<p><strong>ಬೀದರ್:</strong> ತರಕಾರಿ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದ್ದ ಈರುಳ್ಳಿ ಬೆಲೆ ನಿಧಾನವಾಗಿ ಕಡಿಮೆಯಾಗುತ್ತಿದೆ. ಒಂದು ವಾರದ ಅವಧಿಯಲ್ಲೇ ಪ್ರತಿ ಕ್ವಿಂಟಲ್ಗೆ ₹ 1 ಸಾವಿರ ಕಡಿಮೆಯಾಗಿದೆ. ಇದೇ ಅವಧಿಯಲ್ಲಿ ಬದನೆಕಾಯಿ ಬೆಲೆ ಹೆಚ್ಚಳದ ಕಿರೀಟ ಧರಿಸಿದೆ. ಮೆಣಸಿನಕಾಯಿ ಬೆಲೆ ಸ್ವಲ್ಪ ಹೆಚ್ಚಾಗಿದೆ.</p>.<p>ಬೇರೆ ಬೇರೆ ಕಡೆಯಿಂದಲೂ ಈರುಳ್ಳಿ ಮಾರುಕಟ್ಟೆಗೆ ಬರುತ್ತಿರುವ ಕಾರಣ ಸ್ವಲ್ಪ ಬೆಲೆ ಕಡಿಮೆಯಾಗಿದೆ. ಇದೇ ಸ್ಥಿತಿ ಮುಂದುವರಿದರೆ ಈರುಳ್ಳಿ ಬೆಲೆ ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ. ಸದ್ಯ ಗ್ರಾಹಕರು ಒಂದು ವಾರಕ್ಕೆ ಎಷ್ಟು ಅಗತ್ಯವೋ ಅಷ್ಟೇ ಪ್ರಮಾಣದ ಈರುಳ್ಳಿ ಖರೀದಿಸುತ್ತಿದ್ದಾರೆ.</p>.<p>ಬೆಳಗಾವಿಯಿಂದ ಬೀದರ್ಗೆ ಬರುವ ಮೆಣಸಿನಕಾಯಿ ಪ್ರಮಾಣ ಕಡಿಮೆಯಾಗಿದೆ. ಇದೇ ಕಾರಣಕ್ಕೆ ಮೆಣಸಿನಕಾಯಿ ಬೆಲೆ ಪ್ರತಿ ಕ್ವಿಂಟಲ್ಗೆ ₹ 500 ಹೆಚ್ಚಳವಾಗಿದೆ. ಬದನೆಕಾಯಿ ಹಾಗೂ ಮೆಂತೆಸೊಪ್ಪಿನ ಬೆಲೆಯಲ್ಲಿ ಪ್ರತಿ ಕ್ವಿಂಟಲ್ಗೆ ₹ 1 ಸಾವಿರ ಏರಿಕೆಯಾಗಿದೆ.</p>.<p>ನುಗ್ಗೆಕಾಯಿ ಬೆಲೆ ಪ್ರತಿ ಕ್ವಿಂಟಲ್ಗೆ ₹ 15 ಸಾವಿರದಿಂದ ₹ 12 ಸಾವಿರಕ್ಕೆ ಕುಸಿದಿದೆ. ಆದರೂ ನುಗ್ಗೆಕಾಯಿ ಕೊಳ್ಳಲು ಜನ ಸಾಮಾನ್ಯರು ಹಿಂದೇಟು ಹಾಕುತ್ತಿದ್ದಾರೆ. ಮನೆಯಲ್ಲಿ ಕಾರ್ಯಕ್ರಮ ಇರುವವರು ಮಾತ್ರ ಅಗತ್ಯವಿರುವಷ್ಟು ನುಗ್ಗೆಕಾಯಿ ಖರೀದಿಸುತ್ತಿದ್ದಾರೆ.</p>.<p>ಆಲೂಗಡ್ಡೆ, ತೊಂಡೆಕಾಯಿ, ಬೆಂಡೆಕಾಯಿ, ಬೆಳ್ಳುಳ್ಳಿ, ಗಜ್ಜರಿ, ಹೂಕೋಸು, ಸಬ್ಬಸಗಿ, ಬೀಟ್ರೂಟ್, ಕೊತಂಬರಿ, ಟೊಮೆಟೊ ಹಾಗೂ ಪಾಲಕ್ ಬೆಲೆ ಸ್ಥಿರವಾಗಿದೆ.</p>.<p>ಹೈದರಾಬಾದ್ನಿಂದ ತೊಂಡೆಕಾಯಿ, ಬೆಂಡೆಕಾಯಿ, ಬೀಟ್ರೂಟ್, ಟೊಮೆಟೊ ಹಾಗೂ ಪಾಲಕ್ ಬಂದಿದೆ. ಮಹಾರಾಷ್ಟ್ರದ ಸೋಲಾಪುರದಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ತರಕಾರಿ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದ್ದ ಈರುಳ್ಳಿ ಬೆಲೆ ನಿಧಾನವಾಗಿ ಕಡಿಮೆಯಾಗುತ್ತಿದೆ. ಒಂದು ವಾರದ ಅವಧಿಯಲ್ಲೇ ಪ್ರತಿ ಕ್ವಿಂಟಲ್ಗೆ ₹ 1 ಸಾವಿರ ಕಡಿಮೆಯಾಗಿದೆ. ಇದೇ ಅವಧಿಯಲ್ಲಿ ಬದನೆಕಾಯಿ ಬೆಲೆ ಹೆಚ್ಚಳದ ಕಿರೀಟ ಧರಿಸಿದೆ. ಮೆಣಸಿನಕಾಯಿ ಬೆಲೆ ಸ್ವಲ್ಪ ಹೆಚ್ಚಾಗಿದೆ.</p>.<p>ಬೇರೆ ಬೇರೆ ಕಡೆಯಿಂದಲೂ ಈರುಳ್ಳಿ ಮಾರುಕಟ್ಟೆಗೆ ಬರುತ್ತಿರುವ ಕಾರಣ ಸ್ವಲ್ಪ ಬೆಲೆ ಕಡಿಮೆಯಾಗಿದೆ. ಇದೇ ಸ್ಥಿತಿ ಮುಂದುವರಿದರೆ ಈರುಳ್ಳಿ ಬೆಲೆ ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ. ಸದ್ಯ ಗ್ರಾಹಕರು ಒಂದು ವಾರಕ್ಕೆ ಎಷ್ಟು ಅಗತ್ಯವೋ ಅಷ್ಟೇ ಪ್ರಮಾಣದ ಈರುಳ್ಳಿ ಖರೀದಿಸುತ್ತಿದ್ದಾರೆ.</p>.<p>ಬೆಳಗಾವಿಯಿಂದ ಬೀದರ್ಗೆ ಬರುವ ಮೆಣಸಿನಕಾಯಿ ಪ್ರಮಾಣ ಕಡಿಮೆಯಾಗಿದೆ. ಇದೇ ಕಾರಣಕ್ಕೆ ಮೆಣಸಿನಕಾಯಿ ಬೆಲೆ ಪ್ರತಿ ಕ್ವಿಂಟಲ್ಗೆ ₹ 500 ಹೆಚ್ಚಳವಾಗಿದೆ. ಬದನೆಕಾಯಿ ಹಾಗೂ ಮೆಂತೆಸೊಪ್ಪಿನ ಬೆಲೆಯಲ್ಲಿ ಪ್ರತಿ ಕ್ವಿಂಟಲ್ಗೆ ₹ 1 ಸಾವಿರ ಏರಿಕೆಯಾಗಿದೆ.</p>.<p>ನುಗ್ಗೆಕಾಯಿ ಬೆಲೆ ಪ್ರತಿ ಕ್ವಿಂಟಲ್ಗೆ ₹ 15 ಸಾವಿರದಿಂದ ₹ 12 ಸಾವಿರಕ್ಕೆ ಕುಸಿದಿದೆ. ಆದರೂ ನುಗ್ಗೆಕಾಯಿ ಕೊಳ್ಳಲು ಜನ ಸಾಮಾನ್ಯರು ಹಿಂದೇಟು ಹಾಕುತ್ತಿದ್ದಾರೆ. ಮನೆಯಲ್ಲಿ ಕಾರ್ಯಕ್ರಮ ಇರುವವರು ಮಾತ್ರ ಅಗತ್ಯವಿರುವಷ್ಟು ನುಗ್ಗೆಕಾಯಿ ಖರೀದಿಸುತ್ತಿದ್ದಾರೆ.</p>.<p>ಆಲೂಗಡ್ಡೆ, ತೊಂಡೆಕಾಯಿ, ಬೆಂಡೆಕಾಯಿ, ಬೆಳ್ಳುಳ್ಳಿ, ಗಜ್ಜರಿ, ಹೂಕೋಸು, ಸಬ್ಬಸಗಿ, ಬೀಟ್ರೂಟ್, ಕೊತಂಬರಿ, ಟೊಮೆಟೊ ಹಾಗೂ ಪಾಲಕ್ ಬೆಲೆ ಸ್ಥಿರವಾಗಿದೆ.</p>.<p>ಹೈದರಾಬಾದ್ನಿಂದ ತೊಂಡೆಕಾಯಿ, ಬೆಂಡೆಕಾಯಿ, ಬೀಟ್ರೂಟ್, ಟೊಮೆಟೊ ಹಾಗೂ ಪಾಲಕ್ ಬಂದಿದೆ. ಮಹಾರಾಷ್ಟ್ರದ ಸೋಲಾಪುರದಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>