ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಳೆಗಳ ಹತೋಟಿ: ಇಂದು ತರಬೇತಿ

Last Updated 11 ಜೂನ್ 2021, 14:55 IST
ಅಕ್ಷರ ಗಾತ್ರ

ಜನವಾಡ: ಬೀದರ್ ತಾಲ್ಲೂಕಿನ ಜನವಾಡದ ಕೃಷಿ ವಿಜ್ಞಾನ ಕೇಂದ್ರವು ‘ಕೆವಿಕೆ ಕೃಷಿ ಪಾಠಶಾಲೆ’ ಸರಣಿಯಲ್ಲಿ ಶನಿವಾರ (ಜೂ.12) ಬೆಳಿಗ್ಗೆ 11ಕ್ಕೆ ಮುಂಗಾರು ಬೆಳೆಗಳಲ್ಲಿ ಕಳೆಗಳ ಹತೋಟಿ ಕುರಿತು ರೈತರಿಗೆ ಆನ್‍ಲೈನ್‍ನಲ್ಲಿ ತರಬೇತಿ ನೀಡಲಿದೆ.

ಕಳೆಗಳು, ಕಳೆಗಳ ವರ್ಗೀಕರಣ, ಏಕದಳ, ದ್ವಿದಳ ಜಾತಿಯ ಕಳೆಗಳು, ಅವುಗಳ ಬಾಧೆ ಪ್ರಮಾಣ, ಪಾರಂಪರಿಕ, ರಾಸಾಯನಿಕ ಹತೋಟಿ ಕ್ರಮಗಳ ಕುರಿತು ವಿಜಯಪುರ ಜಿಲ್ಲೆಯ ಇಂಡಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ರಾಜೀವಕುಮಾರ ಬಿ. ನೆಗಳೂರು ಮಾಹಿತಿ ನೀಡಲಿದ್ದಾರೆ.

ಜಿಲ್ಲೆಯ ರೈತರು ಗೂಲ್ ಮೀಟ್ ಲಿಂಕ್ meet.google.com/ngx-xdwd-noh ಬಳಸಿ ತರಬೇತಿಯಲ್ಲಿ ಪಾಲ್ಗೊಳ್ಳಬಹುದು ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಸುನೀಲಕುಮಾರ ಎನ್.ಎಂ. ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT