‘ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಈ ಹಿಂದಿನ ಉಪನಿರ್ದೇಶಕರಾದ ತಿಪ್ಪಣ್ಣ ಸಿರಸಗಿ ಹಾಗೂ ರವೀಂದ್ರ ರತ್ನಾಕರ್ ಅವರು ಕರ್ತವ್ಯಲೋಪ ಎಸಗಿರುವುದು ಸಾಬೀತಾಗಿದ್ದು ಇಬ್ಬರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ರವೀಂದ್ರ ರತ್ನಾಕರ್ ಅವರು ಸದ್ಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದು ಯಾವ ಪ್ರಭಾವಕ್ಕೂ ಒಳಗಾಗದೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ದಿಶಾ ಸಮಿತಿ ಮಾಜಿ ಸದಸ್ಯ ಶಿವಯ್ಯ ಸ್ವಾಮಿ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಡೆದ ಅಕ್ರಮದ ಕುರಿತು ದಿಶಾ ಸಮಿತಿಯಲ್ಲಿ ಬಿಜೆಪಿ ಕಾಂಗ್ರೆಸ್ ಸೇರಿದಂತೆ ಎಲ್ಲರೂ ಪಕ್ಷಭೇದ ಮರೆತು ಇದರ ವಿರುದ್ಧ ಧ್ವನಿ ಎತ್ತಿ ತನಿಖೆಗೆ ಆಗ್ರಹಿಸಿದ್ದರು. ಈಗ ತನಿಖಾ ವರದಿ ಬಂದಿರುವುದರಿಂದ ವಿಳಂಬ ಮಾಡದೆ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.