<p><strong>ಬೀದರ್: </strong>ಶಿಕ್ಷಣದ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ನೀರು ಉಳಿಸಿ ಜಗತ್ತು ಉಳಿಸಿ, ನಿಸರ್ಗ ಉಳಿಸಿ ಅಭಿಯಾನ ನಡೆಸುವ ಮೂಲಕ ಗಮನ ಸೆಳೆದರು.</p>.<p>ಕಾಲೇಜಿನ 3,825 ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಏಕಕಾಲಕ್ಕೆ ಮಾನವ ಸರಪಳಿ ರಚಿಸಿ ನೀರಿನ ಮಿತ ಬಳಕೆ ಹಾಗೂ ಮಳೆ ನೀರು ಕೊಯ್ಲು ಜಾಗೃತಿ ಮೂಡಿಸಿದರು.</p>.<p>ಅಂಬೇಡ್ಕರ್ ವೃತ್ತದಿಂದ ಶಹಾಗಂಜ್ ಕಮಾನ್, ಗವಾನ್ ಚೌಕ್, ಚೌಬಾರಾ, ನಯಿ ಕಮಾನ್, ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್ಸಿಂಗ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ಮಾನವ ಸರಪಳಿ ರಚಿಸಿದರು.</p>.<p>ವಿದ್ಯಾರ್ಥಿಗಳು ‘ನೀರು ಉಳಿಸಿ ಜಗತ್ತು ಉಳಿಸಿ, ನಿಸರ್ಗ ಉಳಿಸಿ’, ‘ನೀರು ಉಳಿಸಿ ಭವಿಷ್ಯವನ್ನು ಭದ್ರಪಡಿಸಿ’ ಎಂಬಿತ್ಯಾದಿ ಘೋಷಣಾ ಫಲಕಗಳನ್ನು ಹಿಡಿದುಕೊಂಡಿದ್ದರು. ಘೋಷಣೆಗಳ ಮೂಲಕ ಸಾರ್ವಜನಿಕರಿಗೆ ನೀರು ಹಾಗೂ ನಿಸರ್ಗದ ಮಹತ್ವವನ್ನು ಮನದಟ್ಟು ಮಾಡಿಕೊಡಲು ಪ್ರಯತ್ನಿಸಿದರು.</p>.<p>ಪಾಪನಾಶ ಬಳಿಯ ಬಸವಗಿರಿಯಲ್ಲಿ 100 ಹಾಗೂ ನೆಹರೂ ಕ್ರೀಡಾಂಗಣ ಹತ್ತಿರದ ಮಸ್ಜೀದ್ ಎ ಖಾದ್ರಿಯಾ ಬಳಿ 50 ಸಸಿಗಳನ್ನು ನೆಟ್ಟರು. ಇದೇ ವೇಳೆ ಎರಡೂ ಕಡೆಗಳಲ್ಲಿ ಮಳೆ ನೀರು ಕೊಯ್ಲು ಘಟಕಗಳಿಗೆ ಚಾಲನೆಯನ್ನೂ ನೀಡಲಾಯಿತು.</p>.<p>ಅಭಿಯಾನದ ಸಂಪೂರ್ಣ ಖರ್ಚು-ವೆಚ್ಚಗಳನ್ನು ವಿದ್ಯಾರ್ಥಿಗಳೇ ಭರಿಸಿದರು. ಪಾಲಕರು ಜೇಬು ಖರ್ಚಿಗಾಗಿ ನೀಡಿದ ಹಣದ ಕೆಲ ಪಾಲನ್ನು ಅಭಿಯಾನಕ್ಕೆ ವಿನಿಯೋಗಿಸಿದರು.</p>.<p>ಅಂಬೇಡ್ಕರ್ ವೃತ್ತದಲ್ಲಿ ನಿಸರ್ಗ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಬೀಳಗಿ, ‘ನೀರು ಹಾಗೂ ನಿಸರ್ಗದ ಉಳಿವಿಗಾಗಿ ವಿದ್ಯಾರ್ಥಿಗಳು ಜನಜಾಗೃತಿ ಮೂಡಿಸುತ್ತಿರುವುದು ಪ್ರಶಂಸನೀಯ’ ಎಂದರು.