ಜನವಾಡ: ‘ಸಂಘಟನೆ ಆಧಾರದಲ್ಲಿ ಹಾಗೂ ಪಕ್ಷದ ಕಾರ್ಯಕರ್ತರ ಶ್ರಮದ ಮೇಲೆ ಚುನಾವಣೆಗಳಲ್ಲಿ ಜಯ ಸಾಧಿಸಬೇಕಾಗಿದೆ’ ಎಂದು ಬಿಜೆಪಿ ಕಲಬುರ್ಗಿ ವಿಭಾಗೀಯ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್ ಹೇಳಿದರು.
ಬೀದರ್ ತಾಲ್ಲೂಕಿನ ಜನವಾಡದಲ್ಲಿ ಮಂಗಳವಾರ ಬಿಜೆಪಿ ಬೀದರ್ ಗ್ರಾಮಾಂತರ ಮಂಡಲ ವತಿಯಿಂದ ಹಮ್ಮಿಕೊಂಡಿದ್ದ ಶಕ್ತಿ ಕೇಂದ್ರ ಪ್ರಮುಖರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಪಕ್ಷ ಸಂಘಟನೆಗೆ ಒತ್ತು ನೀಡಿದರೆ ಮಾತ್ರ ಚುನಾವಣೆಗಳಲ್ಲಿ ಯಶಸ್ಸು ಸಾಧಿಸಬಹುದು. ಹೀಗಾಗಿ ಎಲ್ಲ ಕಡೆ ಶಕ್ತಿ ಕೇಂದ್ರದ ಪ್ರಮುಖರ ಸಭೆ ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಂಡಲ ಅಧ್ಯಕ್ಷ ರಾಜೇಂದ್ರ ಪೂಜಾರಿ ಮಾತನಾಡಿ,‘ಬೀದರ್ ಗ್ರಾಮಾಂತರ ಮಂಡಲ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಪಕ್ಷದ ಸಂಘಟನೆಗೆ ಆದ್ಯತೆ ನೀಡಿ ಕೆಲಸ ಮಾಡಲಾಗುತ್ತಿದೆ’ ಎಂದು ಹೇಳಿದರು.
ಪಕ್ಷದ ವಿಭಾಗೀಯ ಸಹ ಸಂಘಟನಾ ಕಾರ್ಯದರ್ಶಿ ಸೂರ್ಯಕಾಂತ ದೋನಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣೆ, ಕಾರ್ಯದರ್ಶಿ ವಿಜಯಕುಮಾರ ಎಸ್. ಪಾಟೀಲ ಗಾದಗಿ ಉಪಸ್ಥಿತರಿದ್ದರು. ರವಿ ಚನ್ನಪ್ಪನೋರ್ ಸ್ವಾಗತಿಸಿದರು. ಧಮೇಂದ್ರ ನಿರೂಪಿಸಿದರು.