<p><strong>ಬೀದರ್: </strong>ಇಲ್ಲಿಯ ಗೋರನಳ್ಳಿಯ ಸರ್ವೇ ಸಂಖ್ಯೆ 22/1 ರ ಲೇಔಟ್ಗೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಅಭಯಕುಮಾರ ಅವರು ಬಿ.ಎಸ್. ಯಡಿಯೂರಪ್ಪ ಬಡಾವಣೆ ಎಂದು ಉಲ್ಲೇಖಿಸಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>ಆಯುಕ್ತರು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಚರ್ಚೆಯಾದ ವಿಷಯ ಬಿಟ್ಟು ಜನತೆಗೆ ತಪ್ಪು ಮಾಹಿತಿ ಕೊಡುತ್ತಿರುವುದು ಖಂಡನಾರ್ಹ ಎಂದು ಹೇಳಿದ್ದಾರೆ.</p>.<p>ಸಭೆಯಲ್ಲಿ ಗೋರನಳ್ಳಿಯ ಸರ್ವೇ ಸಂಖ್ಯೆ 22/1 ರ ವಸತಿ ವಿನ್ಯಾಸದಲ್ಲಿ ಗಣೇಶ ವಿಸರ್ಜನೆಗೆ ಹೊಂಡ ನಿರ್ಮಾಣ ಮಾಡಲು ನಿರ್ಧಾರ ತೆಗೆದುಕೊಂಡಿರುವುದು ಸರಿಯಾಗಿದೆ. ಆದರೆ, ಜನವರಿ 4 ರಂದು ನಡೆದಿದ್ದ ಸಭೆಯಲ್ಲಿ ನಾನು ಹಾಗೂ ಶಾಸಕ ರಹೀಂಖಾನ್ ಲೇಔಟ್ಗೆ ಯಡಿಯೂರಪ್ಪ ಅವರ ಹೆಸರು ಇಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದೇವು. ಅದಾಗಿಯೂ ಪ್ರೊಸಿಡಿಂಗ್ನಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬರೆಯಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.</p>.<p>ಜೂನ್ 17 ರಂದು ನಡೆದ ಸಭೆಯಲ್ಲೂ ನಾನು ಹಾಗೂ ರಹೀಂಖಾನ್ ಏಕೆ ಈ ರೀತಿ ಪ್ರೊಸಿಡಿಂಗ್ ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದೇವು. ವಿಷಯವನ್ನು ಮುಂದಿನ ಸಭೆಯಲ್ಲಿ ಚರ್ಚಿಸಲು ನಿರ್ಣಯಿಸಲಾಗಿತ್ತು. ಆದರೆ, ಆಯುಕ್ತರು ಪತ್ರಿಕಾ ಹೇಳಿಕೆಯಲ್ಲಿ ಬಿ.ಎಸ್. ಯಡಿಯೂರಪ್ಪ ಬಡಾವಣೆ ಎಂದು ಉಲ್ಲೇಖಿಸಿ ಅಧಿಕಾರ ದುರುಪಯೋಗ ಪಡೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ಸಭೆಯಲ್ಲಿ ಪಾಪನಾಶ ಕೆರೆ ಅಭಿವೃದ್ಧಿ ಜತೆಗೆ ಹಳ್ಳದಕೇರಿ(ಶಾಹೀನ್ ಕಾಲೇಜು ಎದುರುಗಡೆ)ಯ ಕೆರೆಯನ್ನೂ ಅಭಿವೃದ್ಧಿಪಡಿಸಲು ಪುನರ್ ಸರ್ವೇಗೆ ನಿರ್ಧರಿಸಲಾಗಿದೆ. ಆಯುಕ್ತರು ಅಭಿವೃದ್ಧಿ ವಿಷಯ ಬಿಟ್ಟು ರಾಜಕಾರಣ ಮಾಡಲು ಹೊರಟಿರುವುದು ವಿಷಾದನೀಯ. ಸಂಬಂಧಪಟ್ಟವರು ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಇಲ್ಲಿಯ ಗೋರನಳ್ಳಿಯ ಸರ್ವೇ ಸಂಖ್ಯೆ 22/1 ರ ಲೇಔಟ್ಗೆ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಅಭಯಕುಮಾರ ಅವರು ಬಿ.