<p>ಭಾಲ್ಕಿ: ‘ಮಹಾಜ್ಞಾನಿಯಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿನ ಜ್ಞಾನ ಸೂರ್ಯ ಆಗಿದ್ದರು’ ಎಂದು ಹಿರಿಯ ಸಾಹಿತಿ ಎಸ್.ಎಂ.ಜನವಾಡಕರ್ ಹೇಳಿದರು.</p>.<p>ತಾಲ್ಲೂಕಿನ ಹಾಲಹಳ್ಳಿ ಗ್ರಾಮದ ಬೀದರ್ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಮ್ಮ ದೇಶದ ಘನತೆಯನ್ನು ಇಡೀ ಜಗತ್ತಿಗೆ ಪರಿಚಯಿಸಿದ ಶ್ರೇಯಸ್ಸು ಅಂಬೇಡ್ಕರ್ಗೆ ಸಲ್ಲುತ್ತದೆ. ಅವರು ತಮ್ಮ ಸತತ ಕಠಿಣ ಪರಿಶ್ರಮ, ಅಪಾರ ಜ್ಞಾನ, ಹೋರಾಟದಿಂದ ಇಡೀ ಜಗತ್ತಿಗೆ ಮಾದರಿಯಾಗಿದ್ದರು ಎಂದು ತಿಳಿಸಿದರು.</p>.<p>ಸಿಂಡಿಕೇಟ್ ಸದಸ್ಯ ಶಾಂತಲಿಂಗ ಸಾವಳಗಿ ಮಾತನಾಡಿ, ‘ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರದ ಆಡಳಿತ ಸುಸೂತ್ರವಾಗಿ ನಡೆದಿರುವುದು ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದ’ ಎಂದರು.</p>.<p>ಕುಲಪತಿ ಬಿ.ಎಸ್.ಬಿರಾದಾರ ಮಾತನಾಡಿ, ‘ದೀನ–ದುರ್ಬಲರಿಗೆ ಸ್ವಾತಂತ್ರ್ಯ ಹಾಗೂ ಸಮಾನತೆ ದೊರೆತದ್ದು ಅಂಬೇಡ್ಕರರು ನೀಡಿದ ಸಂವಿಧಾನದಿಂದ. ಸಂವಿಧಾನದಿಂದಾಗಿ ನಮಗೆ ಶಿಕ್ಷಣ, ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ, ಮತದಾನ ಸೇರಿದಂತೆ ಇತರ ಹಕ್ಕುಗಳು ನಮಗೆ ದೊರೆತಿವೆ’ ಎಂದು ಹೇಳಿದರು.</p>.<p>ಆಡಳಿತ ಕುಲಸಚಿವೆ ಸುರೇಖಾ, ಸಿಂಡಿಕೇಟ್ ಸದಸ್ಯರಾದ ಶಿವನಾಥ ಎಂ.ಪಾಟೀಲ, ವೈಷ್ಣವಿ ಪಾಟೀಲ, ಮೌಲ್ಯಮಾಪನ ಕುಲಸಚಿವ ಪರಮೇಶ್ವರ ನಾಯ್ಕ ಟಿ., ವಿಶೇಷಾಧಿಕಾರಿ ರವೀಂದ್ರನಾಥ.ವಿ.ಗಬಾಡಿ, ಪಂಚಶೀಲ, ಸುಹಾಸಿನಿ ಟಿ., ಅರುಣಕುಮಾರ ಬೇಂದ್ರೆ, ಆನಂದ ಚಾಕೂರೆ, ರಾಮಚಂದ್ರ ಗಣಾಪೂರ ಹಾಜರಿದ್ದರು.</p>.<p>ಕಾರ್ಯಕ್ರಮಕ್ಕೂ ಮೊದಲು ವಿಶ್ವವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಆಣದೂರವರೆಗೆ ಪಾದಯಾತ್ರೆ ಕೈಗೊಂಡು ಅಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಪೂಜೆ ಸಲ್ಲಿಸಿದರು. ನಂತರ ಪ್ರತಿಮೆಯ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆಯನ್ನು ಪಠಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾಲ್ಕಿ: ‘ಮಹಾಜ್ಞಾನಿಯಾಗಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರು ಜಗತ್ತಿನ ಜ್ಞಾನ ಸೂರ್ಯ ಆಗಿದ್ದರು’ ಎಂದು ಹಿರಿಯ ಸಾಹಿತಿ ಎಸ್.ಎಂ.ಜನವಾಡಕರ್ ಹೇಳಿದರು.</p>.<p>ತಾಲ್ಲೂಕಿನ ಹಾಲಹಳ್ಳಿ ಗ್ರಾಮದ ಬೀದರ್ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಮ್ಮ ದೇಶದ ಘನತೆಯನ್ನು ಇಡೀ ಜಗತ್ತಿಗೆ ಪರಿಚಯಿಸಿದ ಶ್ರೇಯಸ್ಸು ಅಂಬೇಡ್ಕರ್ಗೆ ಸಲ್ಲುತ್ತದೆ. ಅವರು ತಮ್ಮ ಸತತ ಕಠಿಣ ಪರಿಶ್ರಮ, ಅಪಾರ ಜ್ಞಾನ, ಹೋರಾಟದಿಂದ ಇಡೀ ಜಗತ್ತಿಗೆ ಮಾದರಿಯಾಗಿದ್ದರು ಎಂದು ತಿಳಿಸಿದರು.</p>.<p>ಸಿಂಡಿಕೇಟ್ ಸದಸ್ಯ ಶಾಂತಲಿಂಗ ಸಾವಳಗಿ ಮಾತನಾಡಿ, ‘ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರದ ಆಡಳಿತ ಸುಸೂತ್ರವಾಗಿ ನಡೆದಿರುವುದು ಅಂಬೇಡ್ಕರ್ ಅವರು ನೀಡಿದ ಸಂವಿಧಾನದಿಂದ’ ಎಂದರು.</p>.<p>ಕುಲಪತಿ ಬಿ.ಎಸ್.ಬಿರಾದಾರ ಮಾತನಾಡಿ, ‘ದೀನ–ದುರ್ಬಲರಿಗೆ ಸ್ವಾತಂತ್ರ್ಯ ಹಾಗೂ ಸಮಾನತೆ ದೊರೆತದ್ದು ಅಂಬೇಡ್ಕರರು ನೀಡಿದ ಸಂವಿಧಾನದಿಂದ. ಸಂವಿಧಾನದಿಂದಾಗಿ ನಮಗೆ ಶಿಕ್ಷಣ, ಸಮಾನತೆ, ಅಭಿವ್ಯಕ್ತಿ ಸ್ವಾತಂತ್ರ್ಯ, ಮತದಾನ ಸೇರಿದಂತೆ ಇತರ ಹಕ್ಕುಗಳು ನಮಗೆ ದೊರೆತಿವೆ’ ಎಂದು ಹೇಳಿದರು.</p>.<p>ಆಡಳಿತ ಕುಲಸಚಿವೆ ಸುರೇಖಾ, ಸಿಂಡಿಕೇಟ್ ಸದಸ್ಯರಾದ ಶಿವನಾಥ ಎಂ.ಪಾಟೀಲ, ವೈಷ್ಣವಿ ಪಾಟೀಲ, ಮೌಲ್ಯಮಾಪನ ಕುಲಸಚಿವ ಪರಮೇಶ್ವರ ನಾಯ್ಕ ಟಿ., ವಿಶೇಷಾಧಿಕಾರಿ ರವೀಂದ್ರನಾಥ.ವಿ.ಗಬಾಡಿ, ಪಂಚಶೀಲ, ಸುಹಾಸಿನಿ ಟಿ., ಅರುಣಕುಮಾರ ಬೇಂದ್ರೆ, ಆನಂದ ಚಾಕೂರೆ, ರಾಮಚಂದ್ರ ಗಣಾಪೂರ ಹಾಜರಿದ್ದರು.</p>.<p>ಕಾರ್ಯಕ್ರಮಕ್ಕೂ ಮೊದಲು ವಿಶ್ವವಿದ್ಯಾಲಯದ ಸಿಬ್ಬಂದಿ, ವಿದ್ಯಾರ್ಥಿಗಳು ಆಣದೂರವರೆಗೆ ಪಾದಯಾತ್ರೆ ಕೈಗೊಂಡು ಅಲ್ಲಿನ ಅಂಬೇಡ್ಕರ್ ಪ್ರತಿಮೆಗೆ ಪೂಜೆ ಸಲ್ಲಿಸಿದರು. ನಂತರ ಪ್ರತಿಮೆಯ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆಯನ್ನು ಪಠಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>