’ಪ್ರತಿ ದಿನ ಬೆಳಗಾದರೆ ನಾನು ಕಣಜಿ, ರುದನೂರ, ಬ್ಯಾಲಹಳ್ಳಿ ಸೇರಿದಂತೆ ಇನ್ನಿತರ ಗ್ರಾಮಗಳಿಗೆ ಪತ್ರಿಕೆ ಹಾಕುತ್ತೇನೆ. ಆದರೆ ರೇಲ್ವೆ ಸೇತುವೆ ಕೆಳಗಡೆ ನೀರು ನಿಂತಿರುವುದರಿಂದ ಅದರಲ್ಲಿ ಹಾವು ಸೇರಿದಂತೆ ಇನ್ನಿತರ ಹುಳುಗಳು ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಅಲ್ಲಿಂದ ಹಾದು ಹೋಗಲು ಅಂಜಿಕೆಯಾಗುತ್ತಿದೆ ಎಂದು ಪತ್ರಿಕಾ ವಿತರಕ ಶಿವಕುಮಾರ ಖಾಶೆಂಪುರ ಆತಂಕ ವ್ಯಕ್ತಪಡಿಸುತ್ತಾರೆ.