ಎಸ್. ಯಡಿಯೂರಪ್ಪ ಬಡಾವಣೆ ಎಂದು ಉಲ್ಲೇಖಿಸಿದ್ದಕ್ಕೆ ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>.<p>ಆಯುಕ್ತರು ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಚರ್ಚೆಯಾದ ವಿಷಯ ಬಿಟ್ಟು ಜನತೆಗೆ ತಪ್ಪು ಮಾಹಿತಿ ಕೊಡುತ್ತಿರುವುದು ಖಂಡನಾರ್ಹ ಎಂದು ಹೇಳಿದ್ದಾರೆ.</p>.<p>ಸಭೆಯಲ್ಲಿ ಗೋರನಳ್ಳಿಯ ಸರ್ವೇ ಸಂಖ್ಯೆ 22/1 ರ ವಸತಿ ವಿನ್ಯಾಸದಲ್ಲಿ ಗಣೇಶ ವಿಸರ್ಜನೆಗೆ ಹೊಂಡ ನಿರ್ಮಾಣ ಮಾಡಲು ನಿರ್ಧಾರ ತೆಗೆದುಕೊಂಡಿರುವುದು ಸರಿಯಾಗಿದೆ. ಆದರೆ, ಜನವರಿ 4 ರಂದು ನಡೆದಿದ್ದ ಸಭೆಯಲ್ಲಿ ನಾನು ಹಾಗೂ ಶಾಸಕ ರಹೀಂಖಾನ್ ಲೇಔಟ್ಗೆ ಯಡಿಯೂರಪ್ಪ ಅವರ ಹೆಸರು ಇಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದೇವು. ಅದಾಗಿಯೂ ಪ್ರೊಸಿಡಿಂಗ್ನಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬರೆಯಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.</p>.<p>ಜೂನ್ 17 ರಂದು ನಡೆದ ಸಭೆಯಲ್ಲೂ ನಾನು ಹಾಗೂ ರಹೀಂಖಾನ್ ಏಕೆ ಈ ರೀತಿ ಪ್ರೊಸಿಡಿಂಗ್ ಮಾಡಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದೇವು. ವಿಷಯವನ್ನು ಮುಂದಿನ ಸಭೆಯಲ್ಲಿ ಚರ್ಚಿಸಲು ನಿರ್ಣಯಿಸಲಾಗಿತ್ತು. ಆದರೆ, ಆಯುಕ್ತರು ಪತ್ರಿಕಾ ಹೇಳಿಕೆಯಲ್ಲಿ ಬಿ.ಎಸ್. ಯಡಿಯೂರಪ್ಪ ಬಡಾವಣೆ ಎಂದು ಉಲ್ಲೇಖಿಸಿ ಅಧಿಕಾರ ದುರುಪಯೋಗ ಪಡೆಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p>ಸಭೆಯಲ್ಲಿ ಪಾಪನಾಶ ಕೆರೆ ಅಭಿವೃದ್ಧಿ ಜತೆಗೆ ಹಳ್ಳದಕೇರಿ(ಶಾಹೀನ್ ಕಾಲೇಜು ಎದುರುಗಡೆ)ಯ ಕೆರೆಯನ್ನೂ ಅಭಿವೃದ್ಧಿಪಡಿಸಲು ಪುನರ್ ಸರ್ವೇಗೆ ನಿರ್ಧರಿಸಲಾಗಿದೆ. ಆಯುಕ್ತರು ಅಭಿವೃದ್ಧಿ ವಿಷಯ ಬಿಟ್ಟು ರಾಜಕಾರಣ ಮಾಡಲು ಹೊರಟಿರುವುದು ವಿಷಾದನೀಯ. ಸಂಬಂಧಪಟ್ಟವರು ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>