<p><strong>ಖಟಕಚಿಂಚೋಳಿ</strong>: ಸಮೀಪದ ಚಳಕಾಪುರ ವಾಡಿ ಗ್ರಾಮದಲ್ಲಿ ನಾಲ್ಕೈದು ವರ್ಷಗಳಿಂದ ಶುದ್ಧ ಕುಡಿಯುವ ನೀರಿಗಾಗಿ ಜನರು ಪ್ರತಿದಿನ ಪರದಾಡುತ್ತಿದ್ದಾರೆ.</p>.<p>ಆದರೆ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಾರೆ.</p>.<p>‘ಚಳಕಾಪುರ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಈ ಗ್ರಾಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಪ್ರತಿ ನಿತ್ಯ ಒಂದು ಕಿಲೋಮೀಟರ್ ದೂರದಿಂದ ನೀರು ತರಬೇಕಾಗುತ್ತಿದೆ. ಗ್ರಾಮದಲ್ಲಿ ಪೈಪಲೈನ್ ಅಳವಡಿಸಿದ್ದರೂ ಅಲ್ಲಲ್ಲಿ ಒಡೆದು ಹೋಗಿದೆ. ನೀರಿನ ಸಮಸ್ಯೆ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದರೂ ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ’ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಾರೆ.</p>.<p>ಗ್ರಾಮದಲ್ಲಿ ಕೂಲಿಕಾರರು, ಬಡವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ. ಅವರಿಗೆ ಪ್ರತಿದಿನ ನೀರು ತರುವುದೇ ಬಹು ದೊಡ್ಡ ಕೆಲಸವಾಗಿದೆ. ನೀರಿಗಾಗಿ ಕುಳಿತುಕೊಂಡರೆ ಕೆಲಸ ಸಿಗುವುದಿಲ್ಲ. ಕೆಲಸಕ್ಕೆ ಹೋದರೆ ಕುಡಿಯಲು ನೀರು ಸಿಗುವುದಿಲ್ಲ. ಹೀಗಾಗಿ ಜೀವನವೇ ಬೇಸರವೆನಿಸುತ್ತಿದೆ’ ಎಂದು ಗ್ರಾಮದ ಮಹಿಳೆಯರು ಅಸಮಾಧಾನ<br />ವ್ಯಕ್ತಪಡಿಸುತ್ತಾರೆ.</p>.<p>‘ಸದ್ಯ ಬೇಸಿಗೆ ಪ್ರಾರಂಭವಾಗಿದೆ. ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಳಿಗ್ಗೆಯೇ ನೀರು ತಂದು ಕೆಲಸಕ್ಕೆ ಹೋಗೋಣ ಎಂದರೆ ವಿದ್ಯುತ್ ಇರುವುದಿಲ್ಲ. ಹೀಗಾಗಿ ನೀರಿಗಾಗಿ ಹೊಲಗದ್ದೆಗಳಿಗೆ ಹೋಗಿ ಬಾವಿಯಿಂದ ನೀರು ತೆಗೆದುಕೊಂಡು ತರುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಮುಖಂಡ ಮಲ್ಲಾರಿ ಬಿರಾದಾರ ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p>‘ಪಂಚಾಯಿತಿಯಲ್ಲಿ ಪ್ರತಿ ವರ್ಷ ಗ್ರಾಮಕ್ಕೆ ಕೊಳವೆ ಬಾವಿ ಕೊರೆಯಲು ಹಾಗೂ ಪೈಪ್ಲೈನ್ ಅಳವಡಿಕೆಗೆ ಹಣ ಮೀಸಲಿಡುತ್ತಾರೆ. ಆದರೆ ನಮ್ಮ ಗ್ರಾಮದಲ್ಲಿ ಯಾವುದೇ ರೀತಿಯ ಕಾಮಗಾರಿ ನಡೆದಿಲ್ಲ. ಹೀಗಾಗಿ ಆ ಹಣ ದುರ್ಬಳಕೆ ಆಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ’ ಎಂದು ಗ್ರಾಮದ ಮುಖಂಡ ಅನಿಲ ಜಾಧವ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ಶುದ್ಧ ನೀರು ಬರುತ್ತಿಲ್ಲ. ಬಂದರೂ ಕುಡಿಯಲು ಯೋಗ್ಯವಲ್ಲದ ಕಲುಷಿತ ನೀರು ಬರುತ್ತಿದೆ. ಯುವಕರು ದೂರದಿಂದ ಸೈಕಲ್, ದ್ವಿಚಕ್ರ ವಾಹನ ಮೂಲಕ ನೀರು ತರುತ್ತಾರೆ. ಹಿರಿಯರಿಗೆ ನೀರು ತರಲು ತುಂಬಾ ತೊಂದರೆಯಾಗುತ್ತಿದೆ. ಒಂದೆರಡು ದಿನ ಯಾರಾದರೂ ಕೊಡಬಹುದು. ಪ್ರತಿ ದಿನ ಯಾರೂ ಕೊಡುತ್ತಾರೆ’ ಎಂದು ಹಿರಿಯರು ಅಳಲನ್ನು ತೋಡಿಕೊಳ್ಳುತ್ತಾರೆ.</p>.<p>ನಾಲ್ಕೈದು ವರ್ಷಗಳ ಹಿಂದೆ ಗ್ರಾಮದಲ್ಲಿ ನೀರು ಸಂಗ್ರಹ ತೊಟ್ಟಿ ನಿರ್ಮಿಸಲಾಗಿದೆ. ಒಂದು ವರ್ಷದಿಂದ ಅದನ್ನು ಸ್ವಚ್ಛಗೊಳಿಸಿಲ್ಲ. ಅದರಲ್ಲಿ ಕ್ರಿಮಿಕೀಟಗಳು ಹೆಚ್ಚಾಗಿವೆ. ಇದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ಬಂದರೂ ಇತ್ತ ಗಮನ ಹರಿಸದೆ ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಖಟಕಚಿಂಚೋಳಿ</strong>: ಸಮೀಪದ ಚಳಕಾಪುರ ವಾಡಿ ಗ್ರಾಮದಲ್ಲಿ ನಾಲ್ಕೈದು ವರ್ಷಗಳಿಂದ ಶುದ್ಧ ಕುಡಿಯುವ ನೀರಿಗಾಗಿ ಜನರು ಪ್ರತಿದಿನ ಪರದಾಡುತ್ತಿದ್ದಾರೆ.</p>.<p>ಆದರೆ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಕಣ್ಮುಚ್ಚಿಕೊಂಡು ಕುಳಿತುಕೊಂಡಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಾರೆ.</p>.<p>‘ಚಳಕಾಪುರ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಈ ಗ್ರಾಮದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದೆ. ಪ್ರತಿ ನಿತ್ಯ ಒಂದು ಕಿಲೋಮೀಟರ್ ದೂರದಿಂದ ನೀರು ತರಬೇಕಾಗುತ್ತಿದೆ. ಗ್ರಾಮದಲ್ಲಿ ಪೈಪಲೈನ್ ಅಳವಡಿಸಿದ್ದರೂ ಅಲ್ಲಲ್ಲಿ ಒಡೆದು ಹೋಗಿದೆ. ನೀರಿನ ಸಮಸ್ಯೆ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದರೂ ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ’ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸುತ್ತಾರೆ.</p>.