<p><strong>ಬೀದರ್:</strong> ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತದಿಂದ ನಗರದ ಬಹಮನಿ ಕೋಟೆಯಲ್ಲಿ ಭಾನುವಾರ ವಿಶ್ವ ಪಾರಂಪರಿಕ ಸಪ್ತಾಹ ಆಚರಿಸಲಾಯಿತು.</p>.<p>ನಗರದ ಮಹಾತ್ಮ ಜ್ಯೋತಿಬಾ ಫುಲೆ ಹಿರಿಯ ನಾಗರಿಕರ ವೃದ್ಧಾಶ್ರಮದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಗೌರವಿಸಿ ಕೋಟೆಯ ವಿವಿಧ ಸ್ಮಾರಕಗಳನ್ನು ಪರಿಚಯಿಸಿ ಅವುಗಳ ಮಹತ್ವ ಸಾರಿದರು. ರಾಜರ ಸ್ನಾನಗೃಹ, ಸೋಲಹ ಕಂಬ ಮಸೀದಿ, ತರ್ಕಿಸ್ ಮಹಲ್ ಸೇರಿದಂತೆ ಇತರೆ ಸ್ಮಾರಕಗಳನ್ನು ತೋರಿಸಿದರು.</p>.<p>‘ಹಿರಿಯ ನಾಗರಿಕರಿಗೆ ಸಾಮಾನ್ಯವಾಗಿ ಕೋಟೆ ನೋಡುವುದು ಬಹಳ ಕಷ್ಟದ ಕೆಲಸ. ವಿಶ್ವ ಪಾರಂಪರಿಕ ಸಪ್ತಾಹದ ಅಂಗವಾಗಿ ಅವರಿಗೆ ಈ ಅವಕಾಶ ಕಲ್ಪಿಸಿಕೊಡಲಾಗಿದೆ. ಎಲ್ಲರಂತೆ ಅವರು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯ ಸ್ಮಾರಕಗಳನ್ನು ಕಣ್ತುಂಬಿಕೊಳ್ಳಲು ಎನ್ನುವುದು ಇದರ ಉದ್ದೇಶ’ ಎಂದು ಹಂಪಿ ವೃತ್ತದ ಅಡಿಯಲ್ಲಿ ಬರುವ ಬೀದರ್ ಉಪ ವೃತ್ತದ ಉಸ್ತುವಾರಿ ಅನಿರುದ್ಧ್ ದೇಸಾಯಿ ತಿಳಿಸಿದರು.</p>.<p>‘ಈ ವರ್ಷ ಪುರಾತತ್ವ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತದಿಂದ ಒಟ್ಟು ಏಳು ಪ್ರಮುಖ ಸ್ಥಳಗಳಲ್ಲಿ ವಿಶ್ವ ಪಾರಂಪರಿಕ ಸಪ್ತಾಹ ಆಚರಿಸಲಾಗುತ್ತಿದ್ದು, ಬೀದರ್ ಕೋಟೆಯಿಂದ ಚಾಲನೆ ಸಿಕ್ಕಿರುವುದು ಸಂತಸದ ಸಂಗತಿ’ ಎಂದು ಹೇಳಿದರು.</p>.<p>ಕಾರ್ಯಕ್ರಮಕ್ಕೆ ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ ಚಾಲನೆ ನೀಡಿದರು. ಹಂಪಿ ವೃತ್ತ ಸೂಪರಿಟೆಂಡೆಂಟ್ ನಿಹಿಲ್ದಾಸ್, ಪುರಾತತ್ವ ಇಲಾಖೆಯ ಅಧಿಕಾರಿ ಮಹಮ್ಮದ್ ನಜೀರ್ ಹುಸೇನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತದಿಂದ ನಗರದ ಬಹಮನಿ ಕೋಟೆಯಲ್ಲಿ ಭಾನುವಾರ ವಿಶ್ವ ಪಾರಂಪರಿಕ ಸಪ್ತಾಹ ಆಚರಿಸಲಾಯಿತು.</p>.<p>ನಗರದ ಮಹಾತ್ಮ ಜ್ಯೋತಿಬಾ ಫುಲೆ ಹಿರಿಯ ನಾಗರಿಕರ ವೃದ್ಧಾಶ್ರಮದವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಗೌರವಿಸಿ ಕೋಟೆಯ ವಿವಿಧ ಸ್ಮಾರಕಗಳನ್ನು ಪರಿಚಯಿಸಿ ಅವುಗಳ ಮಹತ್ವ ಸಾರಿದರು. ರಾಜರ ಸ್ನಾನಗೃಹ, ಸೋಲಹ ಕಂಬ ಮಸೀದಿ, ತರ್ಕಿಸ್ ಮಹಲ್ ಸೇರಿದಂತೆ ಇತರೆ ಸ್ಮಾರಕಗಳನ್ನು ತೋರಿಸಿದರು.</p>.<p>‘ಹಿರಿಯ ನಾಗರಿಕರಿಗೆ ಸಾಮಾನ್ಯವಾಗಿ ಕೋಟೆ ನೋಡುವುದು ಬಹಳ ಕಷ್ಟದ ಕೆಲಸ. ವಿಶ್ವ ಪಾರಂಪರಿಕ ಸಪ್ತಾಹದ ಅಂಗವಾಗಿ ಅವರಿಗೆ ಈ ಅವಕಾಶ ಕಲ್ಪಿಸಿಕೊಡಲಾಗಿದೆ. ಎಲ್ಲರಂತೆ ಅವರು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯ ಸ್ಮಾರಕಗಳನ್ನು ಕಣ್ತುಂಬಿಕೊಳ್ಳಲು ಎನ್ನುವುದು ಇದರ ಉದ್ದೇಶ’ ಎಂದು ಹಂಪಿ ವೃತ್ತದ ಅಡಿಯಲ್ಲಿ ಬರುವ ಬೀದರ್ ಉಪ ವೃತ್ತದ ಉಸ್ತುವಾರಿ ಅನಿರುದ್ಧ್ ದೇಸಾಯಿ ತಿಳಿಸಿದರು.</p>.<p>‘ಈ ವರ್ಷ ಪುರಾತತ್ವ ಸರ್ವೇಕ್ಷಣ ಇಲಾಖೆ ಹಂಪಿ ವೃತ್ತದಿಂದ ಒಟ್ಟು ಏಳು ಪ್ರಮುಖ ಸ್ಥಳಗಳಲ್ಲಿ ವಿಶ್ವ ಪಾರಂಪರಿಕ ಸಪ್ತಾಹ ಆಚರಿಸಲಾಗುತ್ತಿದ್ದು, ಬೀದರ್ ಕೋಟೆಯಿಂದ ಚಾಲನೆ ಸಿಕ್ಕಿರುವುದು ಸಂತಸದ ಸಂಗತಿ’ ಎಂದು ಹೇಳಿದರು.</p>.<p>ಕಾರ್ಯಕ್ರಮಕ್ಕೆ ಉಪವಿಭಾಗಾಧಿಕಾರಿ ಲವೀಶ್ ಒರ್ಡಿಯಾ ಚಾಲನೆ ನೀಡಿದರು. ಹಂಪಿ ವೃತ್ತ ಸೂಪರಿಟೆಂಡೆಂಟ್ ನಿಹಿಲ್ದಾಸ್, ಪುರಾತತ್ವ ಇಲಾಖೆಯ ಅಧಿಕಾರಿ ಮಹಮ್ಮದ್ ನಜೀರ್ ಹುಸೇನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>