<p><strong>ಬೀದರ್:</strong> ನಗರಸಭೆ ವ್ಯಾಪ್ತಿಯಲ್ಲಿ 24X7 ಕುಡಿಯುವ ನೀರು ಸರಬರಾಜು ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವವರ ಸೇವೆ ಕಾಯಂಗೊಳಿಸಬೇಕೆಂದು ಆಗ್ರಹಿಸಿ ಬೀದರ್ ಸಿಟಿ ವಾಟರ್ ಸಪ್ಲೈ ವರ್ಕರ್ಸ್ ಸೊಸೈಟಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಶುಕ್ರವಾರ ಎರಡನೇ ದಿನಕ್ಕೆ ಕಾಲಿರಿಸಿದೆ.</p>.<p>ಎರಡು ದಿನಗಳಿಂದ ಧರಣಿ ನಡೆಸುತ್ತಿರುವುದರಿಂದ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನೊಂದೆಡೆ ಬೇಡಿಕೆ ಈಡೇರಿಸುವವರೆಗೆ ಧರಣಿ ಕೈಬಿಡುವುದಿಲ್ಲ ಎಂದು ಸೊಸೈಟಿ ಮುಖಂಡರು ಸ್ಪಷ್ಟಪಡಿಸಿದ್ದಾರೆ.</p>.<p>ಬೀದರ್ ನಗರಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಯಡಿ 50 ಜನರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಯೋಜನೆ ಶುರುವಾದ ನಂತರ ಕೆಲಸ ಕಾಯಂಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಲಾಗಿತ್ತು. ಈಡೇರದ ಕಾರಣ ಅನಿವಾರ್ಯವಾಗಿ ಧರಣಿ ನಡೆಸಲಾಗುತ್ತಿದೆ ಎಂದು ಸೊಸೈಟಿ ಮುಖಂಡರು ತಿಳಿಸಿದ್ದಾರೆ.</p>.<p>ಬೀದರ್ ನಗರದ ಜನಸಂಖ್ಯೆ ಮೂರು ಲಕ್ಷಕ್ಕೂ ಅಧಿಕವಿದೆ. 50 ಜನ ಇಡೀ ನಗರಕ್ಕೆ ನೀರು ಸರಬರಾಜು ಮಾಡುವ ಜವಾಬ್ದಾರಿ ಹೊತ್ತಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಎರಡು ತಿಂಗಳಿಂದ ವೇತನ ಪಾವತಿಸಿಲ್ಲ. ಸೇವೆ ಕೂಡ ಕಾಯಂಗೊಳಿಸಿಲ್ಲ ಎಂದು ಆರೋಪಿಸಿದ್ದಾರೆ.</p>.<p>ಸೊಸೈಟಿ ಅಧ್ಯಕ್ಷ ತುಕಾರಾಮ ಕಾಂಬ್ಳೆ, ಮಹೇಶ, ದಿಗಂಬರ, ಈಶ್ವರ, ರಮೇಶ, ರವಿ, ಶಿವರಾಜ, ಮಹಾದೇವ, ಆಸಿಫ್, ಉಮೇಶ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರಸಭೆ ವ್ಯಾಪ್ತಿಯಲ್ಲಿ 24X7 ಕುಡಿಯುವ ನೀರು ಸರಬರಾಜು ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವವರ ಸೇವೆ ಕಾಯಂಗೊಳಿಸಬೇಕೆಂದು ಆಗ್ರಹಿಸಿ ಬೀದರ್ ಸಿಟಿ ವಾಟರ್ ಸಪ್ಲೈ ವರ್ಕರ್ಸ್ ಸೊಸೈಟಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಮೀಪ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಶುಕ್ರವಾರ ಎರಡನೇ ದಿನಕ್ಕೆ ಕಾಲಿರಿಸಿದೆ.</p>.<p>ಎರಡು ದಿನಗಳಿಂದ ಧರಣಿ ನಡೆಸುತ್ತಿರುವುದರಿಂದ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇನ್ನೊಂದೆಡೆ ಬೇಡಿಕೆ ಈಡೇರಿಸುವವರೆಗೆ ಧರಣಿ ಕೈಬಿಡುವುದಿಲ್ಲ ಎಂದು ಸೊಸೈಟಿ ಮುಖಂಡರು ಸ್ಪಷ್ಟಪಡಿಸಿದ್ದಾರೆ.</p>.<p>ಬೀದರ್ ನಗರಕ್ಕೆ ಕುಡಿಯುವ ನೀರು ಸರಬರಾಜು ಯೋಜನೆಯಡಿ 50 ಜನರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗಿದೆ. ಯೋಜನೆ ಶುರುವಾದ ನಂತರ ಕೆಲಸ ಕಾಯಂಗೊಳಿಸಲಾಗುವುದು ಎಂದು ಆಶ್ವಾಸನೆ ನೀಡಲಾಗಿತ್ತು. ಈಡೇರದ ಕಾರಣ ಅನಿವಾರ್ಯವಾಗಿ ಧರಣಿ ನಡೆಸಲಾಗುತ್ತಿದೆ ಎಂದು ಸೊಸೈಟಿ ಮುಖಂಡರು ತಿಳಿಸಿದ್ದಾರೆ.</p>.<p>ಬೀದರ್ ನಗರದ ಜನಸಂಖ್ಯೆ ಮೂರು ಲಕ್ಷಕ್ಕೂ ಅಧಿಕವಿದೆ. 50 ಜನ ಇಡೀ ನಗರಕ್ಕೆ ನೀರು ಸರಬರಾಜು ಮಾಡುವ ಜವಾಬ್ದಾರಿ ಹೊತ್ತಿಕೊಂಡು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಎರಡು ತಿಂಗಳಿಂದ ವೇತನ ಪಾವತಿಸಿಲ್ಲ. ಸೇವೆ ಕೂಡ ಕಾಯಂಗೊಳಿಸಿಲ್ಲ ಎಂದು ಆರೋಪಿಸಿದ್ದಾರೆ.</p>.<p>ಸೊಸೈಟಿ ಅಧ್ಯಕ್ಷ ತುಕಾರಾಮ ಕಾಂಬ್ಳೆ, ಮಹೇಶ, ದಿಗಂಬರ, ಈಶ್ವರ, ರಮೇಶ, ರವಿ, ಶಿವರಾಜ, ಮಹಾದೇವ, ಆಸಿಫ್, ಉಮೇಶ ಮತ್ತಿತರರು ಧರಣಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>