<p><strong>ಅಷ್ಟೂರ(ಜನವಾಡ):</strong> ಬೀದರ್ ತಾಲ್ಲೂಕಿನ ಅಷ್ಟೂರ ಗ್ರಾಮದ ಪ್ರಗತಿ ಪರ ರೈತ ಶಿವಕುಮಾರ ನಾಗಲಗಿದ್ದಿ ಅವರ ಹೊಲದಲ್ಲಿ ಬಯರ್ ಫೆಮಿನಿಸ್ ಕಂಪನಿ ವತಿಯಿಂದ ಶುಕ್ರವಾರ ಕಲ್ಲಂಗಡಿ ಬೆಳೆ ಕ್ಷೇತ್ರೋತ್ಸವ ನಡೆಯಿತು.</p>.<p>ಈ ವೇಳೆ ಮಾತನಾಡಿದ ಕಂಪನಿ ಅಧಿಕಾರಿಗಳು, ‘ಉತ್ತಮ ಆದಾಯ ತಂದು ಕೊಡುವ ದಿಲ್ಕುಷ್ ತಳಿಯ ಕಲ್ಲಂಗಡಿ ಬೆಳೆಯಲು ಬೀದರ್ ಜಿಲ್ಲೆ ಸೂಕ್ತವಾಗಿದೆ. 65ರಿಂದ 70 ದಿನಗಳಲ್ಲಿ ಕಟಾವಿಗೆ ಬರುವ ಈ ತಳಿ ಎಕರೆಗೆ 25ರಿಂದ 30 ಟನ್ ಇಳುವರಿ ಕೊಡಲಿದೆ. ಜಿಲ್ಲೆಯಲ್ಲಿ ಅನೇಕ ರೈತರು ದಿಲ್ಕುಷ್ ತಳಿ ಕಲ್ಲಂಗಡಿ ಬೆಳೆದಿದ್ದಾರೆ’ ಎಂದು ಹೇಳಿದರು.</p>.<p>ಕಂಪನಿಯ ಪ್ರಾದೇಶಿಕ ವ್ಯವಸ್ಥಾಪಕ ಸೋಮನಾಥ, ಅರುಣ್, ಪಿಕೆಪಿಎಸ್ ಅಧ್ಯಕ್ಷ ಶಿವಕುಮಾರ ಪಾಟೀಲ, ಶಶಿಧರ ಪಾಟೀಲ, ಸಂಗಮೇಶ, ವಿನೋದ, ಹನುಮಂತ, ಸಂತೋಷ್ ಭಾವಿಕಟ್ಟಿ, ಪಾಂಡುರಂಗ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಷ್ಟೂರ(ಜನವಾಡ):</strong> ಬೀದರ್ ತಾಲ್ಲೂಕಿನ ಅಷ್ಟೂರ ಗ್ರಾಮದ ಪ್ರಗತಿ ಪರ ರೈತ ಶಿವಕುಮಾರ ನಾಗಲಗಿದ್ದಿ ಅವರ ಹೊಲದಲ್ಲಿ ಬಯರ್ ಫೆಮಿನಿಸ್ ಕಂಪನಿ ವತಿಯಿಂದ ಶುಕ್ರವಾರ ಕಲ್ಲಂಗಡಿ ಬೆಳೆ ಕ್ಷೇತ್ರೋತ್ಸವ ನಡೆಯಿತು.</p>.<p>ಈ ವೇಳೆ ಮಾತನಾಡಿದ ಕಂಪನಿ ಅಧಿಕಾರಿಗಳು, ‘ಉತ್ತಮ ಆದಾಯ ತಂದು ಕೊಡುವ ದಿಲ್ಕುಷ್ ತಳಿಯ ಕಲ್ಲಂಗಡಿ ಬೆಳೆಯಲು ಬೀದರ್ ಜಿಲ್ಲೆ ಸೂಕ್ತವಾಗಿದೆ. 65ರಿಂದ 70 ದಿನಗಳಲ್ಲಿ ಕಟಾವಿಗೆ ಬರುವ ಈ ತಳಿ ಎಕರೆಗೆ 25ರಿಂದ 30 ಟನ್ ಇಳುವರಿ ಕೊಡಲಿದೆ. ಜಿಲ್ಲೆಯಲ್ಲಿ ಅನೇಕ ರೈತರು ದಿಲ್ಕುಷ್ ತಳಿ ಕಲ್ಲಂಗಡಿ ಬೆಳೆದಿದ್ದಾರೆ’ ಎಂದು ಹೇಳಿದರು.</p>.<p>ಕಂಪನಿಯ ಪ್ರಾದೇಶಿಕ ವ್ಯವಸ್ಥಾಪಕ ಸೋಮನಾಥ, ಅರುಣ್, ಪಿಕೆಪಿಎಸ್ ಅಧ್ಯಕ್ಷ ಶಿವಕುಮಾರ ಪಾಟೀಲ, ಶಶಿಧರ ಪಾಟೀಲ, ಸಂಗಮೇಶ, ವಿನೋದ, ಹನುಮಂತ, ಸಂತೋಷ್ ಭಾವಿಕಟ್ಟಿ, ಪಾಂಡುರಂಗ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>