‘ನಾನು ಸೋತಿದ್ದರೂ ಎಲ್ಲಿಗೂ ಹೋಗದೆ ಕ್ಷೇತ್ರದ ಜನರ, ಪಕ್ಷದ ಕಾರ್ಯಕರ್ತರ ಸೇವೆಯಲ್ಲಿರುತ್ತೇನೆ. ಶೀಘ್ರವೇ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ಎದುರಾಗಲಿದ್ದು ಎಲ್ಲೆಡೆ ಪ್ರಚಾರ ಕೈಗೊಂಡು ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತೇನೆ. ಪತಿ ಬಿ.ನಾರಾಯಣರಾವ್ ಕೂಡ ಮತದಾರರ ಮೇಲೆ ವಿಶ್ವಾಸವಿಟ್ಟು ನಿರಂತರವಾಗಿ ಅವರ ಸಂಪರ್ಕದಲ್ಲಿದ್ದು ಸೇವೆ ಸಲ್ಲಿಸಿ ಶಾಸಕ ಆಗಿದ್ದರು. ನಾನೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತೇನೆ. ಮನೆ ಮಗಳಾಗಿ ಉಳಿದು ಬೆಂಬಲಿಗರ ಪ್ರತಿ ಕಾರ್ಯದಲ್ಲಿ ಭಾಗವಹಿಸುತ್ತೇನೆ’ ಎಂದರು.