<p><strong>ಕಮಲನಗರ: </strong>ತಾಲ್ಲೂಕಿನ ಬೆಳಕುಣಿ(ಬಿ) ಗ್ರಾಮದಲ್ಲಿ ಸಹೋದರ ಸಂಬಂಧಿ ನಡುವಿನ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.</p>.<p>ಶಾಂತಾಬಾಯಿ ಧನಾಜಿ ಮುರ್ತಳೆ (50) ಮೃತಪಟ್ಟವರು. ಗುಣಾಜಿ ಮತ್ತು ಧನಾಜಿ ಸಹೋದರ ನಡುವೆ ಮನೆ ಕಟ್ಟುವ ವಿಚಾರವಾಗಿ ಸುಮಾರು 4 ವರ್ಷಗಳಿಂದ ಜಗಳ ನಡೆಯುತ್ತಿತ್ತು. ಶುಕ್ರವಾರ ಇದೇ ಕಾರಣಕ್ಕೆ ಜಗಳವಾಗಿದ್ದು, ಗುಣಾಜಿ ಮಾಧವರಾವ ಅವರು ಕೋಪದಿಂದ ಶಾತಾಬಾಯಿ ಅವರಿಗೆ ಇಟಗಿಯಿಂದ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ತೀವ್ರ ಗಾಯಗೊಂಡ ಅವರನ್ನು ಕಮಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಉದಗಿರ ಆಸ್ಪತ್ರೆಗೆ ಕೊರೆದೊಯ್ಯುವಾಗ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ ಎಂದು ಪಿಎಸ್ಐ ಬಸವರಾಜ ಪಾಟೀಲ<br />ಹೇಳಿದ್ದಾರೆ.</p>.<p>ಗುಣಾಜಿ ಮಾಧವರಾವ, ಅವರ ಪುತ್ರ ದತ್ತಾ ಮತ್ತು ಸೊಸೆ ರಾಣಿ ಅವರರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ಎಸ್ಪಿ ಡಿ.ಕಿಶೋರಬಾಬು, ಎಎಸ್ಪಿ ಪೃಥ್ವಿಕ್ ಶಂಕರ್, ಸಿಪಿಐ ರಾಮಪ್ಪ ಸಾವಳೆ ಭೇಟಿ ನೀಡಿದರು. ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ: </strong>ತಾಲ್ಲೂಕಿನ ಬೆಳಕುಣಿ(ಬಿ) ಗ್ರಾಮದಲ್ಲಿ ಸಹೋದರ ಸಂಬಂಧಿ ನಡುವಿನ ಜಾಗದ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಗಾಯಗೊಂಡಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.</p>.<p>ಶಾಂತಾಬಾಯಿ ಧನಾಜಿ ಮುರ್ತಳೆ (50) ಮೃತಪಟ್ಟವರು. ಗುಣಾಜಿ ಮತ್ತು ಧನಾಜಿ ಸಹೋದರ ನಡುವೆ ಮನೆ ಕಟ್ಟುವ ವಿಚಾರವಾಗಿ ಸುಮಾರು 4 ವರ್ಷಗಳಿಂದ ಜಗಳ ನಡೆಯುತ್ತಿತ್ತು. ಶುಕ್ರವಾರ ಇದೇ ಕಾರಣಕ್ಕೆ ಜಗಳವಾಗಿದ್ದು, ಗುಣಾಜಿ ಮಾಧವರಾವ ಅವರು ಕೋಪದಿಂದ ಶಾತಾಬಾಯಿ ಅವರಿಗೆ ಇಟಗಿಯಿಂದ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ತೀವ್ರ ಗಾಯಗೊಂಡ ಅವರನ್ನು ಕಮಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಗೆ ಉದಗಿರ ಆಸ್ಪತ್ರೆಗೆ ಕೊರೆದೊಯ್ಯುವಾಗ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ ಎಂದು ಪಿಎಸ್ಐ ಬಸವರಾಜ ಪಾಟೀಲ<br />ಹೇಳಿದ್ದಾರೆ.</p>.<p>ಗುಣಾಜಿ ಮಾಧವರಾವ, ಅವರ ಪುತ್ರ ದತ್ತಾ ಮತ್ತು ಸೊಸೆ ರಾಣಿ ಅವರರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳಕ್ಕೆ ಎಸ್ಪಿ ಡಿ.ಕಿಶೋರಬಾಬು, ಎಎಸ್ಪಿ ಪೃಥ್ವಿಕ್ ಶಂಕರ್, ಸಿಪಿಐ ರಾಮಪ್ಪ ಸಾವಳೆ ಭೇಟಿ ನೀಡಿದರು. ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>