ಸದ್ಯ ಕೋವಿಡ್ ನಿಯಂತ್ರಣದಲ್ಲಿರುವ ಕಾರಣ ಹರಕೆ ತೀರಿಸುತ್ತಿದ್ದಾರೆ ಎಂದು ಗ್ರಾಮದ ಶ್ರೀನಿವಾಸ್ ತಿಳಿಸಿದರು. 2012-13 ರ ಸಾಲಿನಲ್ಲಿಯೂ ಸಹ ಮಹಾರಾಷ್ಟ್ರದ ತುಳಜಾಪುರದ ಭವಾನಿ ದೇವಸ್ಥಾನದವರೆಗೂ ಶಶಿಕಲಾ ಮಾತಾ ಅವರು ಉರುಳು ಸೇವೆ ಮಾಡಿದ್ದಾರೆ ಎಂದು ಶ್ರೀನಿವಾಸ್ ತಿಳಿಸಿದರು. ಹುಮನಾಬಾದ್ ತಾಲ್ಲೂಕಿನ ಹಳ್ಳೀಖೇಡ್ ಕೆ. ಪಟ್ಟಣದಿಂದ 11ನೇ ದಿನದ ಉರುಳು ಸೇವೆಯ ಹರಕೆಯನ್ನು ಸೋಮವಾರ ಮತ್ತೆ ಪ್ರಾರಂಭಿಸಿದ್ದಾರೆ.