<p>ಗ್ರಾಮದಲ್ಲಿ ಕೂಲಿಕಾರರು, ಬಡವರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸವಿದ್ದಾರೆ. ಅವರಿಗೆ ಪ್ರತಿದಿನ ನೀರು ತರುವುದೇ ಬಹು ದೊಡ್ಡ ಕೆಲಸವಾಗಿದೆ. ನೀರಿಗಾಗಿ ಕುಳಿತುಕೊಂಡರೆ ಕೆಲಸ ಸಿಗುವುದಿಲ್ಲ. ಕೆಲಸಕ್ಕೆ ಹೋದರೆ ಕುಡಿಯಲು ನೀರು ಸಿಗುವುದಿಲ್ಲ. ಹೀಗಾಗಿ ಜೀವನವೇ ಬೇಸರವೆನಿಸುತ್ತಿದೆ’ ಎಂದು ಗ್ರಾಮದ ಮಹಿಳೆಯರು ಅಸಮಾಧಾನ<br />ವ್ಯಕ್ತಪಡಿಸುತ್ತಾರೆ.</p>.<p>‘ಸದ್ಯ ಬೇಸಿಗೆ ಪ್ರಾರಂಭವಾಗಿದೆ. ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಳಿಗ್ಗೆಯೇ ನೀರು ತಂದು ಕೆಲಸಕ್ಕೆ ಹೋಗೋಣ ಎಂದರೆ ವಿದ್ಯುತ್ ಇರುವುದಿಲ್ಲ. ಹೀಗಾಗಿ ನೀರಿಗಾಗಿ ಹೊಲಗದ್ದೆಗಳಿಗೆ ಹೋಗಿ ಬಾವಿಯಿಂದ ನೀರು ತೆಗೆದುಕೊಂಡು ತರುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಮುಖಂಡ ಮಲ್ಲಾರಿ ಬಿರಾದಾರ ಅಸಮಾಧಾನ ವ್ಯಕ್ತಪಡಿಸುತ್ತಾರೆ.</p>.<p>‘ಪಂಚಾಯಿತಿಯಲ್ಲಿ ಪ್ರತಿ ವರ್ಷ ಗ್ರಾಮಕ್ಕೆ ಕೊಳವೆ ಬಾವಿ ಕೊರೆಯಲು ಹಾಗೂ ಪೈಪ್ಲೈನ್ ಅಳವಡಿಕೆಗೆ ಹಣ ಮೀಸಲಿಡುತ್ತಾರೆ. ಆದರೆ ನಮ್ಮ ಗ್ರಾಮದಲ್ಲಿ ಯಾವುದೇ ರೀತಿಯ ಕಾಮಗಾರಿ ನಡೆದಿಲ್ಲ. ಹೀಗಾಗಿ ಆ ಹಣ ದುರ್ಬಳಕೆ ಆಗುತ್ತಿದೆಯೇ ಎಂಬ ಅನುಮಾನ ಕಾಡುತ್ತಿದೆ’ ಎಂದು ಗ್ರಾಮದ ಮುಖಂಡ ಅನಿಲ ಜಾಧವ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಗ್ರಾಮದಲ್ಲಿ ಶುದ್ಧ ನೀರು ಬರುತ್ತಿಲ್ಲ. ಬಂದರೂ ಕುಡಿಯಲು ಯೋಗ್ಯವಲ್ಲದ ಕಲುಷಿತ ನೀರು ಬರುತ್ತಿದೆ. ಯುವಕರು ದೂರದಿಂದ ಸೈಕಲ್, ದ್ವಿಚಕ್ರ ವಾಹನ ಮೂಲಕ ನೀರು ತರುತ್ತಾರೆ. ಹಿರಿಯರಿಗೆ ನೀರು ತರಲು ತುಂಬಾ ತೊಂದರೆಯಾಗುತ್ತಿದೆ. ಒಂದೆರಡು ದಿನ ಯಾರಾದರೂ ಕೊಡಬಹುದು. ಪ್ರತಿ ದಿನ ಯಾರೂ ಕೊಡುತ್ತಾರೆ’ ಎಂದು ಹಿರಿಯರು ಅಳಲನ್ನು ತೋಡಿಕೊಳ್ಳುತ್ತಾರೆ.</p>.<p>ನಾಲ್ಕೈದು ವರ್ಷಗಳ ಹಿಂದೆ ಗ್ರಾಮದಲ್ಲಿ ನೀರು ಸಂಗ್ರಹ ತೊಟ್ಟಿ ನಿರ್ಮಿಸಲಾಗಿದೆ. ಒಂದು ವರ್ಷದಿಂದ ಅದನ್ನು ಸ್ವಚ್ಛಗೊಳಿಸಿಲ್ಲ. ಅದರಲ್ಲಿ ಕ್ರಿಮಿಕೀಟಗಳು ಹೆಚ್ಚಾಗಿವೆ. ಇದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ಬಂದರೂ ಇತ್ತ ಗಮನ ಹರಿಸದೆ ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>