</p>.<p>‘ಜೀವದ ಮೂಲ ಆಧಾರವಾದ ನೀರನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ಕೊಡಬೇಕಿದೆ. ಸರ್ಕಾರ ಸ್ವಚ್ಛಮೇವ ಜಯತೆ, ಜಲಾಮೃತದಂತಹ ಕಾರ್ಯಕ್ರಮಗಳ ಮೂಲಕ ಸ್ವಚ್ಛತೆ ಹಾಗೂ ನೀರಿನ ಸಂರಕ್ಷಣೆ ಕಾರ್ಯ ಕೈಗೊಳ್ಳುತ್ತಿದೆ’ ಎಂದು ಹೇಳಿದರು.</p>.<p>ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಮಾತನಾಡಿ, ‘ಈಚಿನ ವರ್ಷಗಳಲ್ಲಿ ಮಳೆ ಕೊರತೆ ಹೆಚ್ಚಾಗಿದೆ. ಹೀಗಾಗಿ ಬಿದ್ದಷ್ಟೂ ಮಳೆ ನೀರನ್ನು ಸಂಗ್ರಹಿಸಿ, ಮರು ಬಳಕೆ ಮಾಡಬೇಕಾಗಿದೆ. ಮಳೆ ನೀರು ಕೊಯ್ಲು ಆಂದೋಲನದ ಮಾದರಿಯಲ್ಲಿ ನಡೆಯಬೇಕಾಗಿದೆ’ ಎಂದು ತಿಳಿಸಿದರು.</p>.<p>‘ಸಾರ್ವಜನಿಕರು ನೀರನ್ನು ಹಿತ ಮಿತವಾಗಿ ಬಳಸಬೇಕು. ಕಟ್ಟಡಗಳಿಗೆ ಮಳೆ ನೀರು ಕೊಯ್ಲು ವಿಧಾನವನ್ನು ಅಳವಡಿಸಬೇಕು’ ಎಂದು ಸಲಹೆ ಮಾಡಿದರು.</p>.<p>‘ಕಾಲೇಜು ವಿದ್ಯಾರ್ಥಿಗಳು ‘ಪಾಕೇಟ್ ಮನಿ’ ಬಳಸಿ ನಿಸರ್ಗ ಜಾಗೃತಿ ಅಭಿಯಾನ ನಡೆಸಿದ್ದಾರೆ. ವಿದ್ಯಾರ್ಥಿ ದಿಸೆಯಲ್ಲಿಯೇ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ’ ಎಂದು ಹೇಳಿದರು.</p>.<p>ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ನಿರ್ದೇಶಕ ಮಹಮ್ಮದ್ ಆರಿಫ್, ಕಾರ್ಯಕ್ರಮದ ಉಸ್ತುವಾರಿ ಮಹಮ್ಮದ್ ಖುರ್ಷಿದ್, ವಿವಿಧ ಇಲಾಖೆಗಳ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>ಜಿಲ್ಲಾ ಪಂಚಾಯಿತಿ, ಅರಣ್ಯ, ತೋಟಗಾರಿಕೆ, ಕೃಷಿ ಮತ್ತಿತರ ಇಲಾಖೆಗಳ ಸಹಯೋಗದೊಂದಿಗೆ ನಡೆದ ನಿಸರ್ಗ ಜಾಗೃತಿ ಅಭಿಯಾನವು ಪರಿಸರ ಸಂರಕ್ಷಣೆ ಬಗೆಗೆ ಜನರನ್ನು ಚಿಂತನೆಗೆ ಹಚ್ಚುವಲ್ಲಿ ಯಶಸ್ವಿಯಾಯಿತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಶಿಕ್ಷಣದ ಜತೆಗೆ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡಿರುವ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ನಗರದಲ್ಲಿ ಸೋಮವಾರ ನೀರು ಉಳಿಸಿ ಜಗತ್ತು ಉಳಿಸಿ, ನಿಸರ್ಗ ಉಳಿಸಿ ಅಭಿಯಾನ ನಡೆಸುವ ಮೂಲಕ ಗಮನ ಸೆಳೆದರು.</p>.<p>ಕಾಲೇಜಿನ 3,825 ವಿದ್ಯಾರ್ಥಿಗಳು ನಗರದ ಪ್ರಮುಖ ರಸ್ತೆಗಳಲ್ಲಿ ಏಕಕಾಲಕ್ಕೆ ಮಾನವ ಸರಪಳಿ ರಚಿಸಿ ನೀರಿನ ಮಿತ ಬಳಕೆ ಹಾಗೂ ಮಳೆ ನೀರು ಕೊಯ್ಲು ಜಾಗೃತಿ ಮೂಡಿಸಿದರು.</p>.<p>ಅಂಬೇಡ್ಕರ್ ವೃತ್ತದಿಂದ ಶಹಾಗಂಜ್ ಕಮಾನ್, ಗವಾನ್ ಚೌಕ್, ಚೌಬಾರಾ, ನಯಿ ಕಮಾನ್, ಬಸವೇಶ್ವರ ವೃತ್ತ, ಮಹಾವೀರ ವೃತ್ತ, ಭಗತ್ಸಿಂಗ್ ವೃತ್ತ, ಶಿವಾಜಿ ವೃತ್ತ, ಹರಳಯ್ಯ ವೃತ್ತದ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ಮಾನವ ಸರಪಳಿ ರಚಿಸಿದರು.</p>.<p>ವಿದ್ಯಾರ್ಥಿಗಳು ‘ನೀರು ಉಳಿಸಿ ಜಗತ್ತು ಉಳಿಸಿ, ನಿಸರ್ಗ ಉಳಿಸಿ’, ‘ನೀರು ಉಳಿಸಿ ಭವಿಷ್ಯವನ್ನು ಭದ್ರಪಡಿಸಿ’ ಎಂಬಿತ್ಯಾದಿ ಘೋಷಣಾ ಫಲಕಗಳನ್ನು ಹಿಡಿದುಕೊಂಡಿದ್ದರು. ಘೋಷಣೆಗಳ ಮೂಲಕ ಸಾರ್ವಜನಿಕರಿಗೆ ನೀರು ಹಾಗೂ ನಿಸರ್ಗದ ಮಹತ್ವವನ್ನು ಮನದಟ್ಟು ಮಾಡಿಕೊಡಲು ಪ್ರಯತ್ನಿಸಿದರು.</p>.<p>ಪಾಪನಾಶ ಬಳಿಯ ಬಸವಗಿರಿಯಲ್ಲಿ 100 ಹಾಗೂ ನೆಹರೂ ಕ್ರೀಡಾಂಗಣ ಹತ್ತಿರದ ಮಸ್ಜೀದ್ ಎ ಖಾದ್ರಿಯಾ ಬಳಿ 50 ಸಸಿಗಳನ್ನು ನೆಟ್ಟರು. ಇದೇ ವೇಳೆ ಎರಡೂ ಕಡೆಗಳಲ್ಲಿ ಮಳೆ ನೀರು ಕೊಯ್ಲು ಘಟಕಗಳಿಗೆ ಚಾಲನೆಯನ್ನೂ ನೀಡಲಾಯಿತು.</p>.<p>ಅಭಿಯಾನದ ಸಂಪೂರ್ಣ ಖರ್ಚು-ವೆಚ್ಚಗಳನ್ನು ವಿದ್ಯಾರ್ಥಿಗಳೇ ಭರಿಸಿದರು. ಪಾಲಕರು ಜೇಬು ಖರ್ಚಿಗಾಗಿ ನೀಡಿದ ಹಣದ ಕೆಲ ಪಾಲನ್ನು ಅಭಿಯಾನಕ್ಕೆ ವಿನಿಯೋಗಿಸಿದರು.</p>.<p>ಅಂಬೇಡ್ಕರ್ ವೃತ್ತದಲ್ಲಿ ನಿಸರ್ಗ ಉಳಿಸಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಬೀಳಗಿ, ‘ನೀರು ಹಾಗೂ ನಿಸರ್ಗದ ಉಳಿವಿಗಾಗಿ ವಿದ್ಯಾರ್ಥಿಗಳು ಜನಜಾಗೃತಿ ಮೂಡಿಸುತ್ತಿರುವುದು ಪ್ರಶಂಸನೀಯ’ ಎಂದರು.</p>.<p>‘ಜೀವದ ಮೂಲ ಆಧಾರವಾದ ನೀರನ್ನು ಮುಂದಿನ ಪೀಳಿಗೆಗೆ ಬಳುವಳಿಯಾಗಿ ಕೊಡಬೇಕಿದೆ. ಸರ್ಕಾರ ಸ್ವಚ್ಛಮೇವ ಜಯತೆ, ಜಲಾಮೃತದಂತಹ ಕಾರ್ಯಕ್ರಮಗಳ ಮೂಲಕ ಸ್ವಚ್ಛತೆ ಹಾಗೂ ನೀರಿನ ಸಂರಕ್ಷಣೆ ಕಾರ್ಯ ಕೈಗೊಳ್ಳುತ್ತಿದೆ’ ಎಂದು ಹೇಳಿದರು.</p>.<p>ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಮಾತನಾಡಿ, ‘ಈಚಿನ ವರ್ಷಗಳಲ್ಲಿ ಮಳೆ ಕೊರತೆ ಹೆಚ್ಚಾಗಿದೆ. ಹೀಗಾಗಿ ಬಿದ್ದಷ್ಟೂ ಮಳೆ ನೀರನ್ನು ಸಂಗ್ರಹಿಸಿ, ಮರು ಬಳಕೆ ಮಾಡಬೇಕಾಗಿದೆ. ಮಳೆ ನೀರು ಕೊಯ್ಲು ಆಂದೋಲನದ ಮಾದರಿಯಲ್ಲಿ ನಡೆಯಬೇಕಾಗಿದೆ’ ಎಂದು ತಿಳಿಸಿದರು.</p>.<p>‘ಸಾರ್ವಜನಿಕರು ನೀರನ್ನು ಹಿತ ಮಿತವಾಗಿ ಬಳಸಬೇಕು. ಕಟ್ಟಡಗಳಿಗೆ ಮಳೆ ನೀರು ಕೊಯ್ಲು ವಿಧಾನವನ್ನು ಅಳವಡಿಸಬೇಕು’ ಎಂದು ಸಲಹೆ ಮಾಡಿದರು.</p>.<p>‘ಕಾಲೇಜು ವಿದ್ಯಾರ್ಥಿಗಳು ‘ಪಾಕೇಟ್ ಮನಿ’ ಬಳಸಿ ನಿಸರ್ಗ ಜಾಗೃತಿ ಅಭಿಯಾನ ನಡೆಸಿದ್ದಾರೆ. ವಿದ್ಯಾರ್ಥಿ ದಿಸೆಯಲ್ಲಿಯೇ ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ’ ಎಂದು ಹೇಳಿದರು.</p>.<p>ಶಾಹೀನ್ ಶಿಕ್ಷಣ ಸಮೂಹ ಸಂಸ್ಥೆಯ ನಿರ್ದೇಶಕ ಮಹಮ್ಮದ್ ಆರಿಫ್, ಕಾರ್ಯಕ್ರಮದ ಉಸ್ತುವಾರಿ ಮಹಮ್ಮದ್ ಖುರ್ಷಿದ್, ವಿವಿಧ ಇಲಾಖೆಗಳ ಅಧಿಕಾರಿಗಳು, ಉಪನ್ಯಾಸಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<p>ಜಿಲ್ಲಾ ಪಂಚಾಯಿತಿ, ಅರಣ್ಯ, ತೋಟಗಾರಿಕೆ, ಕೃಷಿ ಮತ್ತಿತರ ಇಲಾಖೆಗಳ ಸಹಯೋಗದೊಂದಿಗೆ ನಡೆದ ನಿಸರ್ಗ ಜಾಗೃತಿ ಅಭಿಯಾನವು ಪರಿಸರ ಸಂರಕ್ಷಣೆ ಬಗೆಗೆ ಜನರನ್ನು ಚಿಂತನೆಗೆ ಹಚ್ಚುವಲ್ಲಿ ಯಶಸ್ವಿಯಾಯಿತು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>