ಆಸ್ಪತ್ರೆಯ ನಿರ್ಮಾಣದ ಸಂದರ್ಭದಲ್ಲೇ ಆರೋಗ್ಯ ಇಲಾಖೆಯ ಅಧಿಕಾರಿಗಳು ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ನೇಮಕಾತಿಗೆ ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳಬೇಕಿತ್ತು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಳೆದ ವರ್ಷ ಆಸ್ಪತ್ರೆ ಉದ್ಘಾಟನೆಯಾಗಿರಲಿಲ್ಲ. ರಾಜ್ಯ ಮಟ್ಟದ ಪಶು ಮೇಳದ ಸಂದರ್ಭದಲ್ಲಿ ಆಸ್ಪತ್ರೆಯನ್ನು ಉದ್ಘಾಟಿಸಲು ನಿರ್ಧರಿಸಿ ಅಂತಿಮ ಕ್ಷಣದಲ್ಲಿ ಕೈಬಿಡಲಾಯಿತು. ಈಗ ಮತ್ತೆ ಉದ್ಘಾಟನೆಗೆ ಸಜ್ಜುಗೊಳಿಸಲಾಗಿದೆ.