’ ಎಂದು ರಾಮ ಹಾಗೂ ಪಾರ್ವತಿ ಹೇಳಿದ್ದಾರೆ .‘ಕೆಲ ಕೊಳವೆ ಬಾವಿಗಳಲ್ಲಿ ನೀರು ಇದ್ದರೂ ನೀರು ಪೊರೈಕೆ ಯೋಜನೆಯಲ್ಲಿ ವ್ಯತ್ಯಯ ಆಗುತ್ತಿದೆ. ಕೆಲವೆಡೆ ಪೈಪ್ಲೈನ್ ಸರಿಯಾಗಿಲ್ಲ. ಹೀಗಾಗಿ ನೀರಿನ ಸಮಸ್ಯೆ ಉಂಟಾಗುತ್ತಿದೆ. ಶೀಘ್ರದಲ್ಲಿ ನೀರಿನ ಸೌಲಭ್ಯ ಕಲ್ಪಿಸಬೇಕು’ ಎಂದು ಪ್ರಮುಖರಾದ ಶರದ್ ಶಿಂಧೆ ಆಗ್ರಹಿಸಿದ್ದಾರೆ.