<p><strong>ಹುಲಸೂರ</strong>: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಕಿಡ್ನಿ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಕಿಡ್ನಿಯ ಆರೋಗ್ಯದ ಮಹತ್ವ ಹಾಗೂ ಅದನ್ನು ಕಾಪಾಡಿಕೊಳ್ಳುವ ಕುರಿತು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮಾಹಿತಿ ನೀಡಿದರು.</p>.<p>ಆಡಳಿತ ವೈದ್ಯಾಧಿಕಾರಿ ಡಾ.ಶಶಿಕಾಂತ ಕಾನ್ನಡೆ ಮಾತನಾಡಿ, ‘ಕಿಡ್ನಿ ಮಾನವ ದೇಹದ ಅತ್ಯಂತ ಪ್ರಮುಖ ಅಂಗವಾಗಿದ್ದು, ಅದರ ಆರೋಗ್ಯ ಕಾಪಾಡಿಕೊಳ್ಳಲು ಸಮತೋಲನ ಆಹಾರ ಸೇವನೆ, ಸಾಕಷ್ಟು ನೀರು ಕುಡಿಯುವುದು, ನಿಯಮಿತ ವ್ಯಾಯಾಮ ಮಾಡುವುದು ಅಗತ್ಯ ಎಂದು ತಿಳಿಸಿದರು.</p>.<p>ಕಿಡ್ನಿ ಕಾಯಿಲೆಗಳು ಆರಂಭಿಕ ಹಂತದಲ್ಲೇ ಪತ್ತೆಯಾದರೆ ಚಿಕಿತ್ಸೆ ಸುಲಭವಾಗುತ್ತದೆ. ಆದ್ದರಿಂದ ಜನರು ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸಲಹೆ ನೀಡಿದರು.</p>.<p>ಈ ವೇಳೆ ಕಿಡ್ನಿ ರೋಗಗಳ ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಹಾಗೂ ಆರೋಗ್ಯಕರ ಜೀವನಶೈಲಿ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಹುಮ್ನಾಬಾದೆ, ಸಂತೋಷ ಕಾಳ್ಳೆ, ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳಾದ ಪ್ರಣಾಮ, ಸಚಿನ್, ಶಿವಶಾಂತ, ರೋಹಿತ ಸೇರಿದಂತೆ ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಗುರುವಾರ ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಕಿಡ್ನಿ ಆರೋಗ್ಯ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.</p>.<p>ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಕಿಡ್ನಿಯ ಆರೋಗ್ಯದ ಮಹತ್ವ ಹಾಗೂ ಅದನ್ನು ಕಾಪಾಡಿಕೊಳ್ಳುವ ಕುರಿತು ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮಾಹಿತಿ ನೀಡಿದರು.</p>.<p>ಆಡಳಿತ ವೈದ್ಯಾಧಿಕಾರಿ ಡಾ.ಶಶಿಕಾಂತ ಕಾನ್ನಡೆ ಮಾತನಾಡಿ, ‘ಕಿಡ್ನಿ ಮಾನವ ದೇಹದ ಅತ್ಯಂತ ಪ್ರಮುಖ ಅಂಗವಾಗಿದ್ದು, ಅದರ ಆರೋಗ್ಯ ಕಾಪಾಡಿಕೊಳ್ಳಲು ಸಮತೋಲನ ಆಹಾರ ಸೇವನೆ, ಸಾಕಷ್ಟು ನೀರು ಕುಡಿಯುವುದು, ನಿಯಮಿತ ವ್ಯಾಯಾಮ ಮಾಡುವುದು ಅಗತ್ಯ ಎಂದು ತಿಳಿಸಿದರು.</p>.<p>ಕಿಡ್ನಿ ಕಾಯಿಲೆಗಳು ಆರಂಭಿಕ ಹಂತದಲ್ಲೇ ಪತ್ತೆಯಾದರೆ ಚಿಕಿತ್ಸೆ ಸುಲಭವಾಗುತ್ತದೆ. ಆದ್ದರಿಂದ ಜನರು ಸಮಯಕ್ಕೆ ಸರಿಯಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಸಲಹೆ ನೀಡಿದರು.</p>.<p>ಈ ವೇಳೆ ಕಿಡ್ನಿ ರೋಗಗಳ ಲಕ್ಷಣಗಳು, ತಡೆಗಟ್ಟುವ ಕ್ರಮಗಳು ಹಾಗೂ ಆರೋಗ್ಯಕರ ಜೀವನಶೈಲಿ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.</p>.<p>ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಹುಮ್ನಾಬಾದೆ, ಸಂತೋಷ ಕಾಳ್ಳೆ, ಡಯಾಲಿಸಿಸ್ ಕೇಂದ್ರದ ಸಿಬ್ಬಂದಿಗಳಾದ ಪ್ರಣಾಮ, ಸಚಿನ್, ಶಿವಶಾಂತ, ರೋಹಿತ ಸೇರಿದಂತೆ ವೈದ್ಯರು, ಆರೋಗ್ಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>