<p><strong>ಬೀದರ್:</strong> ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.</p>.<p>‘ಯಾವುದೇ ಕಾರಣಕ್ಕೂ ಅರ್ಹರು ಯೋಜನೆಯ ವ್ಯಾಪ್ತಿಯಿಂದ ಹೊರಗುಳಿಯಬಾರದು. ಯೋಜನೆಯ ಅನುಷ್ಠಾನ ಕೂಡ ವಿಳಂಬವಾಗಬಾರದು. ಪ್ರತಿ ಹಂತದಲ್ಲೂ ಅಧಿಕಾರಿಗಳು ಗಮನ ವಹಿಸಿ, ಅರ್ಹ ಫಲಾನುಭವಿಗಳಿಗೆ ಸಮರ್ಥವಾಗಿ ಇದರ ಲಾಭ ಸಿಗುವಂತೆ ಮಾಡಬೇಕು’ ಎಂದು ಸೂಚಿಸಿದರು.</p>.<p>ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ 3,44,896 ಗೃಹಲಕ್ಷ್ಮೀ ಫಲಾನುಭವಿಗಳಿದ್ದಾರೆ. ಮೃತ ಫಲಾನುಭವಿಗಳ ಕುರಿತು ಪ್ರತಿ ತಿಂಗಳು ನಿರಂತರ ಪರಿಷ್ಕರಿಸಬೇಕು. ಗೃಹಲಕ್ಷ್ಮೀ ಯೋಜನೆಯಲ್ಲಿ 2025ರ ಸೆಪ್ಟೆಂಬರ್ವರೆಗೆ ₹1,547.49 ಕೋಟಿ ಸಹಾಯಧನ ಡಿ.ಬಿ.ಟಿ. ಮೂಲಕ ಖಾತೆಗಳಿಗೆ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 3,56,422 ಅರ್ಹ ಫಲಾನುಭವಿಗಳಿದ್ದು, 2025ರ ಡಿಸೆಂಬರ್ ವರೆಗೆ ₹462.46 ಕೋಟಿ ಸಬ್ಸಿಡಿ ನೀಡಲಾಗಿದೆ. ಶಕ್ತಿ ಯೋಜನೆಯಡಿ 2026ರ ಜನವರಿ ಅಂತ್ಯದ ವರೆಗೆ ₹11.11 ಕೋಟಿ ಸಲ ಮಹಿಳೆಯರು ಪ್ರಯಾಣಿಸಿದ್ದು ₹327.66 ಕೋಟಿ ಸಂದಾಯವಾಗಿದೆ. ಪ್ರತಿನಿತ್ಯ ಸರಾಸರಿ 1 ಲಕ್ಷ 16 ಸಾವಿರ ಮಹಿಳೆಯರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾರೆ ಎಂದರು.</p>.<p>ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 13,13,305 ಫಲಾನುಭವಿಗಳಿದ್ದು, 5 ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ನೀಡಲಾಗುವ 5 ಕೆಜಿ ಅಕ್ಕಿ ಮೊತ್ತವನ್ನು 2024ರ ಡಿಸೆಂಬರ್ ವರೆಗೆ ಡಿ.ಬಿ.ಟಿ. ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ₹333.28 ಕೋಟಿ ಹಣ ಜಮೆ ಮಾಡಲಾಗಿದೆ ಎಂದು ಹೇಳಿದರು.</p>.<p>ಯುವನಿಧಿ ಯೋಜನೆಯ ಅಡಿಯಲ್ಲಿ ಪದವಿ ಪಡೆದ 15,211 ಮತ್ತು ಡಿಪ್ಲೋಮಾ ಪಡೆದ 375 ಸೇರಿದಂತೆ ಒಟ್ಟು 15,586 ವಿದ್ಯಾರ್ಥಿಗಳಿಗೆ 2025ರ ಆಗಸ್ಟ್ ತನಕ ₹30.10 ಕೋಟಿ ಹಣ ಡಿಬಿಟಿ ಮೂಲಕ ಪವತಿಸಲಾಗಿದೆ. ಯುವನಿಧಿ ಯೋಜನೆಯಲ್ಲಿ ಜಿಲ್ಲೆಯ ಪದವೀಧರರು ನೋಂದಾಯಿತರಾದವರಿಗೆ ಉದ್ಯೋಗ ಹೊಂದಲು ಸರಿಯಾದ ಕೌಶಲ ತರಬೇತಿ, ಮಾರ್ಗದರ್ಶನ ನೀಡಬೇಕು. ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಯುವನಿಧಿ ಯೋಜನೆಯ ಕುರಿತು ಕ್ಯಾಂಪ್ ಮಾಡಿ ಮಾಹಿತಿ ನೀಡಬೇಕೆಂದು ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ಅಧಿಕಾರಿ ಕಿಶೋರ ದುಬೆ ಮಾತನಾಡಿ, ಗ್ಯಾರಂಟಿ ಯೋಜನೆಗಳು ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಲಿಖಿತ ರೂಪದಲ್ಲಿ ದೂರು ಸಲ್ಲಿಸಿದ್ದಲ್ಲಿ ಅವರ ಸಮಸ್ಯೆಗೆ ಸ್ಪಂದಿಸಬೇಕು ಎಂದರು.</p>.<p>ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಲತಾ ಹಾರಕೂಡ, ಮಾರುತಿ ಬಂಗಾರೆ, ಮಹೆಬೂಬ್ ಖಾನ್, ಪೂಜಾ ಜಾರ್ಜ್, ಉದಯಕುಮಾರ ವಾರದ ಮತ್ತಿತರರು ಪಾಲ್ಗೊಂಡಿದ್ದರು. </p>.<p><strong>ಪ್ರತಿ ಹಂತದಲ್ಲಿ ಅಧಿಕಾರಿಗಳು ಗಮನಹರಿಸಲಿಮೃತರ ವಿವರ ಪ್ರತಿ ತಿಂಗಳು ಪರಿಷ್ಕರಿಸಬೇಕು ಯುವನಿಧಿ ಮಾಹಿತಿಗೆ ಕ್ಯಾಂಪ್ ಹಾಕಲು ಸೂಚನೆ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು.</p>.<p>‘ಯಾವುದೇ ಕಾರಣಕ್ಕೂ ಅರ್ಹರು ಯೋಜನೆಯ ವ್ಯಾಪ್ತಿಯಿಂದ ಹೊರಗುಳಿಯಬಾರದು. ಯೋಜನೆಯ ಅನುಷ್ಠಾನ ಕೂಡ ವಿಳಂಬವಾಗಬಾರದು. ಪ್ರತಿ ಹಂತದಲ್ಲೂ ಅಧಿಕಾರಿಗಳು ಗಮನ ವಹಿಸಿ, ಅರ್ಹ ಫಲಾನುಭವಿಗಳಿಗೆ ಸಮರ್ಥವಾಗಿ ಇದರ ಲಾಭ ಸಿಗುವಂತೆ ಮಾಡಬೇಕು’ ಎಂದು ಸೂಚಿಸಿದರು.</p>.<p>ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ 3,44,896 ಗೃಹಲಕ್ಷ್ಮೀ ಫಲಾನುಭವಿಗಳಿದ್ದಾರೆ. ಮೃತ ಫಲಾನುಭವಿಗಳ ಕುರಿತು ಪ್ರತಿ ತಿಂಗಳು ನಿರಂತರ ಪರಿಷ್ಕರಿಸಬೇಕು. ಗೃಹಲಕ್ಷ್ಮೀ ಯೋಜನೆಯಲ್ಲಿ 2025ರ ಸೆಪ್ಟೆಂಬರ್ವರೆಗೆ ₹1,547.49 ಕೋಟಿ ಸಹಾಯಧನ ಡಿ.ಬಿ.ಟಿ. ಮೂಲಕ ಖಾತೆಗಳಿಗೆ ಜಮಾ ಮಾಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ 3,56,422 ಅರ್ಹ ಫಲಾನುಭವಿಗಳಿದ್ದು, 2025ರ ಡಿಸೆಂಬರ್ ವರೆಗೆ ₹462.46 ಕೋಟಿ ಸಬ್ಸಿಡಿ ನೀಡಲಾಗಿದೆ. ಶಕ್ತಿ ಯೋಜನೆಯಡಿ 2026ರ ಜನವರಿ ಅಂತ್ಯದ ವರೆಗೆ ₹11.11 ಕೋಟಿ ಸಲ ಮಹಿಳೆಯರು ಪ್ರಯಾಣಿಸಿದ್ದು ₹327.66 ಕೋಟಿ ಸಂದಾಯವಾಗಿದೆ. ಪ್ರತಿನಿತ್ಯ ಸರಾಸರಿ 1 ಲಕ್ಷ 16 ಸಾವಿರ ಮಹಿಳೆಯರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾರೆ ಎಂದರು.</p>.<p>ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 13,13,305 ಫಲಾನುಭವಿಗಳಿದ್ದು, 5 ಕೆಜಿ ಅಕ್ಕಿ ಜೊತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ನೀಡಲಾಗುವ 5 ಕೆಜಿ ಅಕ್ಕಿ ಮೊತ್ತವನ್ನು 2024ರ ಡಿಸೆಂಬರ್ ವರೆಗೆ ಡಿ.ಬಿ.ಟಿ. ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ₹333.28 ಕೋಟಿ ಹಣ ಜಮೆ ಮಾಡಲಾಗಿದೆ ಎಂದು ಹೇಳಿದರು.</p>.<p>ಯುವನಿಧಿ ಯೋಜನೆಯ ಅಡಿಯಲ್ಲಿ ಪದವಿ ಪಡೆದ 15,211 ಮತ್ತು ಡಿಪ್ಲೋಮಾ ಪಡೆದ 375 ಸೇರಿದಂತೆ ಒಟ್ಟು 15,586 ವಿದ್ಯಾರ್ಥಿಗಳಿಗೆ 2025ರ ಆಗಸ್ಟ್ ತನಕ ₹30.10 ಕೋಟಿ ಹಣ ಡಿಬಿಟಿ ಮೂಲಕ ಪವತಿಸಲಾಗಿದೆ. ಯುವನಿಧಿ ಯೋಜನೆಯಲ್ಲಿ ಜಿಲ್ಲೆಯ ಪದವೀಧರರು ನೋಂದಾಯಿತರಾದವರಿಗೆ ಉದ್ಯೋಗ ಹೊಂದಲು ಸರಿಯಾದ ಕೌಶಲ ತರಬೇತಿ, ಮಾರ್ಗದರ್ಶನ ನೀಡಬೇಕು. ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಯುವನಿಧಿ ಯೋಜನೆಯ ಕುರಿತು ಕ್ಯಾಂಪ್ ಮಾಡಿ ಮಾಹಿತಿ ನೀಡಬೇಕೆಂದು ಸೂಚಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾ ಅಧಿಕಾರಿ ಕಿಶೋರ ದುಬೆ ಮಾತನಾಡಿ, ಗ್ಯಾರಂಟಿ ಯೋಜನೆಗಳು ಸಂಬಂಧಪಟ್ಟ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ಲಿಖಿತ ರೂಪದಲ್ಲಿ ದೂರು ಸಲ್ಲಿಸಿದ್ದಲ್ಲಿ ಅವರ ಸಮಸ್ಯೆಗೆ ಸ್ಪಂದಿಸಬೇಕು ಎಂದರು.</p>.<p>ಜಿಲ್ಲಾ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಲತಾ ಹಾರಕೂಡ, ಮಾರುತಿ ಬಂಗಾರೆ, ಮಹೆಬೂಬ್ ಖಾನ್, ಪೂಜಾ ಜಾರ್ಜ್, ಉದಯಕುಮಾರ ವಾರದ ಮತ್ತಿತರರು ಪಾಲ್ಗೊಂಡಿದ್ದರು. </p>.<p><strong>ಪ್ರತಿ ಹಂತದಲ್ಲಿ ಅಧಿಕಾರಿಗಳು ಗಮನಹರಿಸಲಿಮೃತರ ವಿವರ ಪ್ರತಿ ತಿಂಗಳು ಪರಿಷ್ಕರಿಸಬೇಕು ಯುವನಿಧಿ ಮಾಹಿತಿಗೆ ಕ್ಯಾಂಪ್ ಹಾಕಲು ಸೂಚನೆ</strong